ಗದಗ | ತಂಬಾಕು ನಿಯಂತ್ರಣ ತನಿಖಾ ದಳ ದಾಳಿ; ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ

Date:

ಗದಗ ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕೋಟ್ಟಾ ಕಾಯ್ದೆ ಉಲ್ಲಂಘನೆ ಹಿನ್ನೆಲೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ ನಡೆಸಿದೆ.

ಗದಗ  ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಥೋಡ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ಗದಗ, ಮುಂಡರಗಿ, ರೋಣ, ವತಿಯಿಂದ ಗದಗ ನಗರದ ಮುಳಗುಂದ ನಾಕಾ, ಜಿಲ್ಲಾ ಆಸ್ಪತ್ರೆ ಆವರಣ, ಅಂಜುಮನ್ ಕಾಲೇಜು ಎದುರು, ಹಾತಲಗೇರಿ ನಾಕಾ, ಅಡವಿಸೊಮಪುರ, ಲಕ್ಕುಂಡಿ, ಮುಂಡರಗಿ, ಗಜೇಂದ್ರಗಡ, ಮುಂಡರಗಿ ಕೊರ್ಲಳ್ಳಿ ಕ್ರಾಸ್, ಡಂಬಳ, ಇತರೆ ಸ್ಥಳಗಳಲ್ಲಿ ಕೋಟ್ಪಾ ದಾಳಿ ನಡೆಸಲಾಗಿದೆ.

ಈ ವೇಳೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು,  ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳಿಂದ ದೂರವಿರುವಂತೆ, ಚಟಕ್ಕೆ ಬಲಿಯಾಗದಂತೆ ಮಾಡುವ ಉದ್ದೇಶದಿಂದ ಶಾಲಾ ಕಾಲೇಜು ಆವರಣದಿಂದ 100 ಗಜದ ವರೆಗೆ ತಂಬಾಕು ಮಾರಾಟ ನಿಷೇಧ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಕುರಿತು ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಬಿತ್ತರಿಸುವದು ಅ ಸ್ಥಳದ ಮಾಲೀಕರ ಜಾವಾಬ್ದಾರಿಯಾಗಿರುತ್ತದೆ ಹಾಗೂ ಕೆಲವು ಅಂಗಡಿಗಳ ಹಿಂದೆ ಧೂಮಪಾನ ಅಡ್ಡಾಗಳನ್ನು ಮಾಡಿಕೊಂಡಿರುವವರ ವಿರುದ್ಧ ಕೂಡಾ ಕ್ರಮ ವಹಿಸಲಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದರಿಂದ ಅಮಾಯಕರ ಆರೋಗ್ಯದ ಮೇಲೆ ಪರಿಣಾಮಬೀರುತ್ತಿರುವದು ಕಂಡು ಬಂದಿದೆ, ತಂಬಾಕು ಕುರಿತ ಜಾಹೀರಾತು ನಿಷೇದಿಸುವದು, 18 ವರ್ಷದೋಳಗಿನವರಿಗೆ ತಂಬಾಕು ನಿಷೇಧಿಸುವದು, ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಶೇ.85ರಷ್ಟು ಆರೋಗ್ಯ ಎಚ್ಚರಿಕೆ ಚಿನ್ಹೆ ಕಡ್ಡಾಯ. ಈ ಕುರಿತು ಮಾಹಿತಿ ಹಾಗೂ ಜಾಗೃತಿ ಮೂಡಿಸಿ ಉಲ್ಲಂಘನೆ ಮಾಡಿದವರ ವಿರುದ್ಧ ಎಚ್ಚರಿಕೆ ನೀಡಿ ಒಟ್ಟು 83 ಪ್ರಕರಣ ದಾಖಲಿಸಿದ್ದು, ರೂ. 16,350 ದಂಡ ಸಂಗ್ರಹಿಸಿದ್ದಾರೆ.

ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಅದರ ಉಪಯೋಗ ಕೋಟ್ಪಾ ಕಾಯ್ದೆ ಅಡಿಯಲ್ಲಿ ಅವಕಾಶವಿದ್ದು ಅದನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತಿಕ್ರಮ ವಹಿಸಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಗೋಪಾಲ ಸುರಪುರ, ಪೊಲೀಸ್ ಇಲಾಖೆಯ ಬಿ.ಎನ್. ಚಳಗೆರಾ, ಎಂ.ಆಯ್. ಮುಲ್ಲಾ, ಎ.ಎಸ್.ಐ, ಕುಮಾರಸ್ವಾಮಿ, ಸಚಿನ್, ರೆಷ್ಮಾ ಬೆಗಂ ನಧಾಫ್, ವೈ.ಎನ್. ಕಡೆಮನಿ ಹಾಗೂ ಮುಂಡರಗಿ ತಾಲೂಕಾ ಆರೊಗ್ಯ ಶಿಕ್ಷಣಾಧಿಕಾರಿ ಮಂಜುಳಾ ಸಜ್ಜನ್, ಎಂ.ಎಂ. ದೊಡ್ಡಮನಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...