ಗದಗ | ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ನೋವಿನ ಸಂಗತಿ: ರೈತ ಮುಖಂಡ ವಿಠ್ಠಲ ಜಾಧವ್

Date:

Advertisements

ನ್ಯಾಯಾಧೀಕರಣದ ಅಂತಿಮ ಆದೇಶವಾಗಿ, ದೀರ್ಘ ಅವಧಿ ಗತಿಸಿದರೂ ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ಆಗುತ್ತಿರುವುದು ನೋವಿನ ಸಂಗತಿ. ನಮ್ಮ ಉತ್ತರ ಕರ್ನಾಟಕದಲ್ಲಿ ನಾಲ್ಕು ದಶಕಗಳಿಂದ ರೈತರನ್ನು ಕಡೆಗಣಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿಯಾಗಿದೆ ಎಂದು ರೈತ ಮುಖಂಡ ವಿಠ್ಠಲ ಜಾಧವ್ ಹೇಳಿದರು.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಕರ್ನಾಟಕ ರೈತ ಸಂಘಟನೆಗಳ ಮಹಾಸಂಘ ಒಕ್ಕೂಟ ಹಾಗೂ ಮಹದಾಯಿ ಕಳಸ ಬಂಡೂರಿ ಹೋರಾಟದ ಮುಖಂಡರು, ಮಹದಾಯಿ, ಕಳಸಾ-ಬಂಡೂರಿ ಜಾರಿಗೊಳಿಸಬೇಕು ಮತ್ತು ರೈತ ಹುತಾತ್ಮ ಸ್ಮಾರಕ ಅಭಿವೃದ್ಧಿ ಆಗಬೇಕೇಂದು ಉಪವಾಸ ಸತ್ಯಾಗ್ರಹ ನಡೆಸಿ, ತಹಶೀಲ್ದಾರ್ ಮೂಲಕ ಸಂಸದ ಪಿ ಸಿ ಗದ್ದಿಗೌಡ್ರ ಅವರಿಗೆ ಮನವಿ ಸಲ್ಲಿಸಿ, ಮಾತನಾಡಿದರು.

ನರಗುಂದ೧

“ಮಹದಾಯಿಯ ಅಂತಿಮ ಹೋರಾಟಕ್ಕೆ ಸಜ್ಜಾಗಿದ್ದೇವೆ. ಸರಕಾರಕ್ಕೆ ಕಳಸಾ ಬಂಡೂರಿ ಮಹದಾಯಿ ಯೋಜನೆ ಜಾರಿ ಮಾಡಲು ಆಗುವುದಿಲ್ಲವೋ, ಆಗುತ್ತದೆಯೋ ಎಂದಾದರೂ ಹೇಳಲಿ. ಎಲ್ಲ ವ್ಯಾಜ್ಯವೂ ಕೊನೆಯಾಗಬೇಕು” ಎಂದು ಆಗ್ರಹಿಸಿದರು.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ಜೀವ ಕಳೆದುಕೊಳ್ಳುವ ಹಂತದಲ್ಲಿದೆ ಐತಿಹಾಸಿಕ ಮಳಖೇಡ ಕೋಟೆ

1980ರಲ್ಲಿ ರೈತ ಬಂಡಾಯದಲ್ಲಿ ರೈತರಿಗಾಗಿ ಪ್ರಾಣತ್ಯಾಗ ಮಾಡಿದ ‘ಈರಪ್ಪ ಕಡ್ಲಿಕೊಪ್ಪ’ ಇವರ ವೀರಗಲ್ ಅಭಿವೃದ್ಧಿ ಮತ್ತು ಸ್ಮಾರಕ ನಿರ್ಮಾಣ ಮಾಡಿ ಹುತಾತ್ ರೈತನಿಗೆ ಗೌರವ ನೀಡಬೇಕೆಂದು ಮಹಾತ್ಮ ಗಾಂಧಿಜಿಯವರ ಸತ್ಯ, ಅಹಿಂಸೆ, ತತ್ವದಡಿ ನಿರಂತರ ಉಪವಾಸ ಸತ್ಯಾಗ್ರವನ್ನು ಹಮ್ಮಿಕೊಂಡಿದ್ದೇವೆ. ಪರಿಹಾರ ಸಿಗದಿದ್ದಲ್ಲಿ ನಿರಂತರ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X