ಗದಗ | ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಅನುದಾನ ನೀಡಿ ಬಲಪಡಿಸಬೇಕು: ಎಸ್ ಎಫ್ ಐ ಒತ್ತಾಯ

Date:

Advertisements

“ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಂದೆ ನಡೆಯುವ ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಟ್ಟು, ಶಿಕ್ಷಣ ಕ್ಷೇತ್ರವನ್ನು ರಾಜ್ಯ ಸರ್ಕಾರ ಬಲಪಡಿಸಬೇಕು” ಎಂದು  ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ ಒತ್ತಾಯಿಸಿದರು.

ಗದಗ ಜಿಲ್ಲೆ ರೋಣ ಪಟ್ಟಣದ ಶಾಸಕ ಜಿ ಎಸ್ ಪಾಟೀಲ್ ಅವರಿಗೆ ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆಯು ರಾಜ್ಯ ಬಜೆಟ್ನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ  ಬೇಡಿಕೆಗಳನ್ನು ಈಡೇರಿಸಲು ಹೆಚ್ಚಿನ ಅನುದಾನ ಮೀಸಲಿಡಬೇಕೆಂದು ಮನವಿ ಸಲ್ಲಿಸಿ ಮಾತಾಡಿದರು.

“ದೇಶದಲ್ಲಿ ಕರೋನ ನಂತರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತುಂಬಾ ವ್ಯತ್ಯಾಸಗಳಾಗಿವೆ. ಎಲ್.ಕೆ.ಜಿ ಯಿಂದ ಉನ್ನತ ಶಿಕ್ಷಣದವರೆಗೆ ಅವಲೋಕಿಸಿದಾಗ ಶಿಕ್ಷಣದ ಮೇಲೆ ಗಮನಾರ್ಹ ಪರಿಣಾಮ ಆಗಿದ್ದು ಕಂಡುಬರುತ್ತದೆ. ದಿನದಿಂದ ದಿನಕ್ಕೆ ಶಾಲೆ ಬಿಟ್ಟ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರನ್ನು ಮರಳಿ ಶಾಲೆಗೆ ಕರೆತರಲು ನಿರ್ಧಿಷ್ಟವಾದ ಯಾವುದೇ ಕಾರ್ಯ ಯೊಜನೆಯಿಲ್ಲ.  ಇನ್ನೊಂದೆಡೆಗೆ ಸರ್ಕಾರಿ ಮತ್ತು ಮಾತೃಭಾಷೆ  ಮಾಧ್ಯಮದ  ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುತ್ತಿರುವುದನ್ನು ಕಾಣುತ್ತೆವೆ.  ಕರ್ನಾಟಕದಲ್ಲಿ ಇತ್ತಿಚೆಗೆ ಸುಮಾರು 6ಸಾವಿರಕ್ಕೂ ಅಧಿಕ ಕನ್ನಡ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಪ್ರಸ್ತಾಪಿಸಿರುವುದು ಖಂಡನಿಯ” ಎಂದರು.

Advertisements

ರಾಜ್ಯ ಉಪಾಧ್ಯಕ್ಷರು ಗಣೇಶ ರಾಠೋಡ ಮಾತನಾಡಿ, “ಕನ್ನಡ ಶಾಲೆಗಳಿಗೆ ಮೂಲಭೂತ ಸೌಕರ್ಯಗಳು ಶುದ್ಧ ಕುಡಿಯುವ ನೀರು, ಪೌಷ್ಟಿಕ ಆಹಾರ, ಪಠ್ಯ ಪುಸ್ತಕ, ಸಮವಸ್ತ್ರ, ಸುಸಜ್ಜಿತ ಶೌಚಾಲಯ, ಶಾಲಾ ಕಟ್ಟಡಗಳು ಹಾಗೂ ಶಿಕ್ಷಕರು ನೇಮಕ,  ಆಟದ ಸಾಮಗ್ರಿಗಳು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೆಂಗಾ ಚೆಕ್ಕೆ, ಹಾಲು ಇವುಗಳನ್ನು ಸರಿಯಾಗಿ ನಿಡದೆ ಇರುವುದರಿಂದ ಶಾಲಾ ಶಿಕ್ಷಣ ವ್ಯವಸ್ಥೆಯು ಇಂದು ಕುಂಠಿತಗೊಂಡಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು  ಕಾರ್ಪೋರೇಟ್ ಖಾಸಗಿ ಶಿಕ್ಷಣ ಸಂಸ್ಥೆಗಳ ಕಡೆ ಮುಖ ಮಾಡುತ್ತಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರಗಳು ಶಿಕ್ಷಣ ಒಂದು ಸಾರ್ವತ್ರಿಕ ವ್ಯವಸ್ಥೆಯಾಗಿ ಉಳಿಸಿಕೊಳ್ಳಲು ವಿಫಲಗೊಂಡಿದೆ.” ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಫಲಶೃತಿ | ರಾಜ್ಯದಲ್ಲಿ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್‌ ಕಡ್ಡಾಯ

ಮನವಿ ಸಂದರ್ಭದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ಮುಖಂಡರು ಅನಿಲ ಆರ್, ಶರಣು ಮಾಟರಂಗಿ, ನಾಗರಾಜ, ಅಭಿಲಾಷ್ ರಾಠೋಡ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X