ಗದಗ | ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದ ಸಮಸ್ಯೆ ಬಗೆಹರಿಸುವಂತೆ ಮನವಿ

Date:

  • ವಿದ್ಯಾದಾನ ಶಿಕ್ಷಣ ಸಮಿತಿ ಆಡಳಿತ ಮಂಡಳಿಯಿಂದ ಬೆದರಿಕೆ
  • ಪತ್ರಿಕಾಗೋಷ್ಠಿಯಲ್ಲಿ ಯೂಸೂಪ್ ಮಜ್ಜಗಿ ಕುಟುಂಬ ಆರೋಪ

ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದ ಬಗ್ಗೆ ಎದ್ದಿರುವ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವಂತೆ ಮಜ್ಜಗಿ ಕುಟುಂಬದ ಸದಸ್ಯ ಯೂಸಫ್‌ ಮಜ್ಜಗಿ ಒತ್ತಾಯಿಸಿದ್ದಾರೆ.

ಗದಗ ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ಕರೆದು ಮಾತನಾಡಿರುವ ಅವರು, “ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನವು ಮಜ್ಜಗಿ ಕುಟುಂಬಕ್ಕೆ ಸೇರಿದ್ದು, 1946ರಲ್ಲಿ ವಿದ್ಯಾದಾನ ಶಿಕ್ಷಣ ಸಮಿತಿಗೆ ಮಜ್ಜಗಿ ಕುಟುಂಬದವರು 99 ವರ್ಷ ಬಾಡಿಗೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಬಾಡಿಗೆ ಹಣ ನೀಡಿಲ್ಲ, ಬಾಡಿಗೆ ಕೊಟ್ಟ ಸಂದರ್ಭದಲ್ಲಿ ಈ ಜಾಗದಲ್ಲಿ ಯಾವುದೇ ಕಟ್ಟಡ ಕಟ್ಟಬಾರದೆಂದು ಕರಾರು ಪತ್ರದಲ್ಲಿ ಇದ್ದರೂ ವಿವಿಧ ಕಟ್ಟಡಗಳನ್ನು ನಿರ್ಮಿಸಿ, ಕರಾರು ಪತ್ರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ರಾಮನಗರ | ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಯ ಕೊಲೆ; ಪುನೀತ್ ಕೆರೆಹಳ್ಳಿ ತಂಡದ ಮೇಲೆ ಎಫ್‌ಐಆರ್

“ಇಷ್ಟು ಮಾತ್ರವಲ್ಲದೆ ಇದೇ ಜಾಗದ ಮೇಲೆ ರೆಡ್ಡಿ ಸಹಕಾರಿ ಬ್ಯಾಂಕಿನಲ್ಲಿ 50 ಲಕ್ಷ ರೂಪಾಯಿ ಸಾಲ ಪಡೆದಿದ್ದಾರೆ ಹಾಗೂ ವಿದ್ಯಾದಾನ ಶಿಕ್ಷಣ ಸಮಿತಿ ಮಂಡಳಿಯ ಆಡಳಿತಕ್ಕೆ ಒಳಪಡುವ ಬಿಇಡಿ ಕಾಲೇಜಿಗೆ 33 ವರ್ಷ ಬಾಡಿಗೆ ಕೊಟ್ಟಿದ್ದು, ಇದ್ಯಾವ ಮಾಹಿತಿಯನ್ನು ಮೂಲ ಮಾಲೀಕರಿಗೆ ತಿಳಿಸದೇ ಬಾಡಿಗೆ ಕರಾರು ಪತ್ರದ ನಿಯಮ ಉಲ್ಲಂಘಿಸಿದ್ದಾರೆ” ಎಂದು ಕಿಡಿ ಕಾರಿದ್ದಾರೆ.

“ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನ ನಮ್ಮದೆಂದು ಕೇಳಿದರೆ, ರಾಜಕೀಯ ಬಲ, ಅಧಿಕಾರ ಬಲ ಹಾಗೂ ಹಣಬಲ ಇರುವ ಕೆಲವರು ಬೆದರಿಗೆ ಹಾಕುತ್ತಿದ್ದಾರೆ. ಇದರ ವಿರುದ್ಧ ಮಜ್ಜಗಿ ಕುಟುಂಬದವರು ಕೋರ್ಟ್‌ ಮೊರೆ ಹೋಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ದಲಿತ ಕಲಾ ಮಂಡಳಿ ಮುಖಂಡ ಶರೀಪ್ ಬಿಳಿಯಲಿ, ಮಜ್ಜಗಿ ಕುಟುಂಬದ ಸದಸ್ಯರು ಸೇರಿದಂತೆ ಹಲವರು ಹಾಜರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...

ಬೆಂಗಳೂರು | ನ. 29ರಂದು ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ-ಉರ್ದು ಕವಿಗೋಷ್ಠಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ...

ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ...

ಬೆಳಗಾವಿ | ನಿಗಮ-ಮಂಡಳಿ ಅಧ್ಯಕ್ಷರಿಗೆ ಸಂಪುಟ ಸ್ಥಾನಮಾನ; ಪಿಐಎಲ್‌ ದಾಖಲಿಸುವುದಾಗಿ ಎಚ್ಚರಿಕೆ

"ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನಗಳಿಂದ ವಂಚಿತರಾಗಿ ಅತೃಪ್ತರಾಗಿರುವ ಶಾಸಕರನ್ನು ಸಮಾಧಾನಪಡಿಸುವ ಸಲುವಾಗಿ,...