ಗದಗ | ಲಿಂ. ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಮರಣೋತ್ತರ ‘ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’

Date:

Advertisements

ಲಿಂ. ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಮರಣೋತ್ತರವಾಗಿ 2025ನೇ ಸಾಲಿನ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗದಗ ಪಟ್ಟಣದ ಶಿವಾನುಭವ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಲಿಂಗೈಕ್ಯ ಡಾ. ತೋಂಟದ ಸಿದ್ದಲಿಂಗ ಸ್ವಾಮೀಜಿ ಅವರ 7ನೇ ಪುಣ್ಯಸ್ಮರಣೆ ಹಾಗೂ ಮರಣವೇ ಮಹಾನವಮಿ ಆಚರಣೆ ಕಾರ್ಯಕ್ರಮದಲ್ಲಿ ಉಮಾದೇವಿ ಎಂ. ಕಲಬುರ್ಗಿ ಅವರು 5 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತೋಂಟದಾರ್ಯ ಶಾಖಾಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ, ಶಾಂತಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಧಾರವಾಡದ ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಇದ್ದರು.

ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ, ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಧನೇಶ ದೇಸಾಯಿ, ಲಿಂಗಾಯತರ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡರ, ಕೆ.ಎಸ್. ಚೆಟ್ಟಿ, ಶೇಖಣ್ಣ ಕವಳಿಕಾಯಿ ಇದ್ದರು. ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧೀಜಿ, ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಆಚಾರ-ವಿಚಾರ, ಜೀವನ ಚರಿತ್ರೆ ಇಂದಿಗೂ ಪ್ರಸ್ತುತ: ಜಿಲ್ಲಾಧಿಕಾರಿ

"ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿಯವರು, ದೇಶ ಕಂಡ ಧೀಮಂತ ನಾಯಕರು....

ಹಾವೇರಿ | ಗಾಂಧೀಜಿಯವರ ಮೌಲ್ಯಗಳನ್ನು ಮತ್ತೆ ಮತ್ತೆ ಜನರಡೆಗೆ ಒಯುತ್ತೇವೆ: ಸಾಹಿತಿ ಸತೀಶ್ ಕುಲಕರ್ಣಿ

"ಗಾಂಧಿಜೀಯವರನ್ನು ಅಪಮೌಲ್ಯ ಮಾಡುತ್ತಿರುವ ಈ ಕಾಲದಲ್ಲಿ ಗಾಂಧಿಯವರ ಮೌಲ್ಯಗಳನ್ನು, ವಿಚಾರಧಾರೆಗಳನ್ನು ಮತ್ತೆ...

ಮೈಸೂರು | ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ ಅಗತ್ಯ : ಕೆ ಟಿ ವೀರಪ್ಪ

ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ...

Download Eedina App Android / iOS

X