ಗದಗ ಕ್ಷೇತ್ರದ ಶಾಸಕರೂ ಹಾಗೂ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್. ಕೆ. ಪಾಟೀಲ್ ಅವರು ರಾಜ್ಯದ ಅಭಿವೃದ್ಧಿಗೆ ಮತ್ತು ಪಕ್ಷದ ಸಂಘಟನೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಅವರ ದೀರ್ಘಕಾಲದ ಅನುಭವ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿಯನ್ನು ಪರಿಗಣಿಸಿ, ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನವನ್ನು ನೀಡಬೇಕು” ಎಂದು ಗದಗ ತಾಲೂಕಾ ಪಂಚ ಗ್ಯಾರಂಟಿ ಪ್ರಾಧಿಕಾರ ಸದಸ್ಯರು ಸಾವಿತ್ರಿ. ಜಿ. ಹೂಗಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
“ಎಚ್ ಕೆ. ಪಾಟೀಲ್ ಅವರಿಗೆ ಎರಡನೇ ಹಂತದಲ್ಲಾದರೂ ಸಚಿವ ಸ್ಥಾನ ಕೊಡಬೇಕೇಂದು ಕಾಂಗ್ರೆಸ್ ಪಕ್ಷದ ಹೈಕಮಾಂಡರ್ ಶ್ರೀಮತಿ ಸೋನಿಯಾ ಗಾಂಧಿ, ರಾಹುಲಗಾಂಧೀಜಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರವರಿಗೆ ಮನವಿ ಮಾಡಿದ್ದಾರೆ.
ಹಿರಿಯ ಮುತ್ಸದ್ದಿಯಾಗಿರುವ ಇವರ ಸೇವೆ ರಾಜ್ಯದ ಜನತೆಗೆ ಮತ್ತು ಗದಗ ಜಿಲ್ಲೆಯ ಪ್ರಗತಿಗೆ ಅತ್ಯಂತ ಅಗತ್ಯವಾಗಿರುತ್ತದೆ. ಈ ಕುರಿತು ಸೂಕ್ತ ಕ್ರಮ ಕೈಗೊಂಡು, ಎಚ್. ಕೆ. ಪಾಟೀಲ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ.




