ಗದಗ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಸ್ಪಷ್ಟವಾಗಿ ಹೇಳಿದರು.
ಗದಗ ಜಿಲ್ಲೆಯ ಮುಳಗುಂದ ಪಟ್ಟಣದಲ್ಲಿ ರೈತ ಸಂಘ ಹಾಗೂ ಹಲವು ಸಂಘಟನೆಗಳ ನೇತೃತ್ವದಲ್ಲಿ ಗದಗ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಪ್ರತಿಭಟನೆ ನಡೆಸಿದರು.
ಈ ಸಮಯದಲ್ಲಿ ಮನವಿ ಸ್ವೀಕರಿಸಿ ಶಾಸಕ ಎಚ್.ಕೆ. ಪಾಟೀಲ್ ಅವರು ಮಾತನಾಡಿ, “ಗದಗ ತಾಲೂಕಿನ ರೈತರು ಹಾಗೂ ಜನತೆ ಎದುರಿಸುತ್ತಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಅವರಿಗೆ ಅಗತ್ಯವಿರುವ ಬರ ಪರಿಹಾರ ಹಾಗೂ ಸರ್ಕಾರದ ನೆರವು ದೊರೆಯುವಂತಾಗಬೇಕು” ಎಂದು ಆಗ್ರಹಿಸಿದ್ದಾರೆ.
ಗದಗ ತಾಲೂಕಿನ ರೈತರ ಹಿತಾಸಕ್ತಿಗಾಗಿ ಹಾಗೂ ಅವರಿಗೆ ನ್ಯಾಯಯುತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ನನ್ನ ಹೋರಾಟ ನಿರಂತರ” ಎಂದು ರೈತರಲ್ಲಿ ಭರವಸೆ ನೀಡಿದ್ದಾರೆ.




