ಗದಗ | ವಿದ್ಯಾರ್ಥಿಗಳ ಧ್ವನಿಯಾದ ಎಸ್‌ಎಫ್‌ಐಗೆ 54ರ ಸಂಭ್ರಮ

Date:

Advertisements

ದಮನಿತರ ಧ್ವನಿಯಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಕಾರ್ಯ ಮಾಡುತ್ತಿದ್ದು, ಕಳೆದ 54 ವರ್ಷಗಳಿಂದ ವಿದ್ಯಾರ್ಥಿ ಹಕ್ಕುಗಳ ರಕ್ಷಣೆಗೆ, ಶಿಕ್ಷಣದ ಉಳಿವಿಗಾಗಿ ನಿರಂತರ ಸೈದ್ದಾಂತಿಕ ಮತ್ತು ಶೈಕ್ಷಣಿಕ ಚಳವಳಿಯನ್ನು ಮುಂದುವರಿಸಿದೆ ಎಂದು ರಾಜ್ಯಪದಾಧಿಕಾರಿ ಗಣೇಶ್ ರಾಠೋಡ್‌ ತಿಳಿಸಿದರು.

ಗದಗ ಜಿಲ್ಲೆ ಗಜೇಂದ್ರಗಡ ನಗರದ ಎಸ್‌ಎಫ್‌ಐ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 54ನೇ ಎಸ್‌ಎಫ್‌ಐ ಸಂಸ್ಥಾಪನಾ ದಿನಾಚರಣೆ ವೇಳೆ ಎಸ್‌ಎಫ್‌ಐ ಧ್ವಜಾರೋಹಣ ಮಾಡಿ ಮಾತನಾಡಿದರು.

“ಕುವೆಂಪು ಅವರು, ʼಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳುʼ ಎಂದು ಹೇಳಿದಂತೆ ಸಮಾನತೆಯ ಶಿಕ್ಷಣಕ್ಕಾಗಿ ಮತ್ತು ಸ್ವಾತಂತ್ರ್ಯ ಪ್ರಜಾಪ್ರಭುತ್ವ ಸಮಾಜವಾದಕ್ಕಾಗಿ ನಿರಂತರ ಹೋರಾಟ ಮಾಡುತ್ತಿದೆ. ಶೋಷಿತರ, ದಮನಿತರ ಧ್ವನಿಯಾಗಿ ಎಸ್‌ಎಫ್‌ಐ ಕಾರ್ಯ ಮಾಡುತ್ತಿದೆ” ಎಂದರು.

Advertisements

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಮುಖಂಡ ಬಾಲು ರಾಠೋಡ್ ಮಾತನಾಡಿ‌, “ನೀವೆಲ್ಲಾ ರೈತ ಕಾರ್ಮಿಕ ಕೃಷಿ ಕೂಲಿಕಾರರ ಮಕ್ಕಳು. ನಿಮ್ಮ ಹಕ್ಕುಗಳಿಗಾಗಿ ನಡೆಯುವ ಚಳವಳಿಯ ಜೊತೆ ನಿಲ್ಲಬೇಕು. ಸದಾ ಕಾರ್ಮಿಕರ, ನಿಮ್ಮ ಬೆಂಬಲಕ್ಕೆ ಇರುತ್ತೇವೆ. ಕುವೆಂಪು ಅವರು ಹೇಳಿದ ಹಾಗೆ ಸರ್ವಜನಾಂಗದ ಶಾಂತಿಯ ತೋಟವನ್ನು ಎಲ್ಲರೂ ಸೇರಿ ರಕ್ಷಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತಾಲೂಕು ಮಟ್ಟದ 10ನೇ ಮಕ್ಕಳ ಸಾಹಿತ್ಯ ಸಮ್ಮೇಳನ

“ಉದ್ಯೋಗದ ಅಭದ್ರತೆ ಹೆಚ್ಚುತಿದ್ದು, ಸರ್ಕಾರದ ನೀತಿಗಳು ಕಾರ್ಪೊರೇಟ್ ಪರವಾಗಿವೆ. ಅದಕ್ಕೆ ಕಾರ್ಮಿಕ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ತಡೆಯಲು ಎಸ್‌ಎಫ್‌ಐ ಸಂಘಟನೆ ಪಾತ್ರ ಮಹತ್ವದ್ದು. ಹಾಗಾಗಿ ನೀವು ಈ ಸಂಸ್ಥಪನಾ ದಿನದಂದು ಸಂಕಲ್ಪ ಮಾಡಿ ವಿದ್ಯಾರ್ಥಿ ಸಂಘಟನೆಯನ್ನು ಬಲಗೊಳಿಸಬೇಕು” ಎಂದರು.

ಎಸ್‌ಎಫ್‌ಐನ ಜಿಲ್ಲಾ ಮುಖಂಡ ಚಂದ್ರು ರಾಠೋಡ್, ತಾಲೂಕು ಕಾರ್ಯದರ್ಶಿ ಶರಣು ಎಂ, ಸಂಗೀತಾ, ನಂದಿನಿ, ಅಶ್ವಿನಿ, ಶಿವರಾಜ್, ಚಂದ್ರು, ಅಡಿಯಪ್ಪ ಮತ್ತು ವಿದ್ಯಾರ್ಥಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X