ಗದಗ | ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ ಹೋರಾಟ: ಬಸವರಾಜ್ ಸೂಳಿಬಾವಿ

Date:

Advertisements

“ಗದಗ ಜಿಲ್ಲೆ ಜೀವನಾಡಿ, ಇಡೀ ಉತ್ತರ ಕರ್ನಾಟಕದ ಸಹ್ಯಾದ್ರಿ, ಏಷ್ಯಾದಲ್ಲಿಯೇ ಅತ್ಯುತ್ತಮ ಹವಾಮಾನ, ಶುದ್ಧಗಾಳಿ ಇರುವ ಎರಡು ಜಿಲ್ಲೆಗಳಲ್ಲಿ ಗದಗ ಜಿಲ್ಲೆಯೂ ಒಂದು. ಇದಕ್ಕೆ ಕಾರಣ ಆಗಿರುವ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ ಹೋರಾಟ ಮಾಡುತ್ತೇವೆ” ಎಂದು ಸಾಮಾಜಿಕ ಕಾರ್ಯಕರ್ತ, ಸಾಹಿತಿ ಬಸವರಾಜ್ ಸೂಳಿಬಾವಿ ಎಚ್ಚರಿಕೆ ನೀಡಿದ್ದಾರೆ.

ಗದಗ ಪಟ್ಟಣದ ಪತ್ರಿಕಾ ಭವನದಲ್ಲಿ ಉತ್ತರ ಕರ್ನಾಟಕದ ಸಸ್ಯಕಾಶಿ ಕಪ್ಪತಗುಡ್ಡದಲ್ಲಿ ಕರ್ನಾಟಕ ಸರಕಾರ ಮತ್ತೆ ಗಣಿಗಾರಿಕೆಗೆ ಅನುಮತಿ ನೀಡುವುದನ್ನು ಖಂಡಿಸಿ ಮಾತನಾಡಿದರು.

“ಬಯಲುಸೀಮೆಯ ಜೀವಾಳ ಕಪ್ಪತಗುಡ್ಡ ಕೇವಲ ಸಸ್ಯಕಾಶಿ ಅಷ್ಟೇ ಅಲ್ಲ. ಇಲ್ಲಿರುವ ಮಳೆಬೆಳೆಗೆ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಕಪ್ಪತಗುಡ್ಡದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ದೃಷ್ಟಿ ಬೀರಿದ್ದು, ಯಾವುದೋ ಒಂದು ಕಾಲ ಆಗಿತ್ತು. ಈಗಲೂ ಪ್ರಯತ್ನಗಳು ನಡೆದಿವೆ. ಈ ದೇಶದ ಕಂಪನಿಗಳಷ್ಟೇ ಮಾತ್ರವಲ್ಲ, ವಿದೇಶೀ ಕಂಪನಿಗಳು ಈ ನೆಲೆದ ಮೇಲೆ ಕಣ್ಣು ಹಾಕಿದ್ದವು ಎಂಬುದು ಗೊತ್ತಿರುವ ಸಂಗತಿ” ಎಂದು ಹೇಳಿದರು.

Advertisements
IMG 20241018 WA0017 1

“2011ರಲ್ಲಿ ಪೋಸ್ಕೊ ಕಂಪನಿ ಈ ನೆಲಕ್ಕೆ ಬರುವ ಹಿನ್ನಲೆಯಲ್ಲಿ ಕರ್ನಾಟಕದ ಆಗಿನ ಸರಕಾರದ ಜೊತೆಗೆ ಎಮ್ ಒ ಎಮ್ ಮಾಡಿಕೊಂಡಿದ್ದು, ಇದನ್ನು ರದ್ದು ಮಾಡಬೇಕೆಂದು ದೊಡ್ಡ ಮಟ್ಟದಲ್ಲಿ ಗದಗ ನೆಲದಲ್ಲಿ ಹೋರಾಟ ನಡೆದಿತ್ತು. ಆಗ ಪೋಸ್ಕೊ ಇಲ್ಲಿಂದ ಹೋಯಿತು. ನಂತರದಲ್ಲಿ ಕಪ್ಪತ್ತಗುಡ್ಡದ ಮೇಲೆ ಕಣ್ಣಿಟ್ಟಿದ್ದ ಜಿಂದಾಲ್‌ನಂತ ಬೇರೆ ಬೇರೆ ಕಂಪನಿಗಳು ಗಣಿಗಾರಿಕೆ ಮಾಡಲು ಒಳಗಿಂದ ಒಳಗೆ ದೊಡ್ಡ ಪ್ರಯತ್ನ ಮಾಡುತ್ತಿದ್ದವು. ಕರ್ನಾಟಕ ಸರಕಾರ 2017ರಲ್ಲಿ ಈ ಪ್ರದೇಶವನ್ನು ಸಂರಕ್ಷಣಾ ಅರಣ್ಯ ಪ್ರದೇಶ ಎಂದು ಘೋಷಣೆ ಮಾಡಿತು. 2019ರಲ್ಲಿ ಮರು ಮಾರ್ಪಡು ಮಾಡಿ, ಈ ಪ್ರದೇಶವನ್ನು ವನ್ಯಜೀವಿಗಳ ಧಾಮ ಎಂದು ಘೋಷಿಸಿತು. ಅಷ್ಟೇ ಅಲ್ಲದೇ, ಕಪ್ಪತಗುಡ್ಡದ ಒಂದು ಕಿಲೋಮೀಟರ್ ವ್ಯಾಪ್ತಿಯೊಳಗೆ ಕಲ್ಲು, ಮಣ್ಣು ಯಾವುದೇ ರೀತಿಯ ಗಣಿಗಾರಿಕೆ ಮಾಡುವಂತಿಲ್ಲ ಎಂಬ ಆದೇಶವನ್ನು ಸರಕಾರ ಹೊರಡಿಸಿತ್ತು. ಈ ಆದೇಶವನ್ನು ಬೇರೆ ಬೇರೆ ಕಂಪನಿಗಳು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದವು. ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತಿತ್ತು” ಎಂದು ನೆನಪಿಸಿಕೊಂಡರು.

