ಗದಗ | ದಸರಾ ಉದ್ಘಾಟನೆ ವಿಚಾರ: ಪ್ರತಾಪ್ ಸಿಂಹಗೆ ನ್ಯಾಯಾಲಯವೇ ಛೀಮಾರಿ ಹಾಕಿದೆ; ಸಿಎಂ ಸಿದ್ದರಾಮಯ್ಯ

Date:

Advertisements

“ದಸರಾ ಉದ್ಘಾಟನೆಯನ್ನು ಮಾಡಲಿರುವ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಬಾರದೆಂದು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮಾತ್ರವಲ್ಲ ಸುಪ್ರೀಂ ಕೋರ್ಟಿಗೂ ಹೋಗಿದ್ದರು. ಸುಪ್ರೀಂ ಕೋರ್ಟ್ ಕೂಡ ನಿನ್ನೆ ಛೀಮಾರಿ ಹಾಕಿದೆ”  ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಗದಗ ಪಟ್ಟಣದ ಕನಕ ಭವನ ರಾಕೇಶ ಸಿದ್ದರಾಮಯ್ಯ ಸಭಾ ಭವನದಲ್ಲಿ  ಗದಗ ತಾಲ್ಲೂಕು ಕುರುಬರ ಸಂಘ ರಜತ ಮಹೋತ್ಸವ ಸವಿನೆನಪಿಗಾಗಿ ಹಾಗೂ ಸಂಘಜೀವ ಶ್ರೀ ಫಕೀರಪ್ಪ ಹೇಬಸೂರು ಅವರ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಹಿಂದೆ ದಸರಾ ಹಬ್ಬದ ಉದ್ಘಾಟನೆಯನ್ನು ಹಿರಿಯ ಕವಿ ಕೆ. ಎಸ್. ನಿಸಾರ್ ಅಹಮದ್ ಅವರು ಮಾಡಿದ್ದರು. ಅವರ ಸಾಲಿನಲ್ಲಿಯೇ ಪ್ರತಾಪ ಸಿಂಹನು ಕುಳಿತಿದ್ದನು. ಆವಾಗ ವಿರೋಧ ಮಾಡದವನು, ಈಗ ಬಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆ ಮಾಡಬಾರದೆಂದು ವಿರೋಧ ವ್ಯಕ್ತಪಡಿಸುತ್ತಿದ್ದಾನೆ” ಎಂದು ಹೇಳಿದರು.

ನಾಡ ಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ‌ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಇದನ್ನು ಓದಿದ್ದೀರಾ? ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಸಚಿವರಾದ ಎಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಾಸಕರಾದ ರಾಘವೇಂದ್ರ ಹಿಟ್ನಾಳ್ , ರಾಕೇಶ್ ಧವನ್ ಸಿದ್ದರಾಮಯ್ಯ ಸೇರಿ ಮಾಜಿ ಸಚಿವರು, ಶಾಸಕರು ಹಾಗೂ ಸಮುದಾಯದ ಮುಖಂಡರು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X