ಗದಗ | ಆಸ್ಪತ್ರೆಯೊಳಗೆ ‘ರೀಲ್ಸ್‌’ ಮಾಡಿದ ವೈದ್ಯಕೀಯ ವಿದ್ಯಾರ್ಥಿಗಳು; 38 ಮಂದಿ ಅಮಾನತು

Date:

Advertisements

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯೊಳಗೆ ‘ರೀಲ್ಸ್’ ವಿಡಿಯೋ ವೈರಲ್ ಆಗುತ್ತಿದ್ದಂತೆ 38 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವುದು ವರದಿಯಾಗಿದೆ.

ವೈರಲ್ ಆಗುತ್ತಿರುವ ವೀಡಿಯೊಗಳಲ್ಲಿ ಒಂದು ವೀಡಿಯೊದಲ್ಲಿ ಮೂವರು ವಿದ್ಯಾರ್ಥಿನಿಯರು ಬಾಲಿವುಡ್ ಹಾಡಿಗೆ ನೃತ್ಯ ಮಾಡುತ್ತಿದ್ದರೆ, ಇನ್ನೊಂದು ವೀಡಿಯೊದಲ್ಲಿ 10ಕ್ಕೂ ಅಧಿಕ ವಿದ್ಯಾರ್ಥಿಗಳು ಕನ್ನಡ ಹಾಡಿನ ಸಾಹಿತ್ಯಕ್ಕೆ ಅಭಿನಯಿಸಿದ್ದಾರೆ.

ಜಿಮ್ಸ್ ನಿರ್ದೇಶಕ ಡಾ.ಬಸವರಾಜ್ ಬೊಮ್ಮನಹಳ್ಳಿ ಅವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದು, ಮುಂದಿನ ದಿನಗಳಲ್ಲಿ ಇದೇ ಘಟನೆ ಪುನರಾವರ್ತನೆಯಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

Advertisements

ಈ ರೀಲ್‌ಗಳಲ್ಲಿ ಯುವ ವಿದ್ಯಾರ್ಥಿಗಳು ‘ಪ್ರೇಮಲೋಕ’ ಚಿತ್ರದ ಕನ್ನಡ ಹಾಡು ಮತ್ತು ಬಾಲಿವುಡ್ ಚಿತ್ರ ‘ಮೊಹ್ರಾ’ದ ಹಿಂದಿ ಹಾಡಿಗೆ ನೃತ್ಯ ಮಾಡಿದ್ದಾರೆ.

ಈ ರೀಲ್‌ಗಳು ಜಿಮ್ಸ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳನ್ನು ಎತ್ತಿವೆ.

ದಾಖಲಾದ ರೋಗಿಗಳ ಸ್ಥಿತಿ ಮತ್ತು ಜಿಮ್ಸ್‌ನಲ್ಲಿ ಮೇಲ್ವಿಚಾರಣೆಯ ಬಗ್ಗೆ ಅನೇಕ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ. ಅವರಲ್ಲಿ ಕೆಲವರು ಜಿಮ್ಸ್ ಯಾವಾಗ ವೀಡಿಯೊ ಶೂಟಿಂಗ್ ತಾಣವಾಗಿ ಮಾರ್ಪಟ್ಟಿತು? ಎಂದು ಕೇಳಿದ್ದಾರೆ.

“ವೈದ್ಯಕೀಯ ವಿದ್ಯಾರ್ಥಿಗಳ ತಂಡವೊಂದು ಆಸ್ಪತ್ರೆಯಲ್ಲಿ ರೀಲ್ಸ್‌ ಮಾಡಿರುವ ಘಟನೆ ಶುಕ್ರವಾರ ಗಮನಕ್ಕೆ ಬಂದಿದೆ. ಈ ಗುಂಪಿನಲ್ಲಿ 15 ಹೌಸ್ ಸರ್ಜನ್‌ಗಳು ಸೇರಿದ್ದಾರೆ. ಅವರು ಮುಂದಿನ ಕೆಲವು ತಿಂಗಳುಗಳಲ್ಲಿ ಪದವಿ ಪಡೆಯಲಿದ್ದಾರೆ. ನಮ್ಮ ವಿಚಾರಣೆಯ ಸಮಯದಲ್ಲಿ, ಅವರು ತಮ್ಮ ಪದವಿಪೂರ್ವ ಆಚರಣೆಯ ಭಾಗವಾಗಿ ಇದನ್ನು ಮಾಡಿದ್ದಾರೆ” ಎಂದು ಜಿಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.

“ಅವರು 5 ವರ್ಷಗಳ ಕಾಲ ಜಿಮ್ಸ್‌ನಲ್ಲಿ ಅಧ್ಯಯನ ಮಾಡಿದ್ದಾರೆ. ಸಂಸ್ಥೆಯಲ್ಲಿ ಏಪ್ರಿಲ್ 7ರಂದು ಅವರ ಕೊನೆಯ ಕಲಿಕೆಯ ದಿನವಾಗಿದೆ. ಅದಕ್ಕಾಗಿಯೇ ಅವರು ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಜಿಮ್ಸ್ ಆವರಣದಲ್ಲಿ ಈ ರೀತಿ ಮಾಡಬಾರದೆಂದು ನಾವು ಅವರಿಗೆ ಹೇಳಿದ್ದೇವೆ. ನಾವು ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ” ಎಂದು ಡಾ ಬಸವರಾಜ ಬೊಮ್ಮನಹಳ್ಳಿ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‌ಗದಗ | ಜಾತಿ ಪದ್ದತಿ ನಿರ್ಮೂಲನೆ ಮಾಡುವ ಶಕ್ತಿ ಶಿಕ್ಷಣದಲ್ಲಿದೆ: ಸಚಿವ ಎಚ್ ಕೆ ಪಾಟೀಲ್

38 ಜಿಮ್ಸ್ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಆಡಳಿತದ ಕ್ರಮವನ್ನು ಶ್ಲಾಘಿಸಿದ ಕೆಲವು ಟ್ವಿಟರ್ ಬಳಕೆದಾರರು, ಇಂತಹ ಕೃತ್ಯಗಳನ್ನು ಆಸ್ಪತ್ರೆಗಳಲ್ಲಿ ಮಾಡಬಾರದೆಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X