ಗದಗ | ಗಣರಾಜ್ಯೋತ್ಸವಕ್ಕೆ ಎಡಿಎಸ್ಎಸ್ ವತಿಯಿಂದ ಸಂವಿಧಾನ‌ ಪೂರ್ವ ಪೀಠಿಕೆ ಕಂಠಪಾಠ ಸ್ಪರ್ಧೆ

Date:

Advertisements

ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜನವರಿ 26, ಗಣರಾಜ್ಯೋತ್ಸವ ದಿನದಂದು ಸಂವಿಧಾನ ಪೂರ್ವ ಪೀಠಿಕೆ ಕಂಠಪಾಠ ಸ್ಪರ್ಧೆ ಏರ್ಪಡಿಸುವ ಉದ್ದೇಶದಿಂದ ಪೂರ್ವಭಾವಿ ಸಭೆ ನಡೆಸಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಡಿಎಸ್ಎಸ್ ಜಿಲ್ಲಾ ಅಧ್ಯಕ್ಷ ಶಿವಾನಂದ ತಮ್ಮನ್ನವರ, ಇಂದಿನ ಯುವಕರನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಯುವಕರಲ್ಲಿ ಸಂವಿಧಾನ ಕುರಿತು ಅರಿವು ಮೂಡಿಸಿ ಜಾಗೃತಗೊಳಿಸುವುದು ಮುಖ್ಯವಾಗಿದೆ ಎಂದರು.

ಹೊಸ ಹೊಸ ಪ್ರಯತ್ನಗಳನ್ನು ನಾವು ಮಾಡುತ್ತಾ ಬಂದಿದ್ದೇವೆ. ಈ ಹಿಂದೆ ಜೈಭೀಮ್ ಸಿನೆಮಾ ಜನರಿಗೆ ತೋರಿಸಲಾಗಿದೆ. ಅಂಬೇಡ್ಕರ ಅವರ ವಿಚಾರಗಳ ಕುರಿತು, ಸಂವಿಧಾನದ ಕುರಿತು ಅನೇಕ ಕಾರ್ಯಕ್ರಮಗಳನ್ನು ನಾವು ಮಾಡಿಕೊಂಡು ಬಂದಿದ್ದೇವೆ.

Advertisements

ನಾವು ನಿಮ್ಮ ವಯಸ್ಸಿನಲ್ಲಿ ಇದ್ದಾಗ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ, ಹೂ ಮಾಲೆ ಹಾಕಿ ಸುಮ್ಮನಿದ್ದು ಬಿಡ್ತಿದ್ವಿ. ಸಂಘಟನೆಗೆ ಸಮಾನ ಒಡನಾಡಿಗಳ ಜೊತೆಗೆ ಬಂದ ಮೇಲೆ ಅಂಬೇಡ್ಕರ್ ಅಂದ್ರೆ ಏನು, ಅವರ ವಿಚಾರಗಳೇನು ತಿಳಿದುಕೊಳ್ಳುತ್ತಿದ್ದೇವೆ. ನೀವು ಯುವಕರು, ನಿಮಗೆ ಈಗಲೇ ಅಂಬೇಡ್ಕರ್ ವಿಚಾರಗಳನ್ನು ತಿಳಿದುಕೊಳ್ಳುವುದಕ್ಕೆ ಸಾಕಷ್ಟು ಅವಕಾಶಗಳಿವೆ. ಅವರನ್ನು ತಿಳಿದುಕೊಳ್ಳಬೇಕು, ಸಂವಿಧಾನ ಏನು ಯಾಕೆ ಮುಖ್ಯ, ಅದನ್ನು ಯಾಕೆ ನಾವು ಉಳಿಸಿಕೊಳ್ಳಬೇಕೆಂಬುದರ ಕುರಿತು ಅರಿತುಕೊಳ್ಳಬೇಕು ಎಂದು ಯುವಕರಿಗೆ ಮನವರಿಕೆ ಮಾಡಿದರು.

ಈ ಸಭೆಯಲ್ಲಿ ಎಡಿಎಸ್ಎಸ್ ಗೌರವ ಅಧ್ಯಕ್ಷ ರಾಘವೇಂದ್ರ ಬಿನ್ನಾಳ, ಮುಖಂಡರಾದ ನಿತೀಶ್ ಗಟ್ಟೆನ್ನವರ, ಕರುನಾಡ ಗರ್ಜನೆ ಸಂಪಾದಕ ಶೌಕತ್ ಕಾತರಕಿ ಹಾಗೂ ನಗರದ ಯುವಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X