ಗದಗ | ಮಹಿಳೆಯರ ಸ್ವಾವಲಂಬನೆ ಹಾಗೂ ಸ್ವಾತಂತ್ರ್ಯ ಬದುಕಿಗೆ ಮನರೇಗಾ ಆಸರೆ: ಎಡಿಪಿಸಿ ಕಿರಣಕುಮಾರ

Date:

ಮಹಿಳೆಯರ ಸ್ವಾವಲಂಬನೆ ಹಾಗೂ ಸ್ವತಂತ್ರ ಬದುಕಿಗೆ ಮನರೇಗಾ ಆಸರೆ ಆಗಿದೆ. ಅಗತ್ಯವಿರುವ ಎಲ್ಲ ಮಹಿಳೆಯರು ತಮ್ಮ ಗ್ರಾಮ ಪಂಚಾಯತಿಗೆ ನಮೊನೆ-6ರಲ್ಲಿ ಅರ್ಜಿ ಸಲ್ಲಿಸಿ, ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಆ ಮೂಲಕ, ಆರ್ಥಿಕವಾಗಿ ಸದೃಡರಾಗಿ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಬಹುದು ಎಂದು ಗದಗ ಜಿಲ್ಲಾ ಪಂಚಾಯತಿಯ ಜಿಲ್ಲಾ ಕಾರ್ಯಕ್ರಮ ಸಂಯೋಜಕ (ಎಡಿಪಿಸಿ) ಕಿರಣಕುಮಾರ ಎಸ್.ಎಚ್ ಹೇಳಿದ್ದಾರೆ.

- Advertisement -

ಗದಗ ಜಿಲ್ಲೆಯ ರೋಣ ತಾಲೂಕಿನ ಕುರುಡಗಿ ಗ್ರಾಮದಲ್ಲಿ ನಡೆದ ಮಹಿಳಾ ಸ್ನೇಹಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. “ಮನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಖಾತರಿಯ ಕೂಲಿ ಉದ್ಯೋಗವನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರ ಆರ್ಥಿಕ ಜೀವನಕ್ಕೆ ಭದ್ರತೆ ನೀಡುತ್ತದೆ. ಕೌಶಲ್ಯ ರಹಿತ ಕೆಲಸ ಮಾಡಲು ಮಹಿಳೆಯರು ಸ್ವಯಂ ಪ್ರೇರಣೆ ಯಿಂದ ಮುಂದೆ ಬರಬೇಕು. ಅಳತೆ ಪ್ರಕಾರ ಕೆಲಸ ಮಾಡಿದರೆ ಪ್ರತಿ ದಿನ 316 ರೂ. ಪಾವತಿಸಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮನರೇಗಾ ಯೋಜನೆಯು ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತರಲಾಗಿದೆ, ಇದರ ಲಾಭ ಪಡೆದು ಕೊಳ್ಳುವುದು ಪ್ರತಿಯೊಬ್ಬರ ಹಕ್ಕಾಗಿದೆ. ಮಹಿಳಾ ಕಾರ್ಮಿಕರ ಸಂಖ್ಯೆಯನ್ನು ವೃದ್ಧಿಸಿ, ಅವರಲ್ಲಿ ಸ್ವಾವಲಂಬಿ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಮನರೇಗಾ ತಂಡದ ವತಿಯಿಂದ ವಿಶೇಷ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದೆ. ಮನರೇಗಾದಡಿ ಸಮಾನ ಕೂಲಿ ನಿಯಮವಿದೆ. ಹೀಗಿದ್ದರೂ ಮನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಪಾಲ್ಗೊಳ್ಳುವಿಕೆ ಕಡಿಮೆ.ಮುಂಬರುವ ಎಲ್ಲ ಕಾಮಗಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಜಾಗೃತಿ ಮೂಡಿಸುವುದು ಹಾಗೂ ಕಡ್ಡಾಯವಾಗಿ ಮಹಿಳೆಯರ ಹೆಸರಿನಲ್ಲಿ ಎನ್ಎಂಆರ್ ಸೃಜಿಸುವಂತೆ ಸಿಇಓ ಅವರು ಸೂಚಿಸಿದ್ದಾರೆ” ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಪಿಡಿಓ ಶಿಲ್ಪಾ ಕವಲೂರ, ಐಇಸಿ ಮಂಜುನಾಥ, ತಾಂತ್ರಿಕ ಸಹಾಯಕ ಅಜಯ ಅಬ್ಬಿಗೇರಿ, ಎನ್.ಆರ್.ಎಲ್.ಎಂ ತಾಲೂಕ ವ್ಯವಸ್ಥಾಪಕ ಗುರುಬಸಪ್ಪ ವೀರಾಪೂರ, ಜಿಕೆಎಂ ಯಶೋದಾ ಅಮರಗೋಳ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...