ಗದಗ | ಅನಧಿಕೃತ ಉಸುಗು ತುಂಬಿದ ಲಾರಿಗಳ ಸಂಚಾರ ನಿರ್ಬಂಧಿಸುವಂತೆ ಆಗ್ರಹ

Date:

Advertisements

ಬೆಳವಣಿಕೆ-ಕೌಜಗೇರಿ ಮಾರ್ಗವಾಗಿ ಹೊಳೆ ಆಲೂರು ತಲುಪುವ ರಸ್ತೆಯಲ್ಲಿ ಅನಧಿಕೃತ ಹೆಚ್ಚು ಭಾರದ ಉಸುಕು ತುಂಬಿಕೊಂಡು ಹೋಗುವುದರಿಂದ ರಸ್ತೆ ಹಾಳಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಕೃಷಿಕ ಸಮಾಜ ನವದೆಹಲಿ ರೈತ ಮುಖಂಡರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಕೃಷಿಕ ಸಮಾಜದ ರಾಜ್ಯ ಉಪಾಧ್ಯಕ್ಷ ಬಸವರಾಜ್ ಸಜ್ಜನರ ಮಾತನಾಡಿ, “ಹೊಳೆ ಆಲೂರಿನಿಂದ ಬೆಳವಣಿಕೆ ಗ್ರಾಮದವರೆಗಿನ ರಸ್ತೆ ಮೂರು ತಿಂಗಳ ಹಿಂದೆಯಷ್ಟೆ ನಿರ್ಮಾಣವಾಗಿದೆ. ಬೃಹತ್ ಲಾರಿಗಳು ಈ ರಸ್ತೆಯಲ್ಲಿ ಉಸುಗು ತುಂಬಿಕೊಂಡು ಓಡಾಡುತ್ತಿವೆ. ಇದರಿಂದ ರಸ್ತೆ ಹಾಳಾಗಿ, ಡಾಂಬರ್ ಕಿತ್ತು ಹೋಗುತ್ತಿದೆ‌. ಹಾಗಾಗಿ ಕೂಡಲೇ ಅನಧಿಕೃತ ಲಾರಿಗಳ ಓಡಾಟವನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಬಡವರಿಗೆ ಹಕ್ಕುಪತ್ರ ನೀಡಲು ಹಿಂದೇಟು; ಏಕಾಂಗಿ ಪ್ರತಿಭಟನೆಗಿಳಿದ ಗ್ರಾ.ಪಂ. ಉಪಾಧ್ಯಕ್ಷ

Advertisements

ಈ ಸಂದರ್ಭದಲ್ಲಿ ಕೃಷಿಕ ಸಮಾಜದ ಮುಖಂಡರು ಮೈಲಾರಪ್ಪ ಕುರಹಟ್ಟಿ, ನೀಲಪ್ಪ ಗೌಡ, ದ್ಯಾಪನಗೌಡ್ರು, ರಾಯನ ಗೌಡ್ರು ಬದಾಮಿ, ಸಿದ್ದಪ್ಪ ಸಜ್ಜನ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಶ್ರೀರಾಮ ಸೇನೆ

"ನಮ್ಮ ಸಂವಿಧಾನದ ರಾಷ್ಟ್ರ ಧ್ವಜದ ನಿಯಮಗಳಲ್ಲಿ ಒಂದು ನಿಯಮ ಇದೆ ಅದು...

ಗದಗ | ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಮಹನೀಯರ ಪಾತ್ರ ಅಪಾರ: ಸಚಿವ ಎಚ್.ಕೆ.ಪಾಟೀಲ

"ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಚಳುವಳಿಯ ಇತಿಹಾಸ ರೋಚಕವಾಗಿದ್ದು, ಜಿಲ್ಲೆಯ...

ಗದಗ | ದೇವರ ಹೆಸರಿನಲ್ಲಿ ಮೌಢ್ಯ, ಕಂದಾಚಾರ: ತಡೆಗಟ್ಟುವಂತೆ ಡಿಎಸ್ಎಸ್ ಮನವಿ

"ನರಗುಂದ ಪಟ್ಟಣದಲ್ಲಿ ದೇವರ ಹೆಸರುಗಳನ್ನು ಇಟ್ಟುಕೊಂಡು ಜನರಿಗೆ ಮೌಡ್ಯತೆ ಮತ್ತು ಕಂದಾಚಾರಗಳನ್ನು...

ಗದಗ | ಭಾವನೂರು ಗ್ರಾಮದಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಸಾರ್ವಜನಿಕರ ಜ್ಞಾನದಾಹ ನೀಗಿಸುವಲ್ಲಿ ಗ್ರಾಮೀಣ ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ...

Download Eedina App Android / iOS

X