ಗದಗ | ಸಿಬ್ಬಂದಿ ಕೊರತೆ: ಮೃಗಾಲಯ ನಿರ್ವಹಣೆಗೆ ಸ್ವಯಂಸೇವಕರ ನೆರವಿಗೆ ಅಧಿಕಾರಿಗಳ ಮನವಿ

Date:

  • 20 ಮೃಗಾಲಯ ಪಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ
  • 30 ಸ್ವಯಂಸೇವಕರನ್ನು ಹುಡುಕುತ್ತಿರುವ ಅಧಿಕಾರಿಗಳು

ಗದಗ ಜಿಲ್ಲೆಯಲ್ಲಿರುವ ಬಿಂಕದಕಟ್ಟಿ ಮೃಗಾಲಯದಲ್ಲಿ ಸಿಬ್ಬಂದಿಗಳ ಕೊರತೆ ಉಂಟಾಗಿದೆ. ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲು ತಡವಾಗುತ್ತಿರುವ ಹಿನ್ನೆಲೆ, ಮೃಗಾಲಯದ ಕೆಲಸಗಳಲ್ಲಿ ಸ್ವಯಂಸೇವಕರು ತೊಡಗಿಸಿಕೊಳ್ಳಬಹುದು. ಶೀಘ್ರದಲ್ಲಿಯೇ ಸ್ವಯಂಸೇವಕರನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

“ಮೃಗಾಲಯಕ್ಕೆ 30 ಸ್ವಯಂಸೇವಕರನ್ನು ಹುಡುಕುತ್ತಿದ್ದೇವೆ. 18 ವರ್ಷ ಮೇಲ್ಪಟ್ಟ ಯುವಜನರು ಸ್ವಯಂಸೇವಕರಾಗಿ ಸೇರಿಕೊಳ್ಳಬಹುದು. ಆಯ್ಕೆಯಾದವರಿಗೆ ತರಬೇತಿ ನೀಡಲಾಗುತ್ತದೆ. ಪ್ರಾಣಿ ಪ್ರಿಯರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ಕೆ ಕೈಜೋಡಿಸಬೇಕು” ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

“ಸ್ವಯಂಸೇವಕರು ವಾರಾಂತ್ಯದಲ್ಲಿ ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಜೂ ಮತ್ತು ಪ್ರಾಣಿಗಳ ಬಗ್ಗೆ ಮಾರ್ಗದರ್ಶನ ನೀಡವ ಮತ್ತು ಇತರ ಚಟುವಟಿಕೆಗಳಲ್ಲಿ ಭಾವಹಿಸಬಹುದು. 100 ಗಂಟೆಗಳ ಸ್ವಯಂಸೇವಕ ಚಟುವಟಿಕೆಗಳನ್ನು ಪೂರ್ಣಗೊಳಿಸಿದ ನಂತರ ಅಭ್ಯರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈಗಾಗಲೇ 17 ಮಂದಿ ನೋಂದಣಿ ಮಾಡಿಕೊಂಡಿದ್ದು, ಮೊದಲ ತರಬೇತಿ ಕಾರ್ಯಕ್ರಮ ಆರಂಭಿಸಲು ಇನ್ನೂ 13 ಮಂದಿ ನೋಂದಣಿ ಮಾಡಿಕೊಳ್ಳುವ ಅಗತ್ಯವಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಸ್ತುತ 20 ಮೃಗಾಲಯ ಪಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೃಗಾಲಯದ ಮೂಲಗಳು ತಿಳಿಸಿವೆ. ಅಷ್ಟು ಮಂದಿಯಿಂದ ಮೃಗಾಲಯದ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಕೆಲಸದ ಹೊರೆಯಿಂದಾಗಿ ಪ್ರಾಣಿಗಳನ್ನು ಯಾವಾಗಲೂ ನೋಡಿಕೊಳ್ಳುವುದು ಕಷ್ಟಕರವಾಗಿದೆ. ಹೀಗಾಗಿ, ಅಧಿಕಾರಿಗಳು ಸ್ವಯಂಸೇವಕರನ್ನು ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ಧೀರಾ?: ಚುನಾವಣೆ 2023 | ಮೈಸೂರು-ಚಾಮರಾಜನಗರ: ಮೊದಲ ಬಾರಿಗೆ ಗೆದ್ದಿದ್ದ ಎಂಟು ಶಾಸಕರ ಕತೆ ಈಗೇನು?

