ಗದಗ | ತ್ಯಾಗ ಬಲಿದಾನದ ಪ್ರತೀಕವನ್ನು ಸಾರುವ ಹಬ್ಬವಾಗಿದೆ: ಹಸನಸಾಬ ತಟಗಾರ

Date:

Advertisements

“ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳಬೇಕು. ತ್ಯಾಗ ಬಲಿದಾನದ ಪ್ರತೀಕವನ್ನು ಸಾರುವ ಹಬ್ಬವಾಗಿದೆ” ಎಂದು ಅಂಜುಮನ್ ಇಸ್ಲಾಂ ಕಮೀಟಿ ಚೇರಮನ್ನ ಹಸನಸಾಬ ತಟಗಾರ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ ಹಬ್ಬದ ನಮಾಜ್ ಬಳಿಕ ಮಾತನಾಡಿದರು.

“ಹಜರತ್ ಇಬ್ರಾಹಿಂ ಅವರ ಅಲ್ಲಾನ ಮೇಲಿನ ದೈವಭಕ್ತಿ,   ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಕುರ್ಬಾನಿ  ಅರ್ಪಿಸಲಾಗುತ್ತದೆ” ಎಂದರು.

Advertisements

“ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಕುರ್ಬಾನಿ ನೀಡಬೇಕು. ಇದನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚುವ ಮೂಲಕ ಈದ್ ನಲ್ಲಿ ಪಾಲ್ಗೊಳ್ಳುತ್ತಾರೆ” ಎಂದರು.

ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಮಾತನಾಡಿ, “ಸೌಹಾರ್ದತೆ ಮತ್ತು ವಿಶ್ವ ಬಾಂಧವ್ಯವನ್ನು ಸೂಚಿಸುತ್ತದೆ. ತ್ಯಾಗ, ಸಹನೆ ಮತ್ತು ಪರಿಶ್ರಮವೆಂಬ ಮೂರು ಉನ್ನತ ತತ್ತಾದರ್ಶಗಳನ್ನು ಬಕ್ರೀದಿನ ಇತಿಹಾಸ, ವಿಶ್ವದ ಜನತೆಗೆ ಸಾರುತ್ತದೆ. ಪರರ ಒಳಿತಿಗಾಗಿ ತ್ಯಾಗ, ಕಷ್ಟಗಳ ಮುಂದೆ ಸಹನೆ ಮತ್ತು ಸಾಮಾಜಿಕ ಹಿತಾಸಕ್ತಿಗಾಗಿ ಪರಿಶ್ರಮ ಎಂಬ ಉದಾತ್ತ ಆದರ್ಶಗಳೊಂದಿಗೆ ಬಕ್ರೀದನ್ನು ಮುಸ್ಲಿಮರು ವಿಶ್ವದಾದ್ಯಂತ ಆಚರಿಸುತ್ತಾರೆ” ಎಂದರು.

ಮಾಜಿ ಚೇರ್ಮನ್ ಎ.ಡಿ.ಕೋಲಕಾರ, ಪುರಸಭೆ ಸದಸ್ಯ ರಾಜು ಸಾಂಗ್ಲೀಕಾರ, ಫಯಾಜ್ ತೋಟದ ಮಾತನಾಡಿದರು. ಬಳಿಕ ಜಾಮೀಯಾ ಮಸೀದಿಯ ಮೌಲಾನರಾದ ಈ ವೇಳೆ ಆಲಂ ನಹಿಂ ಈದ್ ನಮಾಜ್ ಓದಿಸಿದರು. 

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ತಲೆಯ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಕೊಲೆ

ಈ ವೇಳೆ ಖಲೀಲ ಅಹ್ಮದ ಖಾಜಿ ಮೌಲಾನ, ರಫೀಕ ಹಾಳಗಿ, ಯಾಸೀನ ಮೌಲಾನ, ನಿರ್ದೇಶಕರಾದ ನಾಸೀರ ಸುರಪೂರ, ಭಾಷಾ ಮುದಗಲ್ಲ, ಶೌಕತ್ ಅರಳಿಕಟ್ಟಿ, ಎಂ ಎಚ್ ಕೋಲಕಾರ, ಸುಭಾನಸಾಬ ಆರಗಿದ್ದಿ, ಮಾಸುಮಲಿ ಮದಗಾರ, ದಾದು ಹಣಗಿ ಸೇರಿದಂತೆ ಸಮಾಜ ಭಾಂದವರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X