ಗದಗ | ನಮ್ಮ ಕನ್ನಡ ಭಾಷೆ ಅನ್ನ ನೀಡುವ ಅಕ್ಷಯ ಪಾತ್ರೆ: ಕೋಲಕಾರ

Date:

Advertisements

ಕನ್ನಡ ಕೇವಲ ಭಾಷೆಯಲ್ಲ, ಕನ್ನಡ ಭಾಷೆ ಅನ್ನ ನೀಡುವ ಅಕ್ಷಯ ಪಾತ್ರೆಯಾಗಿದೆ ಎಂದು ಅಂಜುಮನ್ ಇಸ್ಲಾಂ ಕಮಿಟಿಯ ಮಾಜಿ ಅಧ್ಯಕ್ಷ ಎಂ ಎಚ್ ಕೋಲಕಾರ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಇಸ್ಲಾಂ ಕಮಿಟಿಯ ಕಾನ್ವೆಂಟ್ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.

“ಪ್ರಾಚೀನ ಕಾಲದಿಂದಲೂ ಕನ್ನಡವನ್ನು ಉಳಿಸಿ, ಬೆಳೆಸಲು ಕವಿಗಳು, ಸಂತರು, ಶರಣರು, ಕನ್ನಡ ಪರ ಸಂಘಟನೆಯವರು, ಸರ್ಕಾರ ಎಲ್ಲರೂ ಶ್ರಮಿಸಿದ್ದಾರೆ. ಕನ್ನಡದ ಬಗೆಗೆ ಅಪಾರ ಅಭಿಮಾನ, ಪ್ರೀತಿ, ಕಾಳಜಿಯಿಂದ ಕನ್ನಡವನ್ನು ಎಲ್ಲೆಡೆ ಬೆಳೆಸಬೇಕು. ಯುವಜನಾಂಗ, ವಿದ್ಯಾರ್ಥಿ ಸಮೂಹ ಸೇರಿದಂತೆ ಪ್ರತಿಯೊಬ್ಬರೂ ಕನ್ನಡ ಬೆಳೆಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿರಬೇಕು” ಎಂದು ಕರೆ ನೀಡಿದರು. ‌

Advertisements

ಈ ಸುದಸ್ದಿ ಓದಿದ್ದೀರಾ? ಹಾಸನ | ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆ: ಗೃಹ ಸಚಿವ ಜಿ ಪರಮೇಶ್ವರ್

ಅಂಜುಮನ್ ಇಸ್ಲಾಂ ಕಮಿಟಿ ನಿರ್ದೇಶಕ ದಾವಲಸಾಬ ತಾಳಿಕೋಟಿ ಮಾತನಾಡಿ, “ಸುಮಾರು 2,500 ವರ್ಷಗಳ ಇತಿಹಾಸ ಹೊಂದಿರುವ ಕನ್ನಡವು ಎಲ್ಲ ಭಾಷೆಗಳ ತಾಯಿಬೇರು. ವಿದ್ಯಾರ್ಥಿಗಳು ತಾಯಿ ನುಡಿ, ಕನ್ನಡ ಭಾಷೆಯನ್ನು ಎಂದಿಗೂ ಮರೆಯಬಾರದು. ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಹೆಚ್ಚಿಸುವತ್ತ ಕನ್ನಡಿಗರಾದ ನಾವೆಲ್ಲರೂ ಶ್ರಮಿಸಬೇಕು” ಎಂದರು.

ಈ ವೇಳೆ ಅಂಜುಮನ್ ಇಸ್ಲಾಂ ಕಮಿಟಿ ಕಾರ್ಯದರ್ಶಿ ಫಯಾಜ್ ತೋಟದ, ನಿರ್ದೇಶಕ ನಾಸೀರ ಸುರಪುರ, ಮಾಸುಮಲಿ ಮದಗಾರ ಮುಖ್ಯ ಶಿಕ್ಷಕಿ ಮಾಜನಬಿ ಹಣಗಿ, ಫಾತೀಮ ಕಡ್ಲಿಮಟ್ಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X