ಗದಗ | ಕೆ ಎಚ್‌ ಪಾಟೀಲ ಆಸ್ಪತ್ರೆಯಲ್ಲಿ ಬಾಣಂತಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

Date:

Advertisements

ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟಿರುವ ಘಟನೆ ಭಾನುವಾರ ಗದಗ ಜಿಲ್ಲೆಯ ಕೆ ಎಚ್‌ ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದಿದೆ. ವೈದ್ಯರು ಸಕಾಲದಲ್ಲಿ ಚಿಕಿತ್ಸೆ ಕೊಡದ ಕಾರಣಕ್ಕೆ ಸಾವಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಗದಗ ಜಿಲ್ಲೆ ನರಗುಂದ ಪಟ್ಟಣದ ಸುಜಾತಾ ಜೋಗಣ್ಣವರ (22) ಮೃತಪಟ್ಟ ಬಾಣಂತಿ.

ಹೆರಿಗೆಗಾಗಿ ನರಗುಂದದಿಂದ ಗದಗ ಜಿಲ್ಲಾ ಆಸ್ಪತ್ರೆಗೆ ಸುಜಾತಾ ಅವರನ್ನು ಕರೆತರಲಾಗಿತ್ತು. ಭಾನುವಾರ ಬೆಳಿಗ್ಗೆ ಹೆರಿಗೆಯಾದ ಒಂದು ತಾಸಿನಲ್ಲಿ ಬಾಣಂತಿ ತಲೆ ಸುತ್ತಿ ಬಿದ್ದಿದ್ದಾರೆ. ವೈದ್ಯರು ತಕ್ಷಣ ಚಿಕಿತ್ಸೆ ಕೊಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಬಾಣಂತಿ ಮೃತಪಟ್ಟಿದ್ದಾರೆ ಎಂದು ಸಂಬಂಧಿ ದತ್ತು ಜೋಗಣ್ಣವರ ಆರೋಪಿಸಿದ್ದಾರೆ.

Advertisements

ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತನಿಧಿ ಕೇಂದ್ರ ಇದ್ದರೂ ರೋಗಿಗಳ ಕಡೆಯವರೇ ರಕ್ತ ಹೊಂದಿಸಬೇಕು ಎಂದು ಆಸ್ಪತ್ರೆಯ ಸಿಬ್ಬಂದಿ ಕಾಡಿಸುತ್ತಾರೆ. ಕಷ್ಟಪಟ್ಟು ರಕ್ತ ಹೊಂದಿಸಿಕೊಟ್ಟರೂ ಬಾಣಂತಿಯನ್ನು ಉಳಿಸಿಕೊಡಲಿಲ್ಲ ಎಂದು ದೂರಿದರು.

ಇದನ್ನೂ ಓದಿ: ಗದಗ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ದೇಹದ ರಕ್ತನಾಳದಲ್ಲಿ ರಕ್ತಸ್ರಾವ ಮತ್ತು ರಕ್ತ ಹೆಪ್ಪುಗಟ್ಟುವಿಕೆಯಿಂದ (ಡಿಐಸಿ) ಬಾಣಂತಿ ಮೃತಪಟ್ಟಿದ್ದಾರೆ. ಗರ್ಭಿಣಿ ಇದ್ದಾಗ ಸರಿಯಾಗಿ ತೋರಿಸಿಕೊಂಡಿಲ್ಲ. ಹೆರಿಗೆಯಲ್ಲಿ ಹೈರಿಸ್ಕ್ ಇದ್ದ ಕಾರಣಕ್ಕೆ ಕೊನೆ ಕ್ಷಣದಲ್ಲಿ ಜಿಲ್ಲಾ ಆಸ್ಪತ್ರೆಗೆ ಬಂದಿದ್ದಾರೆ. ಈ ರೀತಿಯ ಸಮಸ್ಯೆ ಕಾರಣಕ್ಕೆ ಹೆರಿಗೆ ಆದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟರು. ಮಗು ಆರೋಗ್ಯದಿಂದ ಇದೆ ಎಂದು ಸಂಸ್ಥೆಯ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಮೃತ ಸುಜಾತರ ಕುಟುಂಬಸ್ಥರು ವೈದ್ಯರ ಮೇಲೆಯೂ, ವೈದ್ಯರು ಬಾಣಂತಿಯ ಆರೋಗ್ಯ ಸ್ಥಿತಿಯ ಬಗ್ಗೆಯೂ ಆರೋಪ ಮಾಡಿದ್ದಾರೆ. ಆದರೆ, ಬಾಣಂತಿ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X