ಗದಗ | ಮನರೇಗಾ ಕೆಲಸ ಪಡೆದು ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸಬಲರಾಗಿ: ಎಡಿಪಿಸಿ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಕಾನೂನುಬದ್ಧವಾಗಿ ‘ಕೆಲಸ ಮಾಡುವ ಹಕ್ಕನ್ನು’ ಪ್ರತಿಪಾದಿಸುತ್ತದೆ. ಆದ್ದರಿಂದ, ಮಹಿಳೆಯರು ತಮ್ಮ ಗ್ರಾಮ ಪಂಚಾಯಿತಿಗೆ ನಮೂನೆ-6ರ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಕೇಳಿ ಪಡೆದುಕೊಳ್ಳಬೇಕು ಎಂದು ಗದಗ ಜಿಲ್ಲಾ ಪಂಚಾಯಿತಿ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕಿರಣ ಎಸ್ ಎಚ್ ಸಲಹೆ ನೀಡಿದರು.

- Advertisement -

ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡ ಮಹಿಳಾ ಸ್ನೇಹಿ ಉದ್ಯೋಗ ಖಾತ್ರಿ ಯೋಜನೆಯ ವಿಶೇಷ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ವಯಸ್ಕ ಸದಸ್ಯರ ಪ್ರತಿ ಕುಟುಂಬಕ್ಕೆ ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಖಾತರಿಯ ಕೂಲಿ ಉದ್ಯೋಗವನ್ನು ಒದಗಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯದ ಭದ್ರತೆಯನ್ನು ಖಚಿತಪಡಿಸುತ್ತದೆ. ಕೌಶಲ್ಯರಹಿತ ಕೆಲಸ ಮಾಡಲು ಮಹಿಳೆಯರು ಸ್ವಯಂ ಪ್ರೇರಣೆಯಿಂದ ಮುಂದೆ ಬರಬೇಕು” ಎಂದರು.

“ಅಳತೆ ಪ್ರಕಾರ ಕೆಲಸ ಮಾಡಿದರೆ 316 ರೂ. ಪಾವತಿಸಲಾಗುತ್ತದೆ. ಪ್ರತಿ ಎನ್ಎಂಆರ್‌ನಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಮಹಿಳೆಯರು ಇರುವಂತೆ ಬಿಎಫ್‌ಟಿ, ಡಿಇಒ ಕ್ರಮವಹಿಸುವಂತೆ ಸೂಚಿಸಿದರು. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆ ಜಾರಿಗೆ ತಂದಿದ್ದು, ಇದರ ಲಾಭ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕಾಗಿದೆ. ಜಿಲ್ಲೆಯಲ್ಲಿ ಶೇ. 60ರಷ್ಟು ಮಹಿಳೆಯರು ಉದ್ಯೋಗ ಖಾತ್ರಿಯಲ್ಲಿ ಕೆಲಸ ನಿರ್ವಹಿಸುವಂತೆ ನೋಡಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ಕೆ ಎಲ್ಲ ಹಂತದ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

ಸಭೆಯಲ್ಲಿ ನರಗುಂದ ತಾಲೂಕು ಪಂಚಾಯತ ಐಇಸಿ ಸಂಯೋಜಕ ಸುರೇಶ ಬಾಳಿಕಾಯಿ ಮಾತನಾಡಿ, “ಮುಂಗಾರು ಮಳೆ ಕೈಕೊಟ್ಟು ಕೈಗೆ ಕೆಲಸ ಇಲ್ಲವಲ್ಲ ಎಂಬ ಕೊರಗುವುದು ಬೇಡ. ಮನರೇಗಾ ಯೋಜನೆಯಡಿ ನಿರಂತರವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆಲಸ ಕೊಡಲಾಗುತ್ತಿದೆ. ಯೋಜನೆಯಡಿ ಕೆಲಸ ಪಡೆದು ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣವಾಗಬೇಕು” ಎಂದು ತಿಳಿಸಿದರು.

ನರೇಗಾ ತಾಂತ್ರಿಕ ಸಂಯೋಜಕ. ಹನಮಂತ ಡಂಬಳ ಮಾತನಾಡಿ, “ಉದ್ಯೋಗ ಖಾತ್ರಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಹೆಚ್ಚಿಸಲು ಎಲ್ಲ ವೈಯಕ್ತಿಕ ಹಾಗೂ ಇತರ ಕಾಮಗಾರಿಗಳ ಎನ್ಎಂಆರ್‌ಗಳನ್ನು ಮಹಿಳೆಯರ ಹೆಸರಿನಲ್ಲಿ ಸೃಜನೆ ಮಾಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಡವರಿಗೆ ಭೂಮಿ ಮಂಜೂರಾತಿ ಗ್ಯಾರಂಟಿ ನೀಡಲಿ: ಮಾರೆಪ್ಪ ಹರವಿ

ಮಹಿಳಾ ಸ್ನೇಹಿ ವಿಶೇಷ ಸಭೆಯಲ್ಲಿ ಹದಲಿ ಗ್ರಾಮ ಪಂಚಾಯಿಯಿ ಪಿಡಿಒ ಎಸ್ ಡಿ ಹಿರೇಮನಿ, ಗ್ರಾಮ ಪಂಚಾಯತ ಅಧ್ಯಕ್ಷ ಗದಿಗೆಪ್ಪ ಮಂತ್ರಿ, ಸದಸ್ಯರುಗಳಾದ ಸಿದ್ದಪ್ಪ ಹಡಗಲಿ, ದಾವಲಬಿ ನರಗುಂದ, ಎನ್‌ಆರ್‌ಎಲ್‌ಎಂ ನರಗುಂದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮೋಹನಕೃಷ್ಣ, ಎನ್‌ಆರ್‌ಎಲ್‌ಎಂ ಸಮ್ಮೂಹ ಮೇಲ್ವಿಚಾರಕ ಲಕ್ಷ್ಮಣ ಪೂಜಾರ, ಎನ್‌ಆರ್‌ಎಲ್‌ಎಂ ಸಿಬ್ಬಂದಿ ಕಿರಣಕುಮಾರ್ ಮತ್ತು ಮನರೇಗಾ ತಾಂತ್ರಿಕ ಸಿಬ್ಬಂದಿ ಹಾಗೂ ಹದಲಿ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಹದಲಿ ಗ್ರಾಮದ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...