ಗದಗ | ನವಿಲುತೀರ್ಥ ಜಲಾಶಯ ಭರ್ತಿಗೆ ಏಳು ಅಡಿಯಷ್ಟೇ ಬಾಕಿ: ಮುನ್ನೆಚ್ಚರಿಕೆಗೆ ಸೂಚನೆ

Date:

Advertisements

ನವಿಲುತೀರ್ಥ ಜಲಾಶಯ ಭರ್ತಿಗೆ ಏಳು ಅಡಿಯಷ್ಟೇ ಬಾಕಿಯಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಒಂದು ವಾರದಿಂದ ಮಲಪ್ರಭಾ ನದಿ ಮೇಲ್ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಕಳೆದ ಮೂರು ದಿನಗಳಿಂದ ಸವದತ್ತಿ ಬಳಿಯ ನವಿಲುತೀರ್ಥ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ನವಿಲುತೀರ್ಥ ಡ್ಯಾಂ ಭರ್ತಿಯಾಗಲು ಇನ್ನು ಏಳು ಅಡಿ ಮಾತ್ರ ಬಾಕಿಯಿದ್ದು, ನರಗುಂದ ತಾಲೂಕಿನ ಹಲವು ಹಳ್ಳಿಗಳಿಗೆ ನೆರೆ ಆತಂಕ ಉಂಟಾಗಿದೆ.

ಶನಿವಾರ ಸಂಜೆ ವೇಳೆಗೆ ನವಿಲುತೀರ್ಥ ಡ್ಯಾಂ 2,072 ಅಡಿಯಷ್ಟು ಭರ್ತಿಯಾಗಿದೆ. 18 ಸಾವಿರ ಕ್ಯೂಸೆಕ್‌ ಒಳಹರಿವು ಇದ್ದು, ಇದೇ ವೇಗದಲ್ಲಿ ನೀರು ಬಂದರೆ ಮುಂದಿನ ಎರಡೇ ದಿನಗಳಲ್ಲಿ ಜಲಾಶಯ ಭರ್ತಿಯಾಗಲಿದೆ. ಡ್ಯಾಂ ಭರ್ತಿಯಾದ ನಂತರ ಏಕಾಏಕಿ ನೀರು ಹರಿಸಿದರೆ ಪ್ರವಾಹ ಉಂಟಾಗುತ್ತದೆ. ಹಾಗಾಗಿ ಇದನ್ನು ತಡೆಗಟ್ಟಲು ಈಗಿನಿಂದಲೇ ಸಣ್ಣ ಪ್ರಮಾಣದಲ್ಲಿ ನೀರನ್ನು ಹೊರಬಿಡಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

Advertisements

“ನವಿಲುತೀರ್ಥ ಜಲಾಶಯದಿಂದ ಶನಿವಾರ ಸಂಜೆ ಐದು ಗಂಟೆಯಿಂದ 1000 ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ಅದೇರೀತಿ, 500 ಕ್ಯೂಸೆಕ್‌ ನೀರನ್ನು ಮಲಪ್ರಭಾ ಕಾಲುವೆಗೆ ಹರಿಸಲಾಗುತ್ತಿದೆ. ಒಟ್ಟಾರೆ, ಒಂದು ಸಾವಿರ ಕ್ಯೂಸೆಕ್‌ನಿಂದ ಐದು ಸಾವಿರ ಕ್ಯೂಸೆಕ್‌ ನೀರನ್ನು ನಿಧಾನವಾಗಿ ಹೊಳೆ, ಕಾಲುವೆಗಳಿಗೆ ಹರಿಸಲಾಗುವುದು” ಎಂದು ನೀರಾವರಿ ಇಲಾಖೆ ಎಂಜಿನಿಯರ್‌ ಜಗದೀಶ ಕುರಿ ಹೇಳಿದ್ದಾರೆ.

“ನವಿಲುತೀರ್ಥ ಡ್ಯಾಂನಿಂದ ನೀರು ಹರಿಸುತ್ತಿರುವ ಪರಿಣಾಮ ಮಲಪ್ರಭಾ ಹೊಳೆಯ ತಟದಲ್ಲಿರುವ ಎಂಟಕ್ಕೂ ಹೆಚ್ಚು ಗ್ರಾಮಗಳು ಸುರಕ್ಷತೆಯತ್ತ ಗಮನ ಹರಿಸಬೇಕಿದೆ. ಹೊಳೆ ಸಮೀಪ ಪಂಪ್‌ಸೆಟ್ ಇರುವ ರೈತರು ಪಂಪ್‌ಸೆಟ್, ಕೃಷಿ ಸಾಮಗ್ರಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಅದೇರೀತಿ ಬೆಣ್ಣೆ ಹಳ್ಳದ ದಡದಲ್ಲಿರುವ ಗ್ರಾಮಗಳ ಜನರೂ ಕೂಡ ಸುರಕ್ಷತೆಯತ್ತ ಗಮನಹರಿಸಬೇಕು” ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ನರಗುಂದ ತಾಲೂಕಿನ ಕೊಣ್ಣೂರ, ಲಕಮಾಪುರ, ವಾಸನ, ಬೆಳ್ಳೇರಿ, ಕಪಲಿ, ಕಲ್ಲಾಪುರ, ಶಿರೋಳ, ಸುರಕೋಡ, ಕುರ್ಲಗೇರಿ, ಹದ್ಲಿ, ರಡ್ಡೇರನಾಗನೂರ, ಗಂಗಾಪುರ ಗ್ರಾಮಗಳು ಮಲಪ್ರಭಾ ಹಾಗೂ ಬೆಣ್ಣೆಹಳ್ಳದ ಪ್ರವಾಹದ ಆತಂಕದಲ್ಲಿವೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವುದು ನಮ್ಮ ಕಾಲೇಜಿನ ಹೆಮ್ಮೆ: ಪ್ರಾಂಶುಪಾಲ ಎ ಆರ್ ಹಂಡೆ

“ಮಳೆ ಹೆಚ್ಚಾಗಿರುವ ಕಾರಣ ನವೀಲುತೀರ್ಥ ಡ್ಯಾಂನ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಲಿದೆ. ಶನಿವಾರ ಸಂಜೆಯಿಂದ ನದಿಗೆ ಅಂದಾಜು 1 ಸಾವಿರದಿಂದ 5 ಸಾವಿರ ಕ್ಯೂಸೆಕ್‌ ನೀರು ಹರಿಬಿಡಲಾಗಿದ್ದು, ಮಲಪ್ರಭಾ ನದಿಯ ತೀರದ ಜನರು ನದಿತಟದಿಂದ ಅಂತರ ಕಾಯ್ದುಕೊಳ್ಳಬೇಕು” ಎಂದು ಶಾಸಕ ಸಿ ಸಿ ಪಾಟೀಲ ಮನವಿ ಮಾಡಿದ್ದಾರೆ.

“ಒಳಹರಿವು ಹೆಚ್ಚಾದ ಪರಿಣಾಮ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹೊಳೆ, ಕಾಲುವೆಗೆ 1,500 ಕ್ಯೂಸೆಕ್‌ ನೀರು ಹರಿಸಲಾಗಿದೆ. ಪ್ರವಾಹ ಎದುರಿಸಲು ಎಲ್ಲ ವ್ಯವಸ್ಥೆ ಆಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ತಹಶೀಲ್ದಾರ್ ಶ್ರೀಶೈಲ ತಳವಾರ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X