ಗದಗ | ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮ ಪ್ರಾರಂಭ

Date:

Advertisements

‘ಭಾರತದ ಜನಗಳಾದ ನಾವು’ ಎಂಬ ಸಂವಿಧಾನದ ಪೀಠಿಕೆಯ ಸಾಲುಗಳ ಓದಿನೊಂದಿಗೆ ಗೋಗೇರಿ ಗ್ರಾಮದ ಬಾಗವಾನ ವೆಲ್‌ಫೇರ್‌ ಅ್ಯಂಡ್ ಎಜುಕೇಶನ್ ಸೊಸೈಟಿಯ ಮದರಸಾ ಮೊಹಮ್ಮದೀಯಾ ಅರೇಬಿಯಾ ಶಾಲೆಯಿಂದ 2ನೇ ವರ್ಷದ ʼದಿನಿಯಾತ್ ಜಲ್ಸಾʼ ಕಾರ್ಯಕ್ರಮ ನಡೆಯಿತು.

ಗದಗ ಜಿಲ್ಲೆ ಗಜೇಂದ್ರಗಡ ನಗರದ ಅರಬ್ಬಿ ಶಾಲೆಯ‌ ಒಂದನೇ ತರಗತಿಯ ವಿದ್ಯಾರ್ಥಿ ರಿಹಾನ್ ನದಾಫ್ ಕಂಠಪಾಠ ಮಾಡಿದ ಸಂವಿಧಾನದ ಪೀಠಿಕೆಯನ್ನು ಎಲ್ಲರಿಗೂ ಹೇಳಿಕೊಡುವ ಮೂಲಕ ಕಾರ್ಯಕ್ರಮ ಚಾಲನೆಗೊಂಡಿತು.

ಜಲ್ಸಾ ಕಾರ್ಯಕ್ರಮ ಉಖ್ಯ ಅತಿಥಿಯಾಗಿ ಮುಫ್ತಿ ಇರ್ಫಾನ ಶಾಹಿ ಇಲಕಲ್ಲ ಮಾತನಾಡಿ, “ಸಂವಿಧಾನ ರಚನೆ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆ ಅಧಿಕೃತವಾಗಿ ಜಾರಿಯಾಗಿದೆ. ಮಕ್ಕಳು ಸೇರಿದಂತೆ ಎಲ್ಲರೂ ಸಂವಿಧಾನದ ಪೀಠಿಕೆ ತಿಳಿದುಕೊಳ್ಳಬೇಕು. ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವಾಗುತ್ತದೆ. ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ನಾವೆಲ್ಲರೂ ಉಳಿದಂತೆ. ಮಕ್ಕಳಿಗೂ ಕೂಡ ಸಂವಿಧಾನದ ಅರಿವು ಇರಬೇಕು. ಅರಬ್ಬಿ ಶಾಲೆಗಳಲ್ಲಿ ಸಂವಿಧಾನದ ಬಗ್ಗೆ ತಿಳಿಸಿಕೊಡಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ದ್ವೇಷದ ದಾಳಿಗೆ ಗುರಿಯಾಗಿರುವ ಎಂ ಜಿ ಹೆಗ್ಡೆ; ಸಮಾನ ಮನಸ್ಕರಿಂದ ಭೇಟಿ

ಪ್ರಸ್ತಾವಿಕವಾಗಿ‌ ಶಿಕ್ಷಕ ಆರ್ ಕೆ ಭಗವಾನ್ ಮಾತನಾಡಿ, “ಭಾರತದ ಮುಸ್ಲಿಮರಾದ ನಾವು ಕುರಾನ್ ಮತ್ತು ಸಂವಿಧಾನವನ್ನು ಸಂಪೂರ್ಣವಾಗಿ ಅರಿತುಕೊಂಡು ಸೌಹಾರ್ದತೆ ಮರೆಯಬೇಕು” ಎಂದರು.

ಕಾರ್ಯಕ್ರಮದಲ್ಲಿ ಮುಫ್ತಿ ಹಸನ್ ಕಾಸ್ಮಿ, ಮಫ್ತಿ ವಾಹಿದ, ಮೌಲಾನಾ ಮಹೆಬೂಬ ಸುಲ್ತಾನಿ, ಹಾಫಿಜ್ ಅಸ್ಲಂ, ಹಾಫಿಜ್ ಬರಕತುಲ್ಲಾ, ಆರ್ ಐ ಭಗವಾನ್, ಹುಸೇನಸಾಬ ಬಡಿಗೇರ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X