ಹುಟ್ಟುಹಬ್ಬದ ದಿನದಂದು ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದ ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸ್ನೇಹಿತರು ಸಾವನ್ನಪ್ಪಿರುವ ದಾರುಣ ಘಟನೆಯು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ಘಟನೆ ನಡೆದಿದೆ.
ಮೃತರನ್ನು ಗದಗ ಜಿಲ್ಲೆಯ ಶಿರಹಟ್ಟಿಯ 34 ವರ್ಷದ ಶರಣಪ್ಪ ಬಡಿಗೇರ, 36 ವರ್ಷದ ಮಹೇಶ್ ಮತ್ತು 38 ವರ್ಷದ ಗುರುನಾಥ್ ಎಂದು ಗುರುತಿಸಲಾಗಿದೆ.
ಶರಣಪ್ಪ ನಾಲ್ವರು ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಾರೆ. ಆಂಜನೇಯನ ದರ್ಶನ ಪಡೆದು ಬಳಿಕ ನದಿಗೆ ಈಜಲು ಹೋಗಿದ್ದರು. ಈಜಲು ಬಾರದಿದ್ದರೂ ಶರಣಪ್ಪನ ಸ್ನೇಹಿತ ಮಹೇಶ್ ನದಿಗೆ ಇಳಿದಿದ್ದನು. ನೀರಿನ ಸೆಳೆತಕ್ಕೆ ಸಿಲುಕಿದ್ದ ಮಹೇಶನ್ ನನ್ನು ರಕ್ಷಿಸಲು ಶರಣಪ್ಪ ಹಾಗೂ ಗುರುನಾಥ್ ಮುಂದಾಗಿದ್ದಾರೆ. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಮೂವರು ನೀರು ಪಾಲಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಾವೇರಿ | ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ; ಸೌಜನ್ಯ ಪರ ಧ್ವನಿ ಎತ್ತಿದ ಸಮೀರ್ ಗೆ ಸೂಕ್ತ ರಕ್ಷಣೆ ಒದಗಿಸಲು ಡಿವೈಎಫ್ಐ ಆಗ್ರಹ
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ನದಿಯಲ್ಲಿ ಮುಳುಗಿರುವವರಿಗಾಗಿ ಶೋಧ ನಡೆಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.