ಗದಗ | ಜೂನ್‌ ಅಂತ್ಯದವರೆಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಕೆಲಸ; ಪಿಡಿಒ ಈಶ್ವರಗೌಡ ಪಾಟೀಲ

Date:

Advertisements

ಈ ಬಾರಿ ಬರಗಾಲದ ಛಾಯೆ ಆವರಿಸಿದೆ, ಈ ಹಿನ್ನೆಲೆ ದುಡಿಯುವ ವರ್ಗಕ್ಕೆ ಮಳೆ ಇಲ್ಲದೆ, ಬೆಳೆ ಕೂಡ ಇಲ್ಲಾ, ಹೀಗಾಗಿ ಡ.ಸ ಹಡಗಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಜೂನ್ ಅಂತ್ಯದ ವರೆಗೂ ಕೆಲಸ ಕೊಡೋಣ ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಈಶ್ವರಗೌಡ ಪಾಟೀಲ ಹೇಳಿದರು.‌

ಗದಗ ಜಿಲ್ಲೆಯ ರೋಣ ತಾಲೂಕಿನ ಡ.ಸ ಹಡಗಲಿ ಗ್ರಾಮ ಪಂಚಾಯತಿಯಲ್ಲಿ ಕಾಯಕ ಬಂಧುಗಳ ಸಭೆಯಲ್ಲಿ ಮಾತನಾಡಿದ ಅವರು, ದುಡಿಯುವ ವರ್ಗಕ್ಕೆ ಕೆಲಸ ಕೊಡುವ ಮೂಲಕ ಅತಿ ಹೆಚ್ಚು ಮಾನವ ದಿನಗಳ ಸೃಜನೆ ಮಾಡುವ ಗುರಿಯನ್ನು ಹೊಂದೊಣ. ಈ ಹಿನ್ನಲೆ ತಾವೇಲ್ಲರೂ ಶ್ರಮ ವಹಿಸಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಎಂದು ಹೇಳಿದರು.

ಪ್ರತೀ ಸೋಮವಾರ ಕೆಲಸದ ಬೇಡಿಕೆ ಸಲ್ಲಿಸಿದ ಕೂಲಿಕಾರರ ವಿವರಗಳನ್ನು ಎಂಐಎಸ್‌ನಲ್ಲಿ ದಾಖಲಿಸುವುದು ಮತ್ತು ಎರಡು ದಿನಗಳೊಳಗೆ ಕೆಲಸವನ್ನು ಒದಗಿಸುವದು ನಮ್ಮ ಕೆಲಸ. ಕೆಲಸದ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ ಮಾಡುವದು ಸಿಬ್ಬಂದಿಗಳ ಕೆಲಸ ತಪ್ಪದೇ ಮಾಡಿ ಎಂದರು.

Advertisements

ಈ ಮೊದಲ ಮಕ್ಕಳಿಗೆ ಸರಿಯಾದ ಸೌಲಭ್ಯಗಳು ಇಲ್ಲದೇ ಇರುವ  ಕಾರಣ ಮಕ್ಕಳಿಗೆ ಸ್ವಲ್ಪ ತೊಂದರೆ ಆಗುತ್ತಿತ್ತು, ಈ ಬಾರಿ ಗ್ರಾಮದಲ್ಲಿ ಕೂಸಿನ ಮನೆಯನ್ನು ತೆರಯಲಾಗಿದ್ದು ಪಾಲಕರಿಗೆ ಮಕ್ಕಳನ್ನು ಅಲ್ಲಿ ಬಿಟ್ಟು ಹೊಗಲು ತಿಳಿಸುವ ಕೆಲಸ ಮಾಡಿ ಈ ಹಿನ್ನೆಲೆ ನಿಮ್ಮ ಸಹಕಾರ ಮುಖ್ಯ ಎಂದರು.

ಎನ್ಎಂಎಂಎಸ್ ಆ್ಯಪ್ ಬಗ್ಗೆ ಮಾಹಿತಿ ನೀಡಿ ಕಾಯಕ ಬಂಧುಗಳು ಎನ್ಎಂಎಂಎಸ್ ಆ್ಯಪ್‌ನ ಮೂಲಕ ಹಾಜರಾತಿ ಹಾಕಿ, ಕೆಲಸದಲ್ಲಿ ಯಾವುದೇ ರೀತಿಯ ವಿಳಂಬವಾಗುದಂತೆ ನೋಡಿಕೊಳ್ಳಬೇಕು. ಪ್ರತಿ ಕೂಲಿಗಾರರಿಗೆ ನರೇಗಾ ಕೂಲಿ ಯೋಜನೆಯಡಿ 316 ರೂ. ಇದೆ ಹಾಗಾಗಿ ಜನರಿಗೆ ತಿಳಿವಳಿಕೆ ನೀಡುವುದು ಅವರನ್ನು ಹೆಚ್ಚು ಹೆಚ್ಚು ಕೆಲಸಕ್ಕೆ ಬರುವ ಹಾಗೆ ಮಾಡುವ ಜವಾಬ್ದಾರಿ ನಿಮ್ಮದಾಗಿರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಬಸವರಾಜ ತಳವಾರ, ಐಇಸಿ ಮಂಜುನಾಥ, ಬಿಎಫ್‌ಟಿ ಪ್ರಕಾಶ ಅಂಬಕ್ಕಿ ಹಾಗೂ ಡ.ಸ ಹಡಗಲಿ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X