ಗದಗ | ನಾಳೆ ಡಾ. ಜಿ. ಎಸ್. ಅಮೂರರ ಕುರಿತು ವಿಚಾರ ಸಂಕಿರಣ

Date:

Advertisements

“ಡಾ. ಜಿ. ಎಸ್. ಆಮೂರರ ಮೇರು ವಿಮರ್ಶಾ ಕೃತಿಗಳ’ ಕುರಿತು ನಾಳೆ ಜೆ ಟಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ” ಎಂದು ಡಾ. ಅಂದಯ್ಯ ಅರವಟಗಿಮಠ ಹೇಳಿದರು.

ಗದಗ ಪಟ್ಟಣದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, “ಕೆ.ಎಲ್.ಇ. ಸಂಸ್ಥೆಯ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯ, ಮತ್ತು ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯಗಳ ಕನ್ನಡ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ‘ಡಾ. ಜಿ. ಎಸ್. ಆಮೂರರ ಮೇರು ವಿಮರ್ಶಾ ಕೃತಿಗಳ’ ವಿಚಾರ ಸಂಕಿರಣವನ್ನು ನಾಳೆ 19/3/2025, 10:30ಕ್ಕೆ ನಡೆಯಲಿದೆ” ಎಂದರು.

“ವಿಚಾರ ಸಂಕಿರಣದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ನೆರವೇರಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕೆ.ಎಲ್.ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಶ್ರೀ ಎಸ್. ಪಿ. ಸಂಶಿಮಠ ವಹಿಸಲಿದ್ದಾರೆ.

Advertisements

ಕಾರ್ಯಕ್ರಮದಲ್ಲಿ ಶ್ರೀಮತಿ. ರಜನಿ ಪಾಟೀಲ, ಶ್ರೀನಿವಾಸ ಹುಯಿಲಗೋಳ, ಪ್ರೊ. ಅನ್ನದಾನಿ ಹಿರೇಮಠ, ಪ್ರೊ. ಪಿ. ಜಿ. ಪಾಟೀಲ, ಡಾ. ಎ.ಕೆ. ಮಠ ಉಪಸ್ಥಿತರಿರುವರು.

ವಿಚಾರಗೋಷ್ಠಿಗಳಲ್ಲಿ ಡಾ. ಶಾಮಸುಂದರ ಬಿದರಕುಂದಿ, ಡಾ. ಜಿ. ಎಂ. ಹೆಗಡೆ ಅವರು ಪ್ರಬಂಧ ಮಂಡಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸ್ವಚ್ಛವಾಹಿನಿ ಮಹಿಳಾ ಕಾರ್ಮಿಕರನ್ನು  ಖಾಯಂಗೊಳಿಸಿ, ವೇತನ ಭದ್ರತೆ ಒದಗಿಸಬೇಕು: ಎಂ. ನಾಡಗೌಡ ಆಗ್ರಹ

ಸಮಾರೋಪ ಸಮಾರಂಭದಲ್ಲಿ ಹಿರಿಯ ಕತೆಗಾರರಾದ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಸಮಾರೋಪ ನುಡಿಗಳನ್ನು ಆಡಲಿದ್ದಾರೆ. ಡಾ. ಡಿ. ಬಿ. ಗವಾನಿ, ಪ್ರೊ ಜಿ. ವಿಶ್ವನಾಥ, ಡಾ. ನಾಗರಾಜ ಬಳಿಗೇರ, ಡಾ. ರಾಮಚಂದ್ರ ಪಡೆಸೂರು, ಪ್ರೊ. ಶ್ರುತಿ ಮ್ಯಾಗೇರಿ ಉಪಸ್ಥಿತರಿರುವರೆಂದು ವಿಚಾರ ಸಂಕಿರಣದ ಸಂಚಾಲಕರಾದ ಡಾ. ಅಂದಯ್ಯ ಅರವಟಗಿಮಠ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X