ಗದಗ | ಟಕ್ಕೇದ ದರ್ಗಾದಿಂದ ಅಸ್ತಮಾ ರೋಗಿಗಳಿಗೆ ಔಷಧ ವಿತರಣೆ

Date:

Advertisements

ಪ್ರಸ್ತುದಲ್ಲಿ ಯುವಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ದುಶ್ಚಟಕ್ಕೆ ಬಲಿಯಾಗದಂತೆ ಪಾಲಕರು ಎಚ್ಚರ ವಹಿಸಬೇಕು ಎಂದು ಟಕ್ಕೇದ ದರ್ಗಾದ ಪೀಠಾಧಿಪತಿ ಹಜರತ್‌ ನಿಜಾಮುದ್ದೀನ್ ಷಾ ಆಶ್ರಫಿ ಮಕಾನದಾರ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಡಣದಲ್ಲಿ ಟಕ್ಕೇದ ದರ್ಗಾದಲ್ಲಿ ಹಮ್ಮಿಕೊಂಡಿದ್ದ ಅಸ್ತಮಾ ರೋಗಿಗಳಿಗೆ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಧೂಮಪಾನ ಮಾಡುವುದರಿಂದ ಶ್ವಾಸಕೋಶದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದರಿಂದ ಕಫ ಉಂಟಾಗಿ ಅಸ್ತಮಾ ರೋಗ ಬರುತ್ತದೆ. ಬೀಡಿ, ಸೀಗರೇಟ್‌ನಂತಹ ದುಶ್ಚಟಗಳಿಂದ ದೂರವಿರಬೇಕು” ಎಂದರು.

Advertisements

ಡಾ ಶಿವಕುಮಾರ ಹುದ್ದಾರ ಮಾತನಾಡಿ, “ಅಸ್ತಮಾ ಎನ್ನುವುದು ಕೆಲವು ಜನರನ್ನು ಬಾಲ್ಯದಿಂದ ಹಿಡಿದು ಜೀವಮಾನವಿಡಿ ಕಾಡುತ್ತಲೇ ಇರುತ್ತದೆ. ಇದು ಅನುವಂಶೀಯವಾಗಿಯೂ ಬರಬಹುದು ಅಥವಾ ಬೇರೆ ಕಾರಣಗಳಿಂದಲೂ ಬರಬಹುದಾಗಿದೆ. ಅಸ್ತಮಾ ಇರುವಂತಹ ಜನರು ಕೆಲವೊಂದು ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಂಡರೆ ಅಸ್ತಮಾ ರೋಗವನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗುತ್ತದೆ. ಅದರಲ್ಲೂ ಅಸ್ತಮಾ ಅತಿಯಾಗಿರುವಂತಹ ರೋಗಿಗಳು ಕೆಲವೊಂದು ಆಹಾರಗಳನ್ನು ಕಡೆಗಣಿಸಲೇಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ ಸರ್ಕಾರ ಮಕ್ಕಳ ವಿಚಾರದಲ್ಲಿ ಚೆಲ್ಲಾಟ ಆಡುತ್ತಿದೆ: ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ

ಇದೇ ಸಂದರ್ಭದಲ್ಲಿ ಸುತ್ತಮುತ್ತಲಿನಿಂದ ಆಗಮಿಸಿದ್ದವರಿಗೆ 5:15ಕ್ಕೆ ಮೃಗಶಿರ ಮಳೆ ಪ್ರವೇಶಿಸುವ ವೇಳೆ ದರ್ಗಾದಿಂದ ಔಷಧಿಯನ್ನು ವಿತರಣೆ ಮಾಡಲಾಯಿತು.

ಸಾಹಿತಿ ಎಸ್ ಐ ಪತ್ತಾರ ಮಾತನಾಡಿದರು. ಮಾಜಿ ಪುರಸಭಾ ಸದಸ್ಯ ಎಂ ಎಸ್ ಮಕನದಾರ, ಅಂಜುಮಾನ್ ಇಸ್ಲಾಂ ಕಮೀಟಿ ಕಾರ್ಯದರ್ಶಿ ಮಾಸುಮಲಿ‌ ಮದಗಾರ, ಎಸ್ ಎಸ್ ನರೇಗಲ್ಲ, ಮೈನು ಮಕಾನದಾರ, ಮುರ್ತುಜಖಾದ್ರಿ ಮದಗಾರ, ಪಾಷಾ ಹವಾಲ್ದಾರ್, ಸೇರಿದಂತೆ ಸುತ್ತಮುತ್ತಲಿನ ಭಕ್ತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X