ಗದಗ | ಕಂದಾಯ ಸಚಿವ ಕೃಷ್ಣಭೈರೇಗೌಡರಿಂದ ಪ್ರಗತಿ ಪರಿಶೀಲನೆ

Date:

Advertisements

ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫ್ರೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಸೂಚಿಸಿದ್ದಾರೆ.

ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ನ.07) ಜರುಗಿದ ಕಂದಾಯ ಇಲಾಖೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಸರ್ಕಾರದ ಪರಿಹಾರ ಮೊತ್ತಗಳನ್ನು ರೈತರಿಗೆ ನೇರವಾಗಿ ಖಾತೆ ಜಮೆ ಮಾಡಲು ಫ್ರೂಟ್ ತಂತ್ರಾಂಶ ಬಳಸಲಾಗುತ್ತಿದೆ. ರೈತರೆಲ್ಲರೂ ತಮ್ಮ ಜಮೀನಿನ ನಿಖರವಾದ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪರಿಹಾರ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ರೈತರಿಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ಫ್ರೂಟ್ ತಂತ್ರಾಂಶದಲ್ಲಿ ಈಗಾಗಲೇ ನೋಂದಣಿ ಮಾಡಲಾಗಿದ್ದು. ಬಾಕಿ ಉಳಿದ ಶೇ.20ರಿಂದ 25ರಷ್ಟು ರೈತರು ನೋಂದಣಿ ಕಾರ್ಯವನ್ನು ನವೆಂಬರ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು.

ಜಿಲ್ಲೆಯಲ್ಲಿ ಬರ ಆವರಿಸಿದ ಹಿನ್ನಲೆಯಲ್ಲಿ, ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು. ಮೇವಿನ ಕೊರತೆ ಇದ್ದಲ್ಲಿ ಅಗತ್ಯಕ್ಕನುಸಾರ ಮೇವನ್ನು ಖರೀದಿ ಮಾಡಿಕೊಳ್ಳುವಂತೆ ಸೂಚಿಸಿದರು. ನೀರಿನ ವ್ಯವಸ್ಥೆ ಇರುವೆಡೆ ರೈತರಿಗೆ ಮೇವಿನ ಬೀಜದ ಕಿಟ್‌ಗಳನ್ನು ನೀಡಲಾಗುವುದು ಅವರು ಮೇವನ್ನು ಬೆಳೆದು ತಮ್ಮ ಜಾನುವಾರುಗಳಿಗೆ ಬಳಸಿಕೊಳ್ಳಬಹುದಾಗಿದೆ. ಅಧಿಕವಾದಲ್ಲಿ ಸರ್ಕಾರಕ್ಕೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡಬಹುದಾಗಿದೆ. ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ ಮೇವಿನ ಕೊರತೆ ಆಗದಂತೆ ನಿಗಾವಹಿಸಲು ತಿಳಿಸಿದರು.

Advertisements

ಜಿಲ್ಲಾಧಿಕಾರಿಗಳ ಖಾತೆಯಲ್ಲಿ 16.5 ಕೋಟಿ ರೂ. ಅನುದಾನ ಇದ್ದು ಇದನ್ನು ಅಗತ್ಯಕ್ಕನುಸಾರವಾಗಿ ಕುಡಿಯುವ ನೀರು, ಜಾನುವಾರುಗಳ ಮೇವು ಖರೀದಿಗೆ ಬಳಕೆ ಮಾಡಿಕೊಳ್ಳಬಹುದಾಗಿದೆ. ಅಗತ್ಯಬಿದ್ದಲ್ಲಿ ಗೋಶಾಲೆ, ಮೇವು ಬ್ಯಾಂಕ ತೆರೆಯಲು ತಿಳಿಸಿದರು.

ಬಗರಹುಕುಂ ಅಡಿ ದುರ್ಬಳಕೆ ತಡೆಗಟ್ಟಲು ಮಂಜೂರಾತಿಗೆ ಡಿಜಿಟಲ್ ಸಹಿಗೆ ಅವಕಾಶ ಮಾಡಿಕೊಟ್ಟು ಡಿಜಿಟಲ್ ಸಾಗುವಳಿ ಚೀಟಿಯನ್ನು ನೀಡಲಾಗುತ್ತದೆ. ಈ ಹಿಂದೆ ನೀಡಿದ ಸಾಗುವಳಿ ಚೀಟಿ ನೀಡಿದ ನೈಜತೆಯ ಬಗ್ಗೆ, ರಾಜ್ಯದಲ್ಲಿ ಲಕ್ಷಾಂತರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಡಿಜಿಟಲಿಕರಣ ಮಾಡಲಾಗುತ್ತಿದೆ ಎಂದರು.

