ಗದಗ | ಕೆಸರು ಗದ್ದೆಯಂತಾದ ರಸ್ತೆ; ದುರಸ್ತಿಗೊಳಿಸುವಂತೆ ರೈತರ ಆಗ್ರಹ

Date:

Advertisements

ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳಿಂದ ಕೂಡಿದ್ದು, ಮಳೆಯಾದರೆ ರಸ್ತೆಗಳು ಕಸರುಗದ್ದೆಯಂತಾಗಿ ಮಾರ್ಪಟ್ಟು, ರೈತರು ತಮ್ಮ ಜಮೀನುಗುಗಳಿಗೆ ಹೋಗಲು ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಗ್ರಮ ಪಂಚಾಯಿತಿ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಿಂದ ಹೆಸರೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದು, ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳೇ ತುಂಬಿವೆ.

ಸ್ಥಳೀಯ ರೈತರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ದೊಡ್ಡೂರ ಗ್ರಾಮದ ರೈತರ ನೂರಾರು ಎಕರೆ ಜಮೀನುಗಳಿಗೆ ಹೋಗಲು ಇದೇ ರಸ್ತೆಯನ್ನು ಬಳಕೆ ಮಾಡುತ್ತಾರೆ. ಮಳೆಯಿಂದ ಇಡೀ ರಸ್ತೆ ಕೆಸರು ಗದ್ದೆಯಂತಾಗಿದೆ. ನೀರು ತುಂಬಿದೆ. ಎತ್ತು, ಚಕ್ಕಡಿಗಳು ಕೆಸರಿನಲ್ಲಿ ಸಿಕ್ಕಿಕೊಂಡು ರೈತರು ಜಮೀನಿನ ಬಳಿ ಹೋಗಲು ಆಗುತ್ತಿಲ್ಲ. ಇದರಿಂದ ರೈತರು ತಮ್ಮ ಹೊಲಗಳಿಗೆ ಹೋಗಿ ಕೆಲಸ ಮಾಡದಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಉಳ್ಳಟ್ಟಿ, ದೊಡ್ಡೂರ ಹಾಗೂ ಯಲ್ಲಾಪೂರ ಗ್ರಾಮಗಳಲ್ಲಿ ನಡೆದ ʼಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆʼ ಕಾರ್ಯಕ್ರಮದಲ್ಲಿ ನಾವು ಮನವಿ ಮಾಡಿದ್ದರೂ, ಸಮಸ್ಯೆ ಬಗೆಹರಿಸಿಲ್ಲ” ಎಂದು ರೈತರು ಅಸಮಾಧಾನ ವ್ಯಕ್ತಪಡಿದರು.

ದೊಡ್ಡೂರ ಗ್ರಾಮದ ರೈತ ಅಮರಪ್ಪ ಗುಡಗುಂಟಿ ಮಾತನಾಡಿ, “ಈ ದುಸ್ಥಿತಿ ಸರಿ ಸುಮಾರು ಎರಡು-ಎರಡುವರೆ ವರ್ಷಗಳಿಂದ ಹೀಗೆಯೇ ಇದೆ. ಈ ಕಷ್ಟ ಎಂದು ಮುಗಿಯುವುದೋ ತಿಳಿಯದಾಗಿದೆ. ಈವರೆಗೂ ಈ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ, ಅಧ್ಯಕ್ಷರಾಗಲಿ, ಸದಸ್ಯರುಗಳಾಗಲಿ ಇತ್ತ ತಲೆ ಹಾಕಿಯೂ ಮಲಗಿಲ್ಲಾ ಅನ್ನೋದು ವೈಯಕ್ತಿಕವಾಗಿ ಬೇಸರ ಉಂಟಾಗಿದೆ” ಎಂದು ನೋವು ತೋಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸ್ಮಾರ್ಟ್ ಸಿಟಿ ಅನುದಾನವಿದ್ದರೂ ಅವಳಿ ನಗರಕ್ಕಿಲ್ಲ ಸ್ಮಾರ್ಟ್ ಭಾಗ್ಯ: ರಾಜು‌ ನಾಯಕವಾಡಿ ಆಕ್ರೋಶ

“ರಸ್ತೆ ಸಮಸ್ಯೆ ಬಗೆಹರಿಸದೆ ಹೋದಲ್ಲಿ ಸೆಪ್ಟೆಂಬರ್ 4ರಂದು ಕಾನೂನು ರೀತಿಯ ಹೋರಾಟ ಆರಂಭಿಸಿ, ಪಂಚಾಯಿತಿಗೆ ಭೀಗ ಜಡಿದು ಪ್ರತಿಭಟನೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X