ಗದಗ | ಯಶ್‌ ಅಭಿಮಾನಿಗಳ ಸಾವು: ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಸಚಿವ ಪಾಟೀಲ್‌

Date:

Advertisements

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಜನವರಿ 8ರಂದು ನಟ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಟೌಟ್ ನಿಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಮೃತಪಟ್ಟಿದ್ದರು. ಮೃತಪಟ್ಟ ಯುವಕರ ಮನೆಗೆ ಕಾನೂನು, ಗದಗ ಜಿಲ್ಲಾ ಉಸ್ತುವಾರಿ ಸಚಿವ‌ ಡಾ ಎಚ್ ಕೆ ಪಾಟೀಲ್‌ ಅವರು ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಪರಿಹಾರ ಚೆಕ್ ವಿತರಿಸಿದರು.

ಸೂರಣಗಿ ಗ್ರಾಮದಲ್ಲಿ ಜರುಗಿದ ದುರ್ಘಟನೆಯಲ್ಲಿ ಮೃತರಾದ ಹನುಮಂತಪ್ಪ, ಮಜ್ಜೂರಪ್ಪ ಹರಿಜನ, ಮುರಳಿ ನೀಲಪ್ಪ ನಡುವಿನಮನಿ, ನವೀನ, ನೀಲಪ್ಪ, ಗಾಜಿ ಅವರುಗಳ ಕುಟುಂಬಗಳಿಗೆ ಹಾಗೂ ಗಾಯಾಳುಗಳಾದ ಮಂಜುನಾಥ, ಸಿದ್ದಪ್ಪ ಹರಿಜನ, ಹನುಮಂತ, ಗಾಳೆಪ್ಪ ಹರಿಜನ ಹಾಗೂ ಪ್ರಕಾಶ, ಶಿವಪ್ಪ, ಮ್ಯಾಗೇರಿ ಅವರ ಕುಟುಂಬಗಳ ನೆರವಿಗೆ ಸರ್ಕಾರದ ವತಿಯಿಂದ ಅಗತ್ಯದ ಪರಿಹಾರ ವಿತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್‌ ಅವರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50,000 ಪರಿಹಾರವನ್ನು ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50,000 ಪರಿಹಾರದ ಚೆಕ್‍ಗಳನ್ನು ಕುಟುಂಬ ಸದಸ್ಯರುಗಳಿಗೆ ವಿತರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೀದಿ ವ್ಯಾಪಾರಿಗಳಿಗೆ ಮಾರ್ಷಲ್‌ಗಳ ಕಿರುಕುಳ; ಆರೋಪ

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, “ಮೃತರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಮೂವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ಹಾಗೂ ಮೂವರು ಗಾಯಾಳುಗಳಿಗೆ‌ ತಲಾ ಐವತ್ತು ಸಾವಿರ ಪರಿಹಾರದ ಚೆಕ್ಕುಗಳನ್ನು ವಿತರಿಸಲಾಗಿದೆ. ಘಟನೆಯಲ್ಲಿ ಇನ್ನೊಬ್ಬ ಗಾಯಾಳು ನಾಗರಾಜ ಅವರನ್ನೂ ಭೇಟಿಯಾಗಿದ್ದು, ಅವರಿಗೂ ಪರಿಹಾರ ಕೊಡಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ” ಎಂದರು.

“ಮೃತರ ಕುಟುಂಬಕ್ಕೆ ಭೂ ಒಡೆತನ ಯೊಜನೆಯಡಿ, ಭೂಮಿ ನೀಡಲು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ನಂತರ ಅವರಿಗೆ ಅನುಕಂಪದ ಆಧಾರದಲ್ಲಿ ಭೂಮಿ‌ ನೀಡಲು ಕ್ರಮ ವಹಿಸಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X