ಗದಗ | ಕೂಸಿನ ಮನೆ ಯೋಜನೆ – ಗ್ರಾಮೀಣ ಮಕ್ಕಳಿಗೆ ತಾಯಿಯಾಗುವ ಸೌಭಾಗ್ಯ ಆರೈಕೆದಾರರಿಗೆ ದೊರಕಿದೆ: ರವಿ ಎ.ಎನ್

Date:

Advertisements

ಕೂಸಿನ ಮನೆ ಕಾರ್ಯಕ್ರಮವು ಮನರೇಗಾ ಯೋಜನೆಯ ಒಂದು ಭಾಗವಾಗಿದೆ. ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ ಮಕ್ಕಳ ಲಾಲನೆ-ಪಾಲನೆಗೆ ರಾಜ್ಯ ಸರ್ಕಾರದ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಗ್ರಾಮೀಣ ಮಕ್ಕಳ ಲಾಲನೆ, ಪಾಲನೆ ಮಾಡುವ ಮೂಲಕ ಆ ಮಕ್ಕಳಿಗೆ ತಾಯಿಯಾಗಿ ಕೆಲಸ ಮಾಡೋ ಸೌಭಾಗ್ಯ ಅರೈಕೆದಾರರಿಗೆ ದೊರೆತಿದೆ ಎಂದು ರೋಣ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಎ.ಎನ್ ತಿಳಿಸಿದ್ದಾರೆ.

ಗದಗ ಜಿಲ್ಲೆಯ ರೋಣದಲ್ಲಿ ತಾಲೂಕು ಪಂಚಾಯಇ ಆಯೋಜಿಸಿದ್ದ ಕೂಸಿನ ಮನೆ ಆರೈಕೆದಾರರಿಗೆ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. “ಕೂಸಿನ ಮನೆ ಯೋಜನೆಯು ಸಹ ಮಹಿಳಾ ಸಭಲೀಕರಣ ಮಾಡುವ ದೃಷ್ಟಿಯಿಂದ ಆರಂಭವಾಗಿದೆ. ಗ್ರಾಮಗಳ ಬಂಧುಗಳು, ನೆರೆಹೊರೆಯವರು, ಗ್ರಾಮಸ್ಥರು ಗ್ರಾಮದಲ್ಲಿ ದುಡಿಯಲಿಕ್ಕೆ ಹೋಗುತ್ತಾರೆ ಆ ಸಂದರ್ಭದಲ್ಲಿ ಆರೈಕೆದಾರರು ಅವರ ಮಕ್ಕಳನ್ನು ಆರೈಕೆ ಮಾಡುವ ಕೆಲಸ ಮಾಡಬೇಕಾಗುತ್ತದೆ. ಆರೈಕೆದಾರರಿಗೂ ಮನರೇಗಾ ಯೋಜನೆಯಡಿ ವೇತನ ನೀಡಲಾಗುತ್ತದೆ” ಎಂದು ಹೇಳಿದರು.

“ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಆಹಾರವನ್ನು ಕೊಟ್ಟು ಆರೈಕೆ ಮಾಡಬೇಕು. ಇದರಿಂದಾಗಿ ಮಕ್ಕಳ ಪೌಷ್ಟಿಕಾಂಶದ ಕೊರತೆಯೂ ನೀಗುತ್ತದೆ. ಗ್ರಾಮೀಣ ಪ್ರದೇಶದ ಮಕ್ಕಳ ಹಾಗೂ ಮಹಿಳೆಯರ ಶ್ರಯೋಭಿವೃದ್ಧಿಯ ಉದ್ದೇಶದಿಂದ ರಾಜ್ಯ ಸರ್ಕಾರ ಕೂಸಿನ ಮನೆ ಕಾರ್ಯಕ್ರಮ ಜಾರಿಗೊಳಿಸಿದೆ. ಪ್ರಾರಂಭದಲ್ಲಿ ತಾಲೂಕಿನಲ್ಲಿ 10 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೂಸಿನ ಮನೆ ಆರಂಭಿಸಲಾಗಿದೆ” ಎಂದರು.

Advertisements

ಜಿಲ್ಲಾ ಐಇಸಿ ಸಂಯೋಜಕರಾದ ವೀರಭದ್ರಪ್ಪ ಸಜ್ಜನ ಮಾತನಾಡಿ, “ಗದಗ ಜಿಲ್ಲೆಯಲ್ಲಿ ಒಟ್ಟು 109 ಕೂಸಿನ ಮನೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ. ಅದರಂತೆ ಮೊದಲ ಹಂತದಲ್ಲಿ 29 ಕೂಸಿನ ಮನೆಗಳನ್ನು ಜಿಲ್ಲೆಯಾದ್ಯಂತ ಆರಂಭಿಸಲಾಗುತ್ತಿದ್ದು, ರೋಣ ತಾಲೂಕಿನಲ್ಲಿ ಒಟ್ಟು 10 ಕೂಸಿನ ಮನೆಗಳನ್ನು ಅರಂಭಿಸಲಾಗುತ್ತಿದೆ” ಎಂದರು.

ಶಿಬಿರದಲ್ಲಿ ರಿಯಾಜ ಖತೀಬ್ ಸಹಾಯಕ ನಿರ್ದೇಶಕರು(ಗ್ರಾಮೀಣ ಉದ್ಯೋಗ), ಶಿವಯೋಗಿ ರಿತ್ತಿ ಸಹಾಯಕ ನಿರ್ದೇಶಕರು (ಪಂಚಾಯತ ರಾಜ್), ಶ್ರೀಮತಿ ಮಂಜುಳಾ ಗುರಾಣಿ ಹಿರಿಯ ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರೋಣ, , ಅಬ್ಬಿಗೇರಿ, ಹೊಸಳ್ಳಿ, ಕುರಹಟ್ಟಿ, ಕೌಜಗೇರಿ, ಬೆಳವಣಿಕಿ, ಹೊಳೆ ಆಲೂರು, ಹೊಳೆಮಣ್ಣೂರು ಗ್ರಾಮ ಪಂಚಾಯತಿಯ ಕೂಸಿನ ಮನೆ ಆರೈಕೆದಾರರು ಭಾಗವಹಿದ್ದರು. ತಾಲೂಕು ಪಂಚಾಯತ ಐಇಸಿ ಕೊ ಅರ್ಡಿನೇಟರ್ ಮಂಜುನಾಥ ಅವರು ನಿರೂಪಿಸಿ ವಂದಿಸಿದರು….

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X