“ನಾವು ಸಾಮಾಜಿಕ ಮಾಧ್ಯಮಗಳ ನಮ್ಮ ಖಾತೆಗಳಲ್ಲಿ ಕೆಲವು ದಿನಗಳ ಹಿಂದೆ ಸ್ವಯಂಸೇವಕರಾಗಿ ನಮ್ಮೊಂದಿಗೆ ತೊಡಗಿಸಿಕೊಳ್ಳುವಂತೆ ಪ್ರಾಣಿ ಪ್ರಿಯರಿಗೆ ಮನವಿ ಮಾಡಿದ್ದೇವೆ. ಪೋಸ್ಟ್‌ಗೆ ಪ್ರತಿಕ್ರಿಯಿಸಿ, 10ಕ್ಕೂ ಹೆಚ್ಚು ಜನರು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಅವರಲ್ಲಿ ಕೆಲವರು ವಿದ್ಯಾರ್ಥಿಗಳು” ಎಂದು ಮೃಗಾಲಯದ ಅಧಿಕಾರಿ ಕರೋಲ್ ಅಮನ್ನಾ ತಿಳಿಸಿದ್ದಾರೆ.

“ನೋಂದಣಿ ನಂತರ, ನಾವು ಅರ್ಜಿ ಸಲ್ಲಿಸಿದವರ ಆಸಕ್ತಿಯನ್ನು ಪರಿಶೀಲಿಸುತ್ತೇವೆ. ಪ್ರಾಣಿಗಳ ಬಗ್ಗೆ ಮತ್ತು ಇತರ ಅಂಶಗಳ ಬಗ್ಗೆ ಅವರು ಏನು ತಿಳಿದಿದ್ದಾರೆ ಎಂಬುದನ್ನು ನಾವು ಪರಿಶೀಲಿಸುತ್ತೇವೆ. ನಂತರ ಸ್ವಯಂಸೇವಕರಿಗೆ ಪ್ರಾಣಿಗಳ ಸ್ವಭಾವ, ಭೇಟಿ ನೀಡುವ ಜನರೊಂದಿಗೆ ಹೇಗೆ ಸಂವಹನ ನಡೆಸಬೇಕು ಎಂಬು ಸೇರಿದಂತೆ ಮತ್ತು ಇತರ ಅಂಶಗಳ ಕುರಿತು ತರಬೇತಿ ನೀಡುತ್ತೇವೆ. ತರಬೇತಿ ಪೂರ್ಣಗೊಳಿಸಿದ ನಂತರ, ಅವರನ್ನು ಮೃಗಾಲಯದಲ್ಲಿ ಸ್ವಯಂಸೇವಕರಾಗಿ ಬಳಸಿಕೊಳ್ಳುತ್ತೇವೆ,” ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ...

ಯಾದಗಿರಿ | ಗೋಗಡಿಹಾಳ ಗ್ರಾಮದ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರ ನೇಮಕಕ್ಕೆ ಒತ್ತಾಯ

ಗೋಗಡಿಹಾಳ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಸರ್ಕಾರಿ...

ಸರ್ಕಾರಿ ಶಿಕ್ಷಕರ ಗೈರು ಹಾಜರಿ ತಡೆಗೆ ‘ಜಿಪಿಎಸ್‌’ ಕ್ರಮ

ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ...

ಪುರುಷ ನೌಕರರಿಗೂ ಶಿಶುಪಾಲನಾ ರಜೆ; ಸರ್ಕಾರ ಆದೇಶ

ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರಿಗೆ ನೀಡಲಾಗುತ್ತಿದ್ದ ಶಿಶುಪಾಲನಾ ರಜೆಯನ್ನು ಒಂಟಿ ಪೋಷಕರಾಗಿರುವ ಪುರುಷ...