ಗದಗ | ಜೀವ ವೈವಿಧ್ಯತೆಯ ರಕ್ಷಣೆ ನಮ್ಮ ಪ್ರಥಮ ಆದ್ಯತೆ: ಅರಣ್ಯ ಸಂರಕ್ಷಣಾಧಿಕಾರಿ

Date:

Advertisements

ಮನುಕುಲದ ಭವಿಷ್ಯ ಚೆನ್ನಾಗಿರಬೇಕಾದರೆ ಜೀವ ವೈವಿಧ್ಯತೆ ಕಾಪಾಡಿಕೊಳ್ಳಬೇಕು. ಜೀವ ವೈವಿಧ್ಯತೆಯ ರಕ್ಷಣೆಯ ಅಗತ್ಯ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ. ಪರಿಸರದ ರಕ್ಷಣೆ ಮಾಡುವಲ್ಲಿ ಯುವ ಜನಾಂಗ ಆಸಕ್ತಿ ವಹಿಸಬೇಕು ಎಂದು ಧಾರವಾಡ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪಾಯಿ ತಿಳಿಸಿದರು.

ಗದಗ ಜಿಲ್ಲೆಯ ಶಿರಹಟ್ಟಿಯ ಎ.ಪಿ.ಪೂಜಾರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ನಡೆದ ಜೀವ ವೈವಿಧ್ಯತೆಯ ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.

“ರಾಷ್ಟ್ರೀಯಸೇವಾ ಯೋಜನೆಯ ಸಮರ್ಥ ಶಿಬಿರಾರ್ಥಿಗಳು ಸೇವೆಗಾಗಿ ನಾವು ಎಂಬ ಧೋರಣೆ ಅಳವಡಿಸಿಕೊಂಡು ಹಸಿರೀಕರಣ ಮಾಡುವ ಪಣ ತೊಡಬೇಕು. ದೇಶ ರಕ್ಷಣೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ಯಾವಾಗಲೂ ಮುಂದಿರಬೇಕು. ಪರಿಸರ ಮಾಲಿನ್ಯ ತಡೆಯುವಲ್ಲಿ ಕಾರ್ಯೋನ್ಮುಖರಾಗಿ ಕೆಲಸ ಮಾಡಬೇಕು” ಎಂದರು.

Advertisements

ವಿಜಯಪುರದ ಎನ್.ಎಸ್.ಎಸ್. ಅಧಿಕಾರಿ ಎಂ.ಎಸ್.ಮುಲ್ಲಾ ಎನ್.ಎಸ್.ಎಸ್.ದ ಧ್ಯೇಯೋದ್ದೇಶಗಳು ಹಾಗೂ ಶಿಬಿರಾರ್ಥಿಗಳು ಮಾಡಬೇಕಾದ ಕೆಲಸದ ಬಗ್ಗೆ ವಿಸ್ತಾರವಾಗಿ ತಿಳಿಸಿದರು. ಶಿರಹಟ್ಟಿಯ ವಲಯ ಅರಣ್ಯಾಧಿಕಾರಿ ರಾಮಪ್ಪ ಅವರು ಅರಣ್ಯೀಕರಣದ ಮಹತ್ವ ಕಪ್ಪತಗುಡ್ಡದ ಪ್ರಾಮುಖ್ಯತೆ ಕುರಿತು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಬಿ.ಜಿ.ಗಿರಿತಿಮ್ಮಣ್ಣವರ ಅವರು ಮಾತನಾಡಿ ಗ್ರೀನ್ ಯಾನದ ಮುಂದುವರೆದ ಭಾಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸುತ್ತಾ ಕಾರ್ಯಕ್ರಮದ ಮಹತ್ವ ಕುರಿತು ವಿವರಿಸಿದರು.

ಯಲ್ಲಮ್ಮ ಹೊಸೂರ ಹಾಗೂ ರಾಧಿಕಾ ಪಲ್ಲೇದ ಪ್ರಾರ್ಥಿಸಿದರು. ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಎಸ್.ವೈ.ಮುಜಾವರ ಸ್ವಾಗತಿಸಿದರು. ಶ್ರೀಮತಿ ಪರಿಮಳ ವಂದನಾರ್ಪಣೆ ಮಾಡಿದರು. ಶ್ರೀಮತಿ ರಾಜೇಶ್ವರಿ ಸಂಶಿ ಕಾರ್ಯಕ್ರಮ ನಿರೂಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X