ಗದಗ | ಕಬ್ಬು ಇಳುವರಿ ವಾಸ್ತವ ಪರಿಶೀಲನೆಗೆ ತಂಡ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

Date:

Advertisements

ಜಿಲ್ಲೆಯಲ್ಲಿ ಕಬ್ಬು ಬೆಳೆದ ಪ್ರದೇಶಗಳಿಗೆ ಭೇಟಿ ನೀಡಿ  ರೈತರೊಂದಿಗೆ ಚರ್ಚಿಸಲು ಹಾಗೂ ಕಬ್ಬಿನ ಇಳುವರಿಯ ಕುರಿತು ವಾಸ್ತವತೆಯ ಪರಿಶೀಲನೆ ನಡೆಸಲು ತಂಡವನ್ನು ರಚಿಸಲಾಗಿದ್ದು ತಂಡದವರು ನಿಗದಿತ ಸಮಯದಲ್ಲಿಯೇ ಕಬ್ಬು ಬೆಳೆದ ಪ್ರದೇಶಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರದಂದು  ಈ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಬ್ಬಿನ ಇಳುವರಿ ಪರಿಶೀಲನೆ ಕಾಲಕ್ಕೆ ಸಕ್ಕರೆ ಕಾರ್ಖಾನೆಯವರು ಹಾಜರಿರುವುದು ಕಡ್ಡಾಯವಾಗಿದೆ. ಕಬ್ಬು ಕಟಾವು ಪ್ರಕ್ರಿಯೆಯನ್ನು ಜೇಷ್ಠತಾ ಆಧಾರದ ಮೇಲೆ ಜರುಗುವ ಕುರಿತು ಕ್ರಮ ಕೈಗೊಳ್ಳುವುದು. ಈ ಕುರಿತು ಸಕ್ಕರೆ ಕಾರ್ಖಾನೆಯವರು ಜೇಷ್ಠತಾ ಪಟ್ಟಿಯನ್ನು ತಂಡದ ಮುಖ್ಯಸ್ಥರಿಗೆ ಜೇಷ್ಠತಾ ಪಟ್ಟಿ ಸಲ್ಲಿಸಬೇಕು.

ಕಬ್ಬಿನ ಕಟಾವು ಸಮಯದಲ್ಲಿ  ಸ್ಥಳಕ್ಕೆ ಭೇಟಿ ನೀಡಿ ಗ್ಯಾಂಗ್ ಮನ್‍ಗಳಿಂದ, ಕೂಲಿಕಾರರಿಂದ, ಸಾಗಾಣಿಕೆದಾರರಿಂದ ಯಾವುದೇ ತೊಂದರೆಗಳಾಗದಂತೆ ಅಗತ್ಯ ಸೂಚನೆ ನೀಡಬೇಕು. ಕಬ್ಬು ಬೆಳೆಗೆ ಗೊಣ್ಣೆ ರೋಗದ ಭೇತಿ ಇರುವುದರಿಂದ ತಜ್ಞರೊಂದಿಗೆ ಸಮಾಲೋಚಿಸಿ ಅಗತ್ಯ ವೈಜ್ಞಾನಿಕ ಸಲಹೆಗಳನ್ನು ನೀಡಬೇಕು. ಕಬ್ಬು ಬೆಳೆಯ ಕಟಾವು ಪ್ರಕ್ರಿಯೆ ಪ್ರಾರಂಭದಿಂದ ಮುಗಿಯುವವರೆಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

Advertisements

ಕಬ್ಬು ಕಟಾವು ಪ್ರಕ್ರಿಯೆಯಲ್ಲಿ  ನಿಗದಿತ ದರಕ್ಕಿಂತ ಹೆಚ್ಚಿನ ಹಣದ ಅಮಿಷವೊಡ್ಡಿ ಜೇಷ್ಠತಾ ಪ್ರಕ್ರಿಯೆಯನ್ನು ಬದಲಿಸುವ  ಸಂಭವನೀಯತೆಯನ್ನು ತಡೆಗಟ್ಟಬೇಕು ಹಾಗೂ  ಕಟಾವು ಸಮಯದಲ್ಲಿ ರೈತರೊಂದಿಗೆ ಹಾಗೂ ಗ್ಯಾಂಗ್‍ಮನ್‍ಗಳೊಂದಿಗೆ ಮಾತನಾಡಿ ಮಾಡಿಕೊಂಡು ರೈತರಿಗೆ ಉಂಟಾಗಬಹುದಾದ ತೊಂದರೆಗಳನ್ನು ಹಾಗೂ ನಷ್ಟವನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದರು.

ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಗಂಗಪ್ಪ  ಅವರು ಮಾತನಾಡಿ ಪ್ರಸಕ್ತ ಸಾಲಿನ ಸಕ್ಕರೆ ಹಂಗಾಮಿಗೆ ಕೇಂದ್ರ ಸರ್ಕಾರದಿಂದ ನ್ಯಾಯಯುತ ಮತ್ತು ಲಾಭದಾಯಕ ( ಎಫ್.ಆರ್.ಪಿ) ದರವನ್ನು ನಿಗದಿಪಡಿಸಿದ್ದು, ಕಬ್ಬು ಅರಿಯುವ ಮುನ್ನ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಹಾಗೂ ಎಫ್.ಆರ್.ಪಿ ದರ ಹೆಚ್ಚಿಸುವ ಹಾಗೂ ಇತರೆ ವಿಷಯಗಳ ಕುರಿತು ಸಕ್ಕರೆ ಕಾರ್ಖಾನೆಯ ಮಂಡಳಿಯವರ ಹಾಗೂ ಕಬ್ಬು ಬೆಳೆಗಾರರ ಸಭೆಯನ್ನು ಜರುಗಿಸಲಾಗಿದೆ ಎಂದರು.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು  ಪರಿಶೀಲಿಸಲು ಹಾಗೂ ವಾಸ್ತವತೆ ಅರಿಯಲು   ಆಹಾರ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ, ಸಕ್ಕರೆ ಕಾರ್ಖಾನೆಯ ಅಧಿಕಾರಿಗಳನ್ನೊಳಗೊಂಡಂತೆ  4  ತಂಡಗಳನ್ನು ರಚಿಸಲಾಗಿದೆ.   ಉಪವಿಭಾಗಾದಿಕಾರಿಗಳು, ಜಂಟಿ ಕೃಷಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು,  ಮುಂಡರಗಿ ತಹಶೀಲ್ದಾರರು ಒಂದೊಂದು ತಂಡಗಳಿಗೆ ಮುಖ್ಯಸ್ಥರುಗಳಾಗಿರುತ್ತಾರೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ  ಡಾ. ವೆಂಕಟೇಶ ನಾಯ್ಕ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ , ಆಹಾರ ಮತ್ತು ನಾಘರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಗಂಗಪ್ಪ , ಎ.ಪಿ.ಎಂ.ಸಿ.ಯ ಸಹಾಯಕ ನಿರ್ದೇಶಕ ಎಂ.ಆರ್. ನದಾಫ್,  ವಿಜಯನಗರ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕರು,  ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X