ಗದಗ | ದಲಿತರ ಅನುದಾನ ದುರ್ಬಳಕೆ; ಸರ್ಕಾರದ ನಡೆ ಖಂಡನೀಯ: ಸುರೇಶ ಚಲವಾದಿ

Date:

Advertisements

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯವೆಂದು ಗದಗ ಜಿಲ್ಲಾ ಎಸ್‌ಸಿ/ಎಸ್‌ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಸುರೇಶ ವಾಯ್ ಚಲವಾದಿ ಕಿಡಿಕಾರಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ 11,000 ಕೋಟಿ ಮೊತ್ತವನ್ನು ಬಳಸಿಕೊಳ್ಳಲು ಮುಂದಾಗಿರುವುದು ದುರಂತ” ಎಂದಿದ್ದಾರೆ.

“ಲಳೆದ ತಿಂಗಳಲ್ಲಿ ಸರ್ಕಾರವೇ ಎಲ್ಲ ಸಚಿವರ ಸಭೆ ಕರೆದು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನ ಕೇವಲ ದಲಿತ ಜನಾಂಗದ ಅಭಿವ್ರದ್ದಿಗೆ ಮಾತ್ರ ಮೀಸಲಾಗಬೇಕು. ಬೇರೆ ಯೋಜನೆಗಳಿಗೆ ಬಳಕೆಯಾಗಬಾರದೆಂದು 7ಡಿ ಕಾಯ್ದೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿಸಡ. ಆದರೆ, ಆದೇಶ ಹೊರಡಿಸಿದ ತಿಂಗಳಲ್ಲಿಯೇ ತನ್ನದೇ ಆದೇಶವನ್ನು ಗಾಳಿಗೆ ತೂರಿ ದಲಿತರ ಹಣವನ್ನು ದುರುಪಯೋಗಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

Advertisements

“ಕಳೆದ 2018ರಲ್ಲಿಯೂ ಕೂಡಾ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲು ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ಒಟ್ಟು 929.41 ಕೋಟಿ ರೂ. ಬಳಕೆ ಮಾಡಿಕೊಂಡಿದೆ. ಅದಲ್ಲದೇ, ಅದೇ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯಕೀಯ ಪರಸ್ಥಿತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಪೂರಕ ಅಂದಾಜಿನಲ್ಲಿ 10 ಕೋಟಿ ಅನುದಾನವನ್ನು ಪೋಲೀಸ್ ಇಲಾಖೆಗೆ ವರ್ಗಾಯಿಸಿ ದಲಿತರ ಮೀಸಲು ಹಣವನ್ನ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಪೋಲೀಸರನ್ನು ನಿಯೋಜಿಸುವದಕ್ಕಾಗಿ 10 ಕೋಟಿ ದಲಿತರ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ವಂಚಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೂಡಲೇ ರಾಜ್ಯ ಸರ್ಕಾರ ದಲಿತರ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸುವದನ್ನು ನಿಲ್ಲಿಸಬೇಕು. ದಲಿತರ ಅಭಿವ್ರದ್ದಿಗೆ ಆಧ್ಯತೆ ನೀಡಬೇಕು. ಇಲ್ಲದೇ ಹೋದಲ್ಲಿ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X