ಸರ್ಕಾರಿ ಭೂಮಿ ರಕ್ಷಣೆಗೆ ಬೀಟ್ ಪದ್ಧತಿ: ಸರ್ಕಾರಿ ಜಮೀನುಗಳ ರಕ್ಷಣೆಗಾಗಿ ಆಪ್ ಸಿದ್ಧಪಡಿಸಲಾಗುತ್ತಿದ್ದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಸರ್ಕಾರಿ ಜಮೀನುಗಳನ್ನು ಆಪ್ ಮೂಲಕ ಡಾಟಾಬೇಸನ್ನು ಸಿದ್ಧಪಡಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರಿ ಜಾಗೆಗಳ ಸ್ಥಳಕ್ಕೆ ಗ್ರಾಮ ಲೆಕ್ಕಿಗರು ಭೇಟಿ ನೀಡಿ ಭೂಮಿ ಒತ್ತುವರಿ ಆಗಿದೆಯೋ, ಇಲ್ಲವೋ ಎಂಬದುನ್ನು ಪರಿಶೀಲನೆ ನಡೆಸಿ ಆಪ್ ಮೂಲಕ ಆ ಸ್ಥಳದಿಂದಲೇ ಧೃಡೀಕರಿಸಿ ವರದಿಯನ್ನು ಆಪ್‍ಲೊಡ ಮಾಡಬೆಕು. ಒಂದು ವೇಳೆ ಸರಕಾರಿ ಜಮೀನು ಒತ್ತುವರಿ ಆಗಿದ್ದಲ್ಲಿ ಆಪ್ ಬಳಸಿ ಆನಲೈನ್ ಮೂಲಕವೇ ತಹಶೀಲ್ದಾರರಿಗೆ ವರದಿ ನೀಡಬೇಕು. ಈ ಪ್ರಕ್ರಿಯೆಯಿಂದ ಸರಕಾರಿ ಭೂ-ಕಬಳಿಕೆ ನಿಯಂತ್ರಣಗೊಳ್ಳಲಿದೆ ಎಂದರು.

ಕೋರ್ಟ್‌ ಕೇಸ್:  ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜಮೀನುಗಳ ವಿಷಯವಾಗಿ ಅನೇಕ ಪ್ರಕರಣಗಳು ಕೋರ್ಟ್‌ ಮೆಟ್ಟಿಲೇರಿದ್ದರೂ ಸಹ ಯಾವುದೇ ವಕಾಲತ್ತು ಹಾಕದೇ ಇದ್ದ  ರಾಜ್ಯದ ಸುಮಾರು 10,500ಪ್ರಕರಣಗಳಿದ್ದವು. ಈ ಕುರಿತ ಪರಿಶೀಲನೆ ನಡೆಸಿ ವಕಾಲತ್ತು ಹಾಕಿಸಿದ್ದರಿಂದ ಸುಮಾರು 2,500 ಕೇಸುಗಳು ಮಾತ್ರ ಉಳಿದುಕೊಂಡಿವೆ.

ಆಫೀಸ: ಕಂದಾಯ ಇಲಾಖೆ ಕೆಲಸ ಕಾರ್ಯಗಳೆಲ್ಲವೂ ಚುರುಕುಗೊಳಿಸುವ ನಿಟ್ಟಿನಲ್ಲಿ ನಿಧಾನಗತಿ ತಪ್ಪಿಸಲು ಇ-ಆಫೀಸ ವ್ಯವಸ್ಥೆ ಅಳವಡಿಸಲಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸಂಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಇ-ಆಫೀಸ ಮೂಲಕವೇ ಕಡತಗಳ ಚಲನೆಯಾಗಬೇಕು. ಇದರಿಂದ ವಿಳಂಭಕ್ಕೆ ವಿದಾಯ ದೊರೆಯುತ್ತದೆ. ನಮ್ಮ ಸರ್ಕಾರದ ಜನಪರ ಹಾಗೂ ಪಾರದರ್ಶಕ ಆಡಳಿತದ ಉದ್ದೇಶ ಸಾಕಾರಗೊಳ್ಳಲಿದೆ.

