ಗದಗ | ಎಸ್. ಎಮ್. ಭೂಮರೆಡ್ಡಿ ಸರಕಾರಿ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ

Date:

  • ಗುಣಮಟ್ಟ ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ
  • ಮುಂಡರಗಿಯಲ್ಲಿ ಸರಕಾರಿ ಪ್ರೌಢಶಾಲೆ ಮಂಜೂರಾತಿಗೆ ಪ್ರಯತ್ನ

ಸರಕಾರಿ ಶಾಲೆಗಳ ಬೆಳವಣಿಗೆಯಲ್ಲಿ ಶಿಕ್ಷಕರು ಪಾತ್ರ ಮಹತ್ವವಾದದ್ದು, ಎಲ್ಲರೂ ಕೂಡಿದರೆ ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೆ ಕೊಂಡೊಯ್ಯಬಹುದು ಎಂದು ಮಾಜಿ ಸಚಿವ, ಶಾಸಕ ಎಸ್.ಎಸ್.ಪಾಟೀಲ್ ಹೇಳಿದರು.

- Advertisement -

ಮುಂಡರಗಿ ಪಟ್ಟಣದ ಎಸ್.ಎಮ್.ಭೂಮರೆಡ್ಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಶಿಕ್ಷಕರ ಹಾಗೂ ಪೋಷಕರ ನಡೆ, ನುಡಿ, ಮನ, ಭಾವ, ಶುಚಿಯಾಗಿರಬೇಕು. ಶಿಕ್ಷಣ ವಲಯದಲ್ಲಿ ಎಲ್ಲರು ಕೂಡಿಕೊಂಡರೆ ಸರ್ಕಾರಿ ಶಾಲಾ ಮಕ್ಕಳಿಗೆ ನೈತಿಕ ಮೌಲ್ಯಗಳ ನೀಡಲು ಕೊಡಲು ಸಾಧ್ಯ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾತಾವರಣ ನಿರ್ಮಿಸಿದ್ದು ಶ್ಲಾಘನೀಯ ಕಾರ್ಯ. ಮುಂಡರಗಿಯಲ್ಲಿ ಸರಕಾರಿ ಪ್ರೌಢ ಶಾಲೆಯ ಅಗತ್ಯವಿದೆ. ಈ ಬಗ್ಗೆ ನಾನು ಅನುಮತಿ ತರುತ್ತೇನೆ. ಆದರೆ ಭೂದಾನಿಗಳು ಮುಂದಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಜಿ.ಪಂ. ಅಧ್ಯಕ್ಷ ವಾಸಣ್ಣ ಕುರುಡಗಿ ಮಾತನಾಡಿ, “ತಂದೆ -ತಾಯಿ ಹೆದರದವರು, ಗುರುಗಳಿಗೆ ಹೆದರಬೇಕು. ಆಗ ಶಿಕ್ಷಣ ಕಲಿಯಬಹುದು. ಶಿಕ್ಷಕರು‌ ಶಾಲೆಗೆ ಸೂಕ್ತ ಸಮಯಕ್ಕೆ ಬಂದು ಮೌಲ್ಯ ಶಿಕ್ಷಣ ನೀಡಲು ಮುಂದಾಗಬೇಕು. ಗುಣಮಟ್ಟ ಶಿಕ್ಷಣ ಕೊಡದಿದ್ದರೆ ಮಕ್ಕಳ ಉಜ್ವಲ ಭವಿಷ್ಯ ಹಾಳಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಶಿಕ್ಷಕರು ಪ್ರೇರಣೆ ನೀಡಬೇಕು” ಎಂದು ಹೇಳಿದರು.

ನಿಕಟಪೂರ್ವ ಮುಖ್ಯೋಪಾಧ್ಯಾಯ ನಿಂಗು ಸೊಲಗಿ ಪ್ರಾಸ್ತವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಡಿಡಿಪಿಐ ಎಂ.ಎ. ರಡ್ಡೇರ, ಪ್ರಗತಿಪರ ರೈತ ಈಶ್ವರಪ್ಪ ಹಂಚಿನಾಳ, ಮುಖಂಡ ಹೇಮಂತಗೌಡ ಪಾಟೀಲ್, ಕೆ.ಬಿ.ಕೊಣ್ಣೂರ, ನಾಗರಾಜ ಹಳ್ಳಿಕೇರಿ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಹಳೆಯ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...