ಗದಗ | ಶಾಲೆಯ ಅಡುಗೆ ಸಾಮಗ್ರಿಗಳನ್ನು ಕಳವುಗೈದ ಸಿಬ್ಬಂದಿ ಅಮಾನತು ಮಾಡಲು ಆಗ್ರಹಿಸಿ ಮನವಿ

Date:

Advertisements

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಹಾಯಕರು ಅಕ್ಕಿ, ಹಾಲಿನ ಪುಡಿ ಹಾಗೂ ತರಕಾರಿಗಳನ್ನು ಕದ್ದು ಒಯ್ಯುತ್ತಿರುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದರು. ಸಿಬ್ಬಂದಿಯನ್ನು ಕರ್ತವ್ಯದಿಂದ ಅಮಾನತು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಕುರಿತು, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ರಮೇಶ್ ಹಂಗನಕಟ್ಟಿ ಹಾಗೂ ಗ್ರಾಮಸ್ಥರು ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವ್ಯವಹಾರದ ಕುರಿತು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಮಕ್ಕಳಿಗೆ ಕೊಡುವಂತಹ ಆಹಾರವನ್ನು ಕದ್ದು ಮನೆಗೆ ಒಯ್ಯುವ ಸ್ಥಳೀಯ ಅಡುಗೆ ಸಹಾಯಕರನ್ನು ಅಮಾನತು ಮಾಡಬೇಕು. ಈ ಕೃತ್ಯದಲ್ಲಿ ಶಿಕ್ಷಕ-ಶಿಕ್ಷಕಿಯರು ಕೂಡ ಭಾಗಿಯಾಗಿದ್ದಾರೆ. ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisements

ಇದನ್ನು ಓದಿದ್ದೀರಾ? ಶಿವಮೊಗ್ಗ | ಚಾಲನೆಯ ವೇಳೆ ಮೊಬೈಲ್ ಬಳಸಿದ ಖಾಸಗಿ ಬಸ್ ಚಾಲಕ: ಬಿತ್ತು ಐದು ಸಾವಿರ ದಂಡ!

ಅಡುಗೆ ಸಹಾಯಕಿಯರನ್ನು ಕರ್ತವ್ಯದಿಂದ ಅಮಾನತುಗೊಳಿಸಿ, ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಶಿರಹಟ್ಟಿಗೆ ಬಂದು ಶಿಕ್ಷಣ ಇಲಾಖೆಯ ಕಚೇರಿಯ ಎದುರು ಧರಣಿ ಮಾಡುತ್ತೇವೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಮುಖಂಡರು, ಸೂರಣಗಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X