ಗದಗ | ಕಳಪೆ ಬೀಜ ವಿತರಣೆ; ಕ್ರಮಕ್ಕೆ ಕರವೇ ಆಗ್ರಹ

Date:

Advertisements

ಕಳಪೆ ಬೀಜ ವಿತರಣೆ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಇದರಿಂದ ರೈತರ ಶ್ರಮವೆಲ್ಲಾ ವ್ಯರ್ಥವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಅಧ್ಯಕ್ಷ ಶರಣು ಗೋಡಿ ಆಕ್ರೋಶ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ‌ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರೈತರಿಗೆ ಕಳಪೆ ಸೂರ್ಯಕಾಂತಿ ಬೀಜ ವಿತರಿಸಿದ ಸಿಜೇಟಾ ಕಂಪೆನಿಯ ವಿರುದ್ಧ ಮುಂಡರಗಿ ಬಂದ್‌ಗೆ ಕರೆ ನೀಡಿದ್ದಾರೆ.

“ತಾಲೂಕಿನ ರೈತರಿಗೆ ಸಿಜೇಟಾ ಕಂಪನಿಯು ಸಾಕಷ್ಟು ಸೂರ್ಯಕಾಂತಿ ಬೀಜ ಪೂರೈಸಿದೆ. ಆದರೆ ಪೂರೈಸಿದ ಸೂರ್ಯಕಾಂತಿ ಬೀಜ ಕಳಪೆ ಮಟ್ಟದ್ದಾಗಿದೆ. ಆ ಬೀಜಗಳನ್ನು ಕೆಲವು ರೈತರು ಹೊಲದಲ್ಲಿ ‌ಬಿತ್ತಿದ್ದಾರೆ. ಕಳಪೆ ಬೀಜ ಆಗಿದ್ದರಿಂದ ಹೊಲದಲ್ಲಿ ಬೆಳೆದಿರುವುದಿಲ್ಲ. ಇಂತಹ ಕಳಪೆ ಬೀಜ ವಿತರಿಸಿ ರೈತರಿಗೆ ಮೋಸ ಮಾಡಿರುವ ಸಿಜೇಟಾ ಕಂಎನಿ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ

ಕರವೇ ಅಧ್ಯಕ್ಷ ರಾಮನಗೌಡ ಹಳೇಮನಿ, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಮಾರುತಿ ಇಳಿಗೇರ, ಕುಮಾರ ರಾವಣ್ಣವರ, ಜಿಲ್ಲಾ ಉಪಾಧ್ಯಕ್ಷ ಭರಮಣ್ಣ ಕಿಲಾರಿ, ಬೆಟಗೇರಿ ನಗರ ಅಧ್ಯಕ್ಷ ದಾವಲ್ ಸಾಬ್ ತಹಶೀಲ್ದಾರ್, ಜಿಲ್ಲಾ ಕಾರ್ಯದರ್ಶಿ ಮುತ್ತಣ್ಣ ಮುಂಡವಾಡ, ಗದಗ ತಾಲೂಕ ಸಂಚಾಲಕ ಸಲೀಂ ಬೋಧಲ್ಲೆಖಾನ, ಗದಗ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಶೋಭಾ ಕಲಾಲ, ಸಲೀಂ ಶಿರವಾರ ಹಾಗೂ ಕಾರ್ಯಕರ್ತರು, ರೈತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X