ಗದಗ | ವಿವಾಹೇತರ ಸಂಬಂಧ ಪ್ರಿಯಕರನ ಜೊತೆಗೂಡಿ ಪತ್ನಿ ಸೇರಿ ಪತಿಯ ಕೊಲೆ

Date:

Advertisements

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಂಕ್ರಪ್ಪ ಅಲಿಯಾಸ್ ಮುತ್ತು ಕೊಳ್ಳಿ(30) ಎಂದು ಗುರುತಿಸಲಾಗಿದೆ.

ರೋಣ ಪಟ್ಟಣದ ಹಕಾರಿ ಕಾಲೋನಿ ನಿವಾಸಿ ಶಂಕ್ರಪ್ಪ ವಿದ್ಯಾಳನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಪತ್ನಿ ವಿದ್ಯಾ ಬೇರೊಬ್ಬನ ಜೊತೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದಳು. ಇತ್ತೀಚಿಗಷ್ಟೇ ಈ ವಿಚಾರ ಶಂಕರಪ್ಪ ಅವರ ಗಮನಕ್ಕೆ ಬಂದಿತ್ತು. ಶಂಕರಪ್ಪ ಮಲಗಿದ್ದಾಗ ಪ್ರಿಯಕರ ಶಿವಕುಮಾರ್ ನನ್ನು ಮನೆಗ ಕರೆಸಿಕೊಂಡಿದ್ದ ಪತ್ನಿ ವಿದ್ಯಾ, ಶಿವಕುಮಾರ್ ತಂದಿದ್ದ ರಾಡ್ ನಿಂದ, ಇಬ್ಬರೂ ಸೇರಿ ಹಲ್ಲೆ ಮಾಡಿ ಶಂಕರಪ್ಪರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮೃತದೇಹದ ಕೈಕಾಲು ಕಟ್ಟಿದ ಆರೋಪಿಗಳು ಮನೆಯಲ್ಲಿದ್ದ ನಾಲ್ಕೈದು ಹಾಸಿಗೆಯಲ್ಲಿ ಮೃತದೇಹವನ್ನು ಸುರುಳಿ ಸುತ್ತಿದ್ದಾರೆ. ಬಳಿಕ ಪ್ರಿಯಕರನಿಗೆ ಮೃತದೇಹವನ್ನು ಸಾಗಿಸುವಂತೆ ವಿದ್ಯಾ ಹೇಳಿದ್ದಾಳೆ. ಅದರಂತೆ ಮೃತದೇಹವನ್ನು ಸಾಗಿಸಿದ ಶಿವಕುಮಾರ್, ಅದನ್ನು ಊರಿನ ಹೊರಗಿನ ಪಾಳುಬಾವಿಯಲ್ಲಿ ಎಸೆದಿದ್ದಾನೆ. ಪೊಲೀಸ್ ವಿಚಾರಣೆಯ ವೇಳೆ ಆರೋಪಿ ಶಿವಕುಮಾರ್ ಈ ಮಾಹಿತಿ ತಿಳಿದು ಬಂದಿದೆ.

ಮೃತದೇಹವನ್ನು ಎಸೆದ ನಾಲ್ಕು ದಿನದ ಬಳಿಕ, ವಿದ್ಯಾ ಪೊಲೀಸ್ ಠಾಣೆಗೆ ತೆರಳಿ ಗಂಡ ಶಂಕರಪ್ಪ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದಳು. ದೂರು ಸ್ವೀಕರಿಸಿದ ಪೊಲೀಸರು ಹುಡುಕಾಟ ನಡೆಸಿದ ಐದು ದಿನಗಳ ಬಳಿಕ ಶಂಕರಪ್ಪ ಮೃತದೇಹ ಪತ್ತೆಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ಗ್ರಾಕೂಸ್ ಹೋರಾಟಕ್ಕೆ ಮಣಿದ ಗ್ರಾಪಂ; 3 ತಿಂಗಳಿಂದ ಕೂಲಿ ಕಾರ್ಮಿಕರನ್ನು ಸತಾಯಿಸಿದ್ದ ಆರೋಪ

ಪ್ರಾಥಮಿಕ ತನಿಖೆಯಲ್ಲಿ ಕೊಲೆ ಎಂದು ತಿಳಿದ ಪೊಲೀಸರು ವಿಚಾರಣೆ ನಡೆಸಿದಾಗ, ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿದ್ಯಾ ಹಾಗೂ ಪ್ರಿಯಕರ ಶಿವಕುಮಾರ್ ಅವರನ್ನು ರೋಣ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X