ಗದಗ | ಕಾರ್ಮಿಕ ಚಳುವಳಿ ವ್ಯಕ್ತಿತ್ವದ ಬೆಳವಣಿಗೆಯ ಆಶಯವಾಗಿದೆ : ಎಂ. ಎಸ್. ಹಡಪದ

Date:

Advertisements

“ಬಹು ದೊಡ್ಡ ಸಂಖ್ಯೆಯಲ್ಲಿರುವ ದುಡಿಯುವ ಜನರನ್ನು ಕಾರ್ಪೊರೇಟ್ ಹುನ್ನಾರಗಳನ್ನು ಅರಿತು ವಿಫಲಗೊಳಿಸುವ ಸಾಮರ್ಥ್ಯ ಪಡೆದು ರಾಜಕೀಯ, ಸಾಂಸ್ಕೃತಿಕ ಪ್ರಜ್ಞಾವಂತರಾಗಬೇಕು. ಕಾರ್ಮಿಕ ಚಳುವಳಿ ವ್ಯಕ್ತಿತ್ವದ ಬೆಳವಣಿಗೆಯ ಆಶಯ ಎದೆಯಲ್ಲಿದೆ” ಎಂದು ಸಿ.ಐ.ಟಿ.ಯು ಮುಖಂಡ ಎಂ ಎಸ್ ಹಡಪದ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ಸಮುದಾಯ ಭಾವನದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.

“ಕಾರ್ಮಿಕರ ಕುಟುಂಬದಲ್ಲಿ ಮಕ್ಕಳು, ಗಂಡ ಹೆಂಡತಿ ನಡುವಿನ ಸಂಬಂಧಗಳು ಹೆಚ್ಚು ಆರೋಗ್ಯಕರವಾಗುವಂತೆ ಮಾಡುವುದು ಮೇ ದಿನದ ಆಶಯ. ಆದರೆ ದುಡಿಯುವ ಜನರನ್ನು ಹೆಚ್ಚು ಹೆಚ್ಚು ದುಡಿಸಿಕೊಂಡು, ದಿನಕ್ಕೆ ಹನ್ನೊಂದು, ಹನ್ನೆರಡು ಗಂಟೆ ಯುವಕರು ದುಡಿಯಬೇಕು ಎಂದು ಹೇಳುವ ನಾರಾಯಣ ಮೂರ್ತಿಯಂತಹ ಬಂಡವಾಳಶಾಹಿಗಳ ದುರಾಸೆಯಾಗಿದೆ. ಜಗತ್ತಿನ ಬಹುಭಾಗದ ಜನರನ್ನು ಸಾಂಸ್ಕೃತಿಕ ಕುಬ್ಜರನ್ನಾಗಿಸುವ ಹುನ್ನಾರ, ಪ್ರಜಾಪ್ರಭುತ್ವದಲ್ಲಿ ಪ್ರಜ್ಞಾವಂತರಾಗಿ ಇರುವ ಅವಕಾಶವನ್ನು ಕಸಿಯುವುದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಕಾರ್ಪೊರೇಟ್ ದಬ್ಬಾಳಿಕೆ, ಪ್ರಜಾಪ್ರಭುತ್ವ ನಾಶಪಡಿಸುವ ಮುಂದುವರೆದ ಹೇಳಿಕೆಗಳ ಭಾಗವಾಗಿದೆ. ಮುಂದಿನ ತಲೆಮಾರು ಕೇವಲ ಯಂತ್ರಗಳಾಗಿ ಹೇಳಿದ್ದಕ್ಕೆಲ್ಲ ತಲೆಯಾಡಿಸುವ ಕೋಲೆ ಬಸವಗಳಾಗುವಂತೆ ಮಾಡಿ‌ ಅಪರಿಮಿತ ಸಂಪತ್ತನ್ನು ತಮ್ಮಲ್ಲಿಯೇ ಕೇಂದ್ರಿಕರಿಸುವುದು ಅವರ ಉದ್ದೇಶವಾಗಿದೆ” ಎಂದು ಹೇಳಿದರು.

“ಕೇಂದ್ರೀಕರಿಸುವ ವ್ಯವಸ್ಥೆಯನ್ನು ಸಂಘಟನಾತ್ಮಕವಾಗಿ ನಾವೆಲ್ಲರೂ ಎದುರಿಸಿ ಬದುಕನ್ನು ಕಟ್ಟಿಕೊಳ್ಳಬೇಕಿದೆ” ಎಂದು ಎಂ. ಎಸ್. ಹಡಪದ ಹೇಳಿದರು.

ಈ ಸುದ್ದಿ ಓದಿದ್ದೀರಾ? ಗುಬ್ಬಿ | ತಾಲೂಕು ಆಡಳಿತದಿಂದ ಆದಿ ಜಗದ್ಗುರು ಶಂಕರಾಚಾರ್ಯರ ಜಯಂತಿ ಆಚರಣೆ

ಕಾರ್ಯಕ್ರಮದಲ್ಲಿ ಸಿ.ಐ.ಟಿ.ಯು ಮುಖಂಡರು ಬಾಲು ರಾಠೋಡ್, ಪೀರು ರಾಠೋಡ್, ದಾವಲಾಸಾಬ ತಾಳಿಕೋಟಿ, ಮೆಹಬುಬ ಹವಾಲ್ದಾರ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X