ಗದಗ | ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಜೋಳ ವಿತರಣೆ: ಕರವೇಯಿಂದ ದೂರು

Date:

Advertisements

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಜೋಳಗಳನ್ನು ವಿತರಣೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ಕೆಲವು ಗ್ರಾಹಕರು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ ನಡೆಸಿದ ಬಳಿಕ ಕರವೇ ಮುಖಂಡರು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತಾಲೂಕು ಆಹಾರ ನಿರೀಕ್ಷಕ ಅಧಿಕಾರಿ ಜಗದೀಶ್ ಅಮಾತಿ ಅವರು ನ್ಯಾಯಬೆಲೆ ಅಂಗಡಿಗಳಿಗೆ ದಾಳಿ ಮಾಡಿದ್ದಲ್ಲದೇ, ಕಳಪೆ ಜೋಳವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉತ್ತಮ ಗುಣಮಟ್ಟದ ಜೋಳವನ್ನು ವಿತರಿಸಲು ಕ್ರಮ ಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕರ್ನಾಟಕದ ಲಾರಿ ಚಾಲಕನಿಗೆ ಅಮಾನುಷ ಹಲ್ಲೆಗೈದ ತಮಿಳುನಾಡು ಟ್ರಾಫಿಕ್ ಪೊಲೀಸ್: ವಿಡಿಯೋ ವೈರಲ್

Advertisements

ಇಲ್ಲಿವರೆಗೂ ಕಳಪೆ ಜೋಳವನ್ನು ಯಾರು ತೆಗೆದುಕೊಂಡು ಹೋಗಿದ್ದರೋ ಅವರು ತಿರುಗಿ ನ್ಯಾಯ ಬೆಲೆ ಅಂಗಡಿಗಳಿಗೆ ಹಿಂತಿರುಗಿಸಿದರೆ ಹೊಸ ಗುಣಮಟ್ಟದ ಜೋಳಗಳನ್ನು ವಿತರಿಸಲಿದ್ದಾರೆ. ಒಂದು ವಿತರಣೆ ಮಾಡದಿದ್ದರೆ ಕರವೇ ಸಂಘಟನೆ ಹೋರಾಟ ಮಾಡುವುದಾಗಿ ಕರವೇ ಜಿಲ್ಲಾಧ್ಯಕ್ಷ ಚಂದ್ರು ಪೂಜಾರ್ ಎಚ್ಚರಿಕೆ ನೀಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X