ಗದಗ | ಭಗತ್‌ ಸಿಂಗ್‌ ಆದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು: ಚಂದ್ರು ರಾಠೋಡ

Date:

Advertisements

ಕ್ರಾಂತಿಯ ಕಿಡಿಯಾಗಿ, ಇಡೀ ಭಾರತ ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋರಾಟದ ಆದರ್ಶ ವ್ಯಕ್ತಿಯಾಗಿ ಭಗತ್ ಸಿಂಗ್ ಸ್ಪೂರ್ತಿಯಾಗುತ್ತಾರೆ. ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಜಿಸಿದರು. ಇಂದಿನ ಯುವ ಪೀಳಿಗೆ ಭಗತ್ ಸಿಂಗ್ ಅವರ ಆದರ್ಶಗಳನ್ನು ಮೈಗೋಡಿಸಿಕೊಳ್ಳಬೇಕು ಎಂದು ಎಸ್ಎಫ್ಐ ಗದಗ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ ಹೇಳಿದರು.

ಗಜೇಂದ್ರಗಡ ನಗರದ ಅಲ್ಪಸಂಖ್ಯಾತರ ಬಾಲಕರ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ದೇಶ ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಕಾಮ್ರೇಡ್ ಭಗತ್ ಸಿಂಗ್ ಅವರ 118 ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಭಾರತದ ಸ್ವಾತಂತ್ರ್ಯ ಚಳವಳಿಗೆ ಯುವ ಪಡೆಯನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಗತ್ ಸಿಂಗ್ ಇಂದಿನ ಅವ್ಯವಸ್ಥೆ, ಅನ್ಯಾಯದ ವಿರುದ್ಧವಾಗಿ ಸ್ಫೂರ್ತಿಯಾಗಬೇಕಿದೆ. ವಿದ್ಯಾರ್ಥಿ-ಯುವಜನರು ಆಲೋಚನೆ ಮಾಡಬೇಕಿದೆ. ಆದರೆ ಪ್ರಸ್ತುತ ದಿನಮಾನಗಳಲ್ಲಿ ಜಾತಿ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಇದನ್ನು ವಿರೋಧಿಸುವ ನಿಟ್ಟಿನಲ್ಲಿ ನಾವುಗಳು ಕೆಲಸ ಮಾಡಬೇಕಾಗಿದೆ” ಎಂದು ಹೇಳಿದರು.

ನಂತರ ತಾಲೂಕಾಧ್ಯಕ್ಷ ಅನಿಲ್ ಆರ್ ಮಾತನಾಡಿ, “ಭಗತ್‌ ಸಿಂಗ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಅಷ್ಟೆ ಅಲ್ಲದೆ ಭವಿಷ್ಯದಲ್ಲಿ ಭಾರತ ಹೇಗಿರಬೇಕೆಂದು ಕನಸು ಕಂಡವರು. ಜಾತಿ ತಾರತಮ್ಯ ನೀತಿಗಳು ಹೋಗಬೇಕು, ಧರ್ಮದ ಹೆಸರಲ್ಲಿ ಒಡೆದಾಳುವರು, ಸಾಮ್ರಾಜ್ಯ ಶಾಹಿಗಳನ್ನು ದೇಶ ಬಿಟ್ಟು ಓಡಿಸಬೇಕು ಎಂದು ಹೇಳುತ್ತಿದ್ದರು. ಅಸ್ಪೃಷ್ಯತೆ ಬಗ್ಗೆ ಭಗತ್ ಸಿಂಗ್ ತನ್ನ 16ನೇ ವಯಸ್ಸಿನಲ್ಲಿಯೇ ಲೇಖನವನ್ನು ಬರೆದಿದ್ದರು. ಭಗತ್ ಸಿಂಗ್ ಬಯಸಿದ್ದ ಭಾರತ ನಿರ್ಮಾಣ ನಮ್ಮೆಲ್ಲರ ಹೊಣೆ” ಎಂದರು.

ಇದನ್ನೂ ಓದಿ: ಗದಗ | ಧಾರ್ಮಿಕ ಸಾಮರಸ್ಯದ ಬದುಕಿಗೆ ಗದಗ ಜಿಲ್ಲೆಯ ಕೊಡುಗೆ ಅಪಾರ: ಪ್ರೊ ಎಸ್. ಯು. ಸಜ್ಜನಶೆಟ್ಟರ್

ಕಾರ್ಯಕ್ರಮದಲ್ಲಿ ಎಸ್ ಎಫ್ ಐ ಮುಖಂಡರಾದ ಅಭಿಲಾಷ್ ರಾಠೋಡ, ಗುರುಕಿರಣ್‌, ರಾಹುಲ್ ಯಮನೂರ ಸಾಬ್, ಪ್ರಶಾಂತ್, ದರ್ಶನ್, ಭೀಮೇಶ್, ಮುತ್ತುರಾಜ, ಆಕಾಶ, ಸಾಧಿಕ್, ರಾಕೇಶ್, ಮೈಲಾರಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X