ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ.
ಆರೋಪಿ ಬಗರ್ ಅಲಿ ಇರಾನಿ (27) ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಆಗ ಗುಂಡಿನ ದಾಳಿ ನಡೆಸಿದಾಗ ಕಾಲಿಗೆ ಗುಂಡು ತಗುಲಿ ಗಾಯವಾಗಿದೆ.
ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ಸಿಪಿಐ ಧೀರಜ್ ಸಿಂಧೆ ಗುಂಡಿನ ದಾಳಿ ನಡೆದಿದ್ದು, ಆರೋಪಿ ಬಗರ್ ಅಲಿ ಕಾಲಿಗೆ ಗಾಯವಾಗಿದೆ. ಸದ್ಯ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಬಡಾವಣೆ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಹನುಮಂತ್ ಓಲೇಕಾರ್, ಅಶೋಕ್ ಗಡದ್ ಹಲ್ಲೆಗೊಳಲಾಗಿದ್ದಾರೆ. ಈ ಇಬ್ಬರೂ ಪೊಲೀಸರಿಗೂ ರೋಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಜೂನ್ 28ರಂದು ನಗರದ ಹೆಲ್ತ್ ಕ್ಯಾಂಪ್ ಬಳಿ ಗಂಗಾವತಿ ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಆರೋಪಿಗಳ ಗುಂಪೊಂದು ಹಲ್ಲೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರ ಮೇಲೆ ನಡೆದ ಹಲ್ಲೆ ಕೇಸಿನಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು.
ಕಳ್ಳತನದ ಆರೋಪದ ಮೇಲೆ ಗಂಗಾವತಿ ಪೊಲೀಸರು ಗದಗನಿಂದ ಆರೋಪಿ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೆಪ್ ಆಗಿದ್ದನು. ಹಲ್ಲೆ ಬಳಿಕ ಆರೋಪಿ ಸ್ಕೂಟಿಯಲ್ಲಿ ಹೊ ಳೆಆಲೂರ ಗ್ರಾಮಕ್ಕೆ ಹೋಗಿ, ಅಲ್ಲಿಂದ ಟ್ರೈನ್ ಮೂಲಕ ಮಹಾರಾಷ್ಟ್ರಕ್ಕೆ ತೆರಳಿದ್ದನು. ಈ ಹಿನ್ನೆಲೆಯಲ್ಲಿ ಗಂಗಾವತಿ ಪೊಲೀಸರ ಮೇಲೆ ಹಲ್ಲೆ ಕೇಸಿನಲ್ಲಿ ಬೆಟಗೇರಿ ಬಡಾವಣೆ ಪೊಲೀಸರಿಂದ ಆರೋಪಿಯನ್ನ ಬಂಧಿಸಲಾಗಿತ್ತು.
ಇದನ್ನು ಓದಿದ್ದೀರಾ? ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆಲುವು: ನಿಂದನೆಗಳಿಂದ ಬಚಾವಾದ ಸಚಿವ ಜಮೀರ್
ಆದರೆ ಇಂದು ಪಂಚನಾಮೆಗೆಂದು ಹೊಳೆಆಲೂರಿಗೆ ತೆರಳಿ, ವಾಪಾಸ್ ಬರುವಾಗ ಈ ಘಟನೆ ಜರುಗಿದ್ದು, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.