ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

Date:

Advertisements

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ ಗದಗ ಜಿಲ್ಲೆಯ ಹಳ್ಳಿಗಳು ಸಾಕ್ಷಿ. ಸೋದರ ಸೊಸೆಗೆ ಸೋದರತ್ತೆಯರು ಸೀರೆ ಉಡಿಸಬೇಕು ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಗದಗ ಜಿಲ್ಲೆಯ ಕೆಲ ಭಾಗದಲ್ಲಿ ಕಳೆದ 10-15 ದಿನಗಳಿಂದ ಸೀರೆಗಳ ಮಾರಾಟ ಬಲು ಜೋರಾಗಿದೆ. ಮಹಿಳೆಯರು ತಮ್ಮ ಅಣ್ಣ  ಅಥವಾ ತಮ್ಮನಿಗೆ ಒಬ್ಬಳೇ ಮಗಳಿದ್ದರೆ ಸೋದರತ್ತೆ ಸೀರೆ ಉಡಿಸಬೇಕು. ಇಲ್ಲಾಂದ್ರೆ ಕೇಡಾಗುತ್ತೆ ಅನ್ನೋ ಸುದ್ದಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹಳ್ಳಿಗಳಲ್ಲಿ ಹಬ್ಬಿದೆ.

ಹೀಗಾಗಿ ನಮ್ಮ ಅಣ್ಣ ಅಥವಾ ತಮ್ಮನ ಮಗಳಿಗೆ ಒಳ್ಳೆಯ ಸೀರೆ ಕೊಡಿ ಅಂತ ಮಹಿಳೆಯರು ಕೇಳ್ತಾಯಿದ್ದಾರೆ. ಇದರಿಂದ ಬಟ್ಟೆ ಅಂಗಡಿಗಳ ಮಾಲೀಕರು ಭರ್ಜರಿ ವ್ಯಾಪಾರವಾಗುತ್ತಿದೆ. ಭೀಕರ ಬರ ಹಿನ್ನೆಲೆಯಲ್ಲಿ ಈ ಬಾರಿ ಹಬ್ಬಗಳಲ್ಲಿ ಜನರು ಬಟ್ಟೆ ಖರೀದಿಗೆ ಮುಂದಾಗಿರಲಿಲ್ಲ. ಆದರೆ, ಈ ವದಂತಿ ಗ್ರಾಮೀಣ ಭಾಗದ ಜನರನ್ನು ದಂಗು ಬಡಿಸಿದೆ. ಮಹಿಳೆಯರು ಪಟ್ಟಣದ ಬಟ್ಟೆ ಅಂಗಡಿಗಳಲ್ಲಿ ಸೀರೆ ಖರೀದಿಗೆ ಮುಂದಾಗಿದ್ದಾರೆ.

ಕಳೆದ 15 ದಿನಗಳಿಂದ ತಾಲೂಕಿನ ಮಾಚೇನಹಳ್ಳಿ, ಬೆಳ್ಳಟ್ಟಿ, ಹೊಸಳ್ಳಿ, ನಾಗರಮಡುವು, ತಂಗೋಡ, ಕೋಗನೂರು, ಹಬ್ಬಾಳ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಈ ರೀತಿಯ ವದಂತಿ ಹಬ್ಬಿದೆ. ಸೀರೆ ಕೊಡಿಸದಿದ್ದರೆ ಕೇಡಾಗುತ್ತೆ ಎಂಬ ನಂಬಿಕೆಯಿಂದ ತವರು ಮನೆಗೆ ಹೆಣ್ಣುಮಕ್ಕಳು ಬಂದು ಅಣ್ಣ, ತಮ್ಮನ ಮಗಳಿಗೆ ಸೀರೆ ಉಡಿಸಿ, ಆರತಿ‌ ಮಾಡುವುದು ಸಾಮಾನ್ಯವಾಗಿದೆ.

Advertisements

ಸೊಸೆಗೆ ಹೊಸ ಸೀರೆ ಉಡಿಸಿ ಹಣೆಗೆ ಕುಂಕುಮ ಇಟ್ಟು ಆರತಿ ಬೆಳಗಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ತಾಯಂದಿರು ತವರು ಮನೆಯವರನ್ನು ಹರಸುತ್ತಿದ್ದಾರೆ. ಈ ತರದ ವದಂತಿ ಇದೇ ಮೊದಲೇನಲ್ಲ, ಈ ಮೊದಲು, ತಾಯಿಗೆ ಮಗಳು ಸೀರೆ ಕೊಡಿಸುವುದು, ಒಬ್ಬನೇ ಮಗನಿದ್ದರೆ ಬೆಳ್ಳಿ ಕಡಗ ಕೊಡಿಸುವುದು ಸುದ್ದಿಯಾಗಿತ್ತು.

ಇವುಗಳನ್ನು ಯಾರು ಹಬ್ಬಿಸುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ. ಹಳ್ಳಿಯ ಜನರನ್ನು ಇಂತಹ ವದಂತಿಗಳಿಂದ ದಾರಿ ತಪ್ಪಿಸುವ ಕೆಲಸವಾಗುತ್ತಿದೆ. ಒಟ್ಟಾರೆ ಇಂತಹ ವದಂತಿಗಳು ಜನರಲ್ಲಿ ಪುನ: ಮೌಢ್ಯವನ್ನು ಹುಟ್ಟು ಹಾಕುತ್ತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X