ಆದರೆ, ಈಗ ಕಪ್ಪತಗುಡ್ಡದ ಗಣಿಗಾರಿಕೆ ಮಾಡಲು ಅನುಮತಿ ಕೊಡಬೇಕು ಎಂದು ಕರ್ನಾಟಕ ರಾಜ್ಯ ವನ್ಯಜೀವಿಗಳ ಮಂಡಳಿಗೆ 28 ಪ್ರಸ್ತಾವಳಿ ಬಂದಿವೆ. ಮುಖ್ಯಮಂತ್ರಿಯವರು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳದೆ ಮುಂದೂಡಿದರು. ಇದು ಸಿದ್ದರಾಮಯ್ಯ ಅವರಿಗೆ ಗೊತ್ತಿರದ ಸಂಗತಿಯೇನಲ್ಲ. ಸಿದ್ದರಾಮಯ್ಯನವರು 2011ರಲ್ಲಿ ಪೋಸ್ಕೊ ಹೋರಾಟದಲ್ಲಿ ಇಲ್ಲಿಗೆ ಭೇಟಿ ಕೊಟ್ಟು ಬೆಂಬಲಿಸಿದವರು, ಈ ವನ್ಯಜೀವಿ ಮಂಡಳಿಗೆ ಬಂದಿರುವ ಪ್ರಸ್ತಾವನೆಗಳನ್ನ ನೇರವಾಗಿ ತಿರಸ್ಕಾರ ಮಾಡಬೇಕಿತ್ತು. ಮುಂದೂಡುವ ಅಗತ್ಯವಿರಲಿಲ್ಲ. ಯಾಕೆಂದರೆ ವನ್ಯಜೀವಿ ಸಂರಕ್ಷಣಾ ಪ್ರದೇಶದ ಮೇಲೆ ಪರಿಣಾಮ ಆಗುತ್ತಿವೆ. ಒಂದು ವೇಳೆ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ ಹೋರಾಟ ಮಾಡುತ್ತೇವೆ ಎಂದು ಬಸವರಾಜ್ ಸೂಳಿಬಾವಿ ತಿಳಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಕನ್ನಡಹಬ್ಬ ಸಂಭ್ರಮ: ಅಕ್ಷರ ಜಾತ್ರೆಗೆ ಕವನ, ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪತ್ರಿಕಾಗೋಷ್ಠಿಯಲ್ಲಿ ಹೋರಾಟಗಾರರಾದ ಶರೀಫ್ ಬಿಳಿಯಲಿ,  ಮುತ್ತು ಬಿಳಿಯಲಿ, ಸಾಹಿತಿ ಜೆ ಬಿ ಪಾಟೀಲ್, ಕನ್ನಡ ಪರ ಹೋರಾಟಗಾರ ಚಂದ್ರಕಾಂತ ಚವ್ಹಾಣ, ಡಿಎಸ್‌ಎಸ್ ಮುಖಂಡರಾದ ಬಾಲರಾಜ್ ಅರಬರ್, ನಾಗರಾಜ್ ಗೋಕಾವಿ, ಲಿಂಗಾಯತ ಪ್ರಗತಿಶೀಲ ಶೇಖಣ್ಣ ಕವಳಿಕಾಯಿ, ಆನಂದ ಶಿಂಗಾಡಿ, ಅನಿಲ್ ಕಾಳೆ, ಪರಸು ಕಾಳೆ, ಬಸವರಾಜ್ ಬಿಳಿಯಲಿ, ಕಾಶೀನಾಥ್ ಬಗಲಿ ಇನ್ನೂ ಅನೇಕರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X