ಗದಗ | ಮಡಿವಾಳ ಮಾಚಿದೇವ ಜಯಂತಿ ಆಚರಣೆ

Date:

Advertisements

ಅರಸತ್ವ ಮೇಲಲ್ಲ, ಅಗಸತ್ವ ಕೀಳಲ್ಲ ಎಂದು ಕೇವಲ ಬಟ್ಟೆಯನ್ನು ಶುಬ್ರಗೊಳಿಸದೆ ಜನರ ಮನಸ್ಸಿನಲ್ಲಿರುವ ಕೊಳೆಯನ್ನು ತೊಳೆದವರು ಮಡಿವಾಳ ಮಾಚಿದೇವರು ಎಂದು ಪ್ರಾಧ್ಯಾಪಕ ಡಾ. ರಾಜಶೇಖರ ಎಸ್‌ ದಾನರಡ್ಡಿ ಹೇಳಿದ್ದಾರೆ.

ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಸಾಹಿತ್ಯವು ಕೇವಲ ಅರಮನೆಗೆ ಸೀಮಿತವಾಗದಾರದೆಂದು ಶ್ರೀಸಾಮಾನ್ಯನಿಗೆ ತಿಳಿಯುವ ಹಾಗೇ ಸರಳ ಭಾಷೆಯಲ್ಲಿ ಬಸವಾದಿ ಶರಣರಲ್ಲಿ ಒಬ್ಬರಾಗಿ ಮಡಿವಾಳ ಮಾಚಿದೇವರು ವಚನಗಳನ್ನು ರಚಿಸಿ ಜನಸಾಮಾನ್ಯರ ಮನ ಮುಟ್ಟಿಸಿದ್ದಾರೆ. ಶಿಕ್ಷಣವೂ ಕೇವಲ ಉಳ್ಳವರಿಗೇ ಮಾತ್ರ ಮೀಸಲಾಗಿದ್ದ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಗುರುಗಳ ಹತ್ತಿರ ಶಿಕ್ಷಣ ಪಡೆದು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎನ್ನುವಂತೆ ಎಲ್ಲರಿಗೂ ಬಾಳುವ ಮತ್ತು ಶಿಕ್ಷಣ ಪಡೆಯುವ ಹಕ್ಕಿದೆ ಎಂದು ಮಡಿವಾಳ ಮಾಚಿದೇವರು ಸಾಮಾಜಿಕ ಕ್ರಾಂತಿ ಮೂಡಿಸಿದವರಾಗಿದ್ದಾರೆ” ಎಂದರು.

Advertisements

“ಮಡಿವಾಳ ಮಾಚಿದೇವರು ತಮ್ಮ ವಚನಗಳಲ್ಲಿ ಕಾಯಕಕ್ಕೆ ಅತ್ಯಂತ ಪ್ರಾಮುಖ್ಯತೆ ನೀಡಿದ್ದು ಭಕ್ತಿ ಮತ್ತು ನಿಷ್ಟೆಯಿಂದ ಕಾಯಕದಲ್ಲಿ ನಿರತರಾದರೆ ದೇವರು ಸಹ ಒಲಿಯುವನು ಎಂದು ಸಾರಿದ್ದಾರೆ.ನಡೆನುಡಿ ತಪ್ಪದೇ, ತತ್ವ ಸಿದ್ದಾಂತವನ್ನು ಅನುಸರಿಸಿ ನಮ್ಮ ವ್ಯಕ್ತಿತ್ವವನ್ನು ಉನ್ನತಗೊಳಿಸಬೇಕೆಂದು ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ. ಶ್ರೀಸಾಮಾನ್ಯನಾಗಿದ್ದ ಮಡಿವಾಳ ಮಾಚಿದೇವರ ಜೀವನ ಸಂದೇಶದ ಕಥೆಯನ್ನು ಅರ್ಥಪೂರ್ಣವಾಗಿ ತಿಳಿಸಿದ ಅವರು 12ನೇ ಶತಮಾನದ ವಚನ ಕ್ರಾಂತಿಯೂ ಕನ್ನಡಕ್ಕೆ ದೊಡ್ಡ ಸಂಪತ್ತು” ಎಂದು ಡಾ. ರಾಜಶೇಖರ ಎಸ್ ದಾನರಡ್ಡಿ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರಯ್ಯಸ್ವಾಮಿ.ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಸೇರಿದಂತೆ ಗಣ್ಯರು, ಸಮಾಜ ಭಾಂದವರು, ಹಿರಿಯರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X