ಗದಗ | ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Date:

Advertisements

ನಾವು ಈಗ 78ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸುತ್ತಿದ್ದೇವೆ. ಆದರೆ ನಮಗೆ ಸ್ವಾತಂತ್ರ್ಯ ಸಿಕ್ಕಿದೆಯಾ ಎಂದು ಯೋಚಿಸಿದರೆ ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ ಎಚ್‌ ಪೂಜಾರ್‌ ಹೇಳಿದರು.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ʼನಮ್ಮ ಕರ್ನಾಟಕ ರಕ್ಷಣಾ ವೇದಿಕೆʼಯಿಂದ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯ ದೊರಕಿದೆ. ಆದರೆ ನಮ್ಮ ಹಕ್ಕುಗಳಿಗಾಗಿ ಇನ್ನೂ ಹೋರಾಟ ಮಾಡುತ್ತ ಬಂದಿದ್ದೇವೆ. ಇದು ವಿಪರ್ಯಾಸ ಸಂಗತಿ” ಎಂದರು.

ಅತಿಥಿಯಾಗಿ ಆಗಮಿಸಿದ್ದ ಸಾರ್ವಜನಿಕರ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ್ ನವಲಗುಂದ ಮಾತನಾಡಿ, “ಅನೇಕ ತ್ಯಾಗ ಬಲಿದಾನಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಈಗಿನ ವಾಸ್ತವ್ಯದ ಸಂದರ್ಭದಲ್ಲಿ ನೋಡಿದರೆ ಸ್ವಾತಂತ್ರ್ಯ ಯಾರಿಗೆ ಸಿಕ್ಕಿದೆ ಎಂದು ಆಲೋಚಿಸಬೇಕಿದೆ. ಶೋಷಿತ ಸಮುದಾಯಗಳು ಇಂದಿಗೂ ಸ್ವಾತಂತ್ರ್ಯ ಪಡೆದುಕೊಂಡಿಲ್ಲ. ಇವತ್ತಿಗೂ ಅವರು ಸ್ವಂತ ಬದುಕು ಕಟ್ಟಿಕೊಳ್ಳದ ಕೆಳಮಟ್ಟದಲ್ಲಿ ಬದಕುತ್ತಿದ್ದಾರೆ. ಈ ಸಮಾಜದಲ್ಲಿ ಯಾವುದೇ ಸಮುದಾಯ ಇರಲಿ, ಎಲ್ಲರೂ ಸಮಾನರು. ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಶೋಷಿತ ಸಮುದಾಯಗಳು ಮುನ್ನೆಲೆಗೆ ಬಂದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ದೊರೆಯುತ್ತದೆ” ಎಂದು ಅಭಿಪ್ರಾಯಪಟ್ಟರು. ಜತೆಗೆ ಮುಂಡರಗಿ ತಾಲೂಕಿನ ಅಭಿವೃದ್ಧಿ ಹಿನ್ನೆಡೆ ಕುರಿತು, ಸಮಗ್ರವಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisements

ಭೋವಿ ಸಮಾಜದ ತಾಲೂಕು ಅಧ್ಯಕ್ಷ ರಾಘವೇಂದ್ರ ನರೇಗಲ್ ಅವರು ಸ್ವಾತಂತ್ರ್ಯ ಹೋರಾಟಗಾರರು ನಡೆದುಬಂದ ಹಾದಿ ಬಗ್ಗೆ, ಪ್ರಜಾಪ್ರಭುತ್ವದ ಕರ್ತವ್ಯದ ಬಗ್ಗೆ, ಸಮಗ್ರ ಆಡಳಿತದ ಸುಧಾರಣೆ ಕುರಿತು ಸಂಕ್ಷಿಪ್ತವಾಗಿ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಜಂತ್ಲಿ-ಶಿರೂರದ ಪ್ರಸಿದ್ಧ ಜಾನಪದ ಕಲಾವಿದ ಗವಿಸಿದ್ದಯ್ಯ ಹಳ್ಳಿಕೇರಿಮಠ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯ ಲೇಖಕರ ಪುಸ್ತಕಗಳನ್ನು ಖರೀದಿಸುವಂತೆ ಲೇಖಕರ ವೇದಿಕೆಯಿಂದ ಮನವಿ

ಕಾರ್ಯಕ್ರಮದಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ಅಲೆಮಾರಿ ಗೋಂದಳಿ ಸಮಾಜದ ಅಧ್ಯಕ್ಷ ವಿಠ್ಠಲ್‌ ಗಣಾಚಾರಿ, ಮೌಲಾನ್ ಆಜ಼ಾದ್ ಫೌಂಡೇಶನ್ ಟ್ರಸ್ಟ್ ಸಂಸ್ಥಾಪಕ ಇಸ್ಮಾಯಿಲ್ ನಮಾಜಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗವಿಸಿದ್ದಪ್ಪ ಹ್ಯಾಟಿ, ಹಿರಿಯ ದಲಿತ ಹೋರಾಟಗಾರ ಹನುಮಂತ ಪೂಜಾರ, ಉಮೇಶ್ ಕಲಾಲ್ ಹಾಗೂ ಮುಂಡರಗಿ ತಾಲೂಕಿನ ಸಮಸ್ತ ಗುರು ಹಿರಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X