ಗದಗ | ಉದಾತ್ತ ಕಾರಣಕ್ಕಾಗಿ ಮಾಡಿದ ತ್ಯಾಗ ಎಂದಿಗೂ ವ್ಯರ್ಥವಾಗದು: ಗಣೇಶ ರಾಠೋಡ

Date:

“ಉದಾತ್ತ ಕಾರಣಕ್ಕಾಗಿ ಮಾಡುವ ತ್ಯಾಗ ಎಂದಿಗೂ ವ್ಯರ್ಥವಾಗದು. ಅಂತಹ ಒಂದು ತ್ಯಾಗವನ್ನು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ್ದಾರೆ. ಭಗತ್ ಸಿಂಗ್ ಮೊದಲು ಕ್ರಾಂತಿಕಾರಿಯಾಗಿ ಯೋಚಿಸಿದ್ದು, ಅವರು ಬೆಳೆಯುತ್ತಾ, ಹೆಚ್ಚಿನ ಸಾಹಿತ್ಯ ಓದುತ್ತಾ, ಜಗತ್ತಿನ ಸಮಾಜವಾದಿ ಚಳುವಳಿವನ್ನು ಅರ್ಥೈಸಿಕೊಂಡು ಅದರಂತೆ ಭಾರತದಲ್ಲೂ ಸಮಾಜವಾದಿ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಪಣ ತೊಟ್ಟರು” ಎಂದು ಎಸ್ ಎಫ್ ಐ ರಾಜ್ಯ ಮುಖಂಡರು ಗಣೇಶ ರಾಠೋಡ್ ಹೇಳಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಿಎಸ್ಎಸ್ ಪ್ರಥಮ ದರ್ಜೆ ಕಾಲೇಜು ಗಜೇಂದ್ರಗಡದ ಐ ಕ್ಯೂ ಎಸ್ ಐ ಮತ್ತು ಭಾರತ ವಿದ್ಯಾರ್ಥಿ ಫೆಡರೇಶನ್ ನೇತೃತ್ವದಲ್ಲಿ ಭಗತ್ ಸಿಂಗ್, ರಾಜಗುರು,  ಸುಖದೇವ ಅವರ ಹುತಾತ್ಮ ದಿನದಂದು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