ದಾಖಲೆಗಳ ಡಿಜಿಟಲಿಕರಣ: ರೆಕಾರ್ಡ್ಸ್‌ ರೂಂನಲ್ಲಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಮೂಲಕ ಶಾಶ್ವತವಾಗಿ ದಾಖಲೆಗಳನ್ನು ಉಳಿಸಲು ಡಿಜಿಟಲಿಕರಣ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ದಾಖಲೆಗಳ ಸೂಕ್ತ ರಕ್ಷಣೆಗೆ ಉತ್ತಮ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ ರಕ್ಷಣೆ ಮಾಡುತ್ತೇವೆ. ಜನಸಾಮಾನ್ಯರಿಗೆ ಸಲೀಸಾಗಿ ಅವರಿಗೆ ಸಂಬಂಧಿಸಿದ ದಾಖಲೆಗಳು ಸಿಗುವಂತೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಕೊನೆಯಲ್ಲಿರುವ ಗ್ರಾಮಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಗಜೇಂದ್ರಗಡ ತಾಲೂಕಿನ ಕೆಲವು ಗ್ರಾಮಗಳು, ರೋಣ ತಾಲೂಕಿಗೆ ಸೇರ್ಪಡೆ ಹಾಗೂ ದಾಖಲೆಗಳು ಮಾರ್ಪಾಡಾಗದೇ ಇರುವುದರಿಂದ ಕೆಲವು ಗ್ರಾಮಗಳ ರೈತರಿಗೆ ಬೆಳೆ ವಿಮೆ ಮತ್ತು ಪರಿಹಾರ ಪಡೆಯಲು ತೊಂದರೆಯಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಭೈರೇಗೌಡ ಆದಷ್ಟು ಬೇಗನೆ ಈ ಸಮಸ್ಯೆಗೆ ಪರಿಹಾರ ನೀಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನ ಪರಿಷತ ಸದಸ್ಯರಾದ ಎಸ್.ವಿ.ಸಂಕನೂರ ಮಾತನಾಡಿ, ಲಕ್ಷ್ಮೇಶ್ವರ ಮತ್ತು ಗದಗ ನಗರದಲ್ಲಿ ಸಮರ್ಪಕ ನೀರು ಪೂರೈಕೆ ಆಗುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ನಗರ ಸಭೆ ಗಮನಕ್ಕೆ ತಂದರು.

ಇದಕ್ಕೆ ಪ್ರತಿಯಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಸಚಿವರು, ನೀರು ಪೂರೈಕೆಯಲ್ಲಿ ಆಗುತ್ತಿರುವ ಸೋರಿಕೆ ತಡೆದು ನಿಯಮಿತವಾಗಿ ಜನಸಾಮಾನ್ಯರಿಗೆ ನೀರು ಪೂರೈಕೆ ಮಾಡಲು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿ, ಜಿಲ್ಲೆಯಲ್ಲಿ ಸದ್ಯ 11ಹೋಬಳಿಗಳಿದ್ದು ಜನಸಂಖ್ಯೆ ಅನುಸಾರ ಮೂರು ಹೊಸ ಹೊಬಳಿ ಆಗಬೇಕಿದೆ. ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಜೊತೆಗೆ ತಹಸೀಲ್ದಾರರಿಗೆ ಮೂರು ವಾಹನಗಳ ಅಗತ್ಯವಿದ್ದು ಪೂರೈಸುವಂತೆ ಕೋರಿದರು. ಹೊಸ ತಾಲೂಕು ಹಾಗೂ ಶೀಥಿಲಾವಸ್ಥೆಯಲ್ಲಿರುವ ತಾಲೂಕು ಕಚೇರಿಗಳ ದುರಸ್ತಿಗೆ ಅನುದಾನ ಒದಗಿಸುವಂತೆ ಕೋರಿದರು.

ಸಭೆಯಲ್ಲಿ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆ ಆಯುಕ್ತರಾದ ಪಿ.ಸುನೀಲಕುಮಾರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯಕ್ ಸೇರಿದಂತೆ ತಹಸೀಲ್ದಾರರು, ಕಂದಾಯ ನೀರಿಕ್ಷಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X