“ಭಗತ್ ಸಿಂಗ್ ಅವರ ಮೇಲೆ ಜಲಿಯನ್ ವಾಲಾಬಾಗ್ ಘಟನೆ ತುಂಬಾ ಪ್ರಭಾವ ಬೀರಿತ್ತು. ಲಾಲ್ ಲಜಪತ ರಾಯ್ ಅವರನ್ನು ಬ್ರಿಟಿಷ್ ಪೋಲಿಸ್ ಅಧಿಕಾರಿ ಹಲ್ಲೆ ಮಾಡಿ ಸಾಯಿಸಿದ್ದು, ಅದಕ್ಕೆ ಪ್ರತಿಕಾರ ತೀರಿಸಿಕೊಳ್ಳಬೇಕೆಂದು ಅವರು ಸಾಂಡರ್ಸನನ್ನು ಕೊಲ್ಲಲು ಹೋಗಿ ಬೇರೆ ಅಧಿಕಾರಗೆ ಗುಂಡು ಹಾರಿಸಿದ್ದು, ಮತ್ತು ದೆಹಲಿಯ ಅಂದಿನ ಪ್ರದಾನ ಅಸೆಂಬ್ಲಿ ಒಳಗೆ ಬಾಂಬೆ ಹಾಕಿದ್ದು, ಈ ಎರಡು ಘಟನೆಯಿಂದ ಭಗತ್ ಸಿಂಗ್ ಮತ್ತು ಸಂಗಾತಿಗಳನ್ನು ಜೈಲಿಗೆ ಹಾಕಿ ಗಲ್ಲು ಶಿಕ್ಷೆ ವಿಧಿಸಲಾಯಿತು. ಇದರ ವಿರುದ್ಧ ದೇಶವ್ಯಾಪಿ ಹೋರಾಟ ತೀವ್ರಗೊಂಡಿತು. ಜೈಲಿನಲ್ಲಿ ಇದ್ದುಕೊಂಡು ನಿರಂತರ ಓದು ಮತ್ತು ಟಿಪ್ಪಣಿಗಳನ್ನು ಭಗತ್ ಸಿಂಗ್ ಬರೆದರು. ಅದು ಇಂದು ಜೈಲು ಡೈರಿಯಾಗಿ ಪ್ರಕಟಗೊಂಡಿದೆ. ಅದನ್ನು ಓದಿರಿ. ಜೊತೆಗೆ ನಾನೇಕೆ ನಾಸ್ತಿಕನಾದೆ ಎಂಬ ಪುಸ್ತಕವನ್ನು ಅವರು ಬರೆದಿದ್ದಾರೆ. ಅದನ್ನು ವಿದ್ಯಾರ್ಥಿಗಳು ಓದಲು ಸಾಧ್ಯವಾಗಬೇಕು. ಇಲ್ಲ ಕೇವಲ ಅವರ ಪೋಟೋ ಸ್ಟೇಟಸ್ ಹಾಕೊದರಿಂದ ಬದಲಾವಣೆ ಆಗುವುದಿಲ್ಲ. ಹೊಸ ಚಿಂತನೆಗೆ ನಾವು ಒಗ್ಗಬೇಕು. ಅದೇ ಇಂತಹ ಕ್ರಾಂತಿಕಾರಿಗಳಿಗೆ ಸಲ್ಲಿಸುವ ನಿಜವಾದ ಗೌರವ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷ ಚಂದ್ರು ರಾಠೋಡ ಪ್ರಸ್ತಾವಿಕ ಮಾತನಾಡಿ, ಭಗತ್ ಸಿಂಗ್, ರಾಜಗುರು, ಸುಖದೇವ ದೇಶದ ಸ್ವಾತಂತ್ರ್ಯ ಚಳುವಳಿಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅವರ ಆಶಯದ ಭಾರತ ಕಟ್ಟುವ ಕಾಯಕ ಇಂದಿನ ವಿದ್ಯಾರ್ಥಿಗಳು ಮಾಡಬೇಕು” ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರು ಮಹೇಂದ್ರ ಜಿ. ಅವರು ಮಾತನಾಡಿ, “ಇಂದಿನ ಯುವ ಪೀಳಿಗೆಗೆ ಭಗತ್ ಸಿಂಗ್ ಅಂತಹ ನಿಜವಾದ ಹೀರೋಗಳು ಆದರ್ಶ ಮಾಡಿಕೊಳ್ಳಬೇಕು. ಆದರೆ ಇಂದಿನ ಸಾಮಾಜಿಕತೆಯಲ್ಲಿ ಸಿನಿಮಾ ನಟರೇ ಹೀರೋಗಳಾಗಿರುವುದು  ಖೇಧಕರ. ವಿದ್ಯಾರ್ಥಿಗಳು ಸಮಾಜದಲ್ಲಿ ಒಳ್ಳೆಯ ಅಧಿಕಾರಿಗಳಾಗಿ ಬರಬೇಕು. ಆ ರೀತಿಯಲ್ಲಿ ಭಗತ್‌‌ ಸಿಂಗ್‌‌ ಅಂತಹವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮವನ್ನು ಅಭಿಲಾಷ ನಿರ್ವಹಿಸಿದರು, ಪ್ರಾರ್ಥನೆಯನ್ನು ಭೀಮಾ ಘೊರ್ಪಡೆ ಹಾಗೂ ಸಂಗಡಿಗರು ಹಾಡಿದರು. ಎಸ್ಎಫ್ಐ ತಾಲ್ಲೂಕು ಅಧ್ಯಕ್ಷ ಅನೀಲ್ ರಾಠೋಡ ಸ್ವಾಗತಿಸಿದರು ಮತ್ತು ನಾಗರಾಜ ವಂದಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಾವೇರಿ ವಿ ವಿ ಉಳಿದರೆ ಇಪ್ಪತ್ತು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ : ನಿವೃತ್ತ ಕುಲಪತಿ ಡಾ. ಎ. ಮುರಿಗೆಪ್ಪ

ಕಾರ್ಯಕ್ರಮದಲ್ಲಿ ಐ ಕ್ಯೂ ಎ ಎಸ್ ಸಂಚಾಲಕಾರು ಹನಮೇಶ  ವಿಶ್ವನಾಥ‌. ಕೆ. ಎಸ್, ಅಜೀತ್ ಕುಮಾರ ಪೂಜಾರ್, ಬಿ ಕೆ ಹೊಸಳ್ಳಿ ವೇದಿಕೆಯಲ್ಲಿದ್ದರು. ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...