ಗದಗ | ಸತ್ಕಾರ್ಯಗಳಿಗೆ ಸಮುದಾಯ ಭವನ ಸದ್ಬಳಕೆಯಾಗಲಿ: ಸಚಿವ ಎಚ್.ಕೆ ಪಾಟೀಲ

Date:

Advertisements

ಹತ್ತು ಹಲವು ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಗಳಿಗೆ ಅನುಕೂಲವಾಗಲು ಸರ್ಕಾರದ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಸಮುದಾಯ ಭವನಗಳು ಸತ್ಕಾರ್ಯಗಳಿಗೆ ಸದ್ಬಳಕೆಯಾಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಖಾತೆಯ ಸಚಿವ ಡಾ.ಎಚ್.ಕೆ ಪಾಟೀಲ ಹೇಳಿದರು.

ಗದಗ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಮೈಲಾರಲಿಂಗೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ದೇವಸ್ಥಾನ ನಿರ್ಮಾಣದಿಂದ ಗ್ರಾಮದಲ್ಲಿ ಧರ್ಮ ಜಾಗೃತಿ, ಪರಸ್ಪರರಲ್ಲಿ ಸೌಹಾರ್ದತೆ ಬೆಳೆಯಬೇಕು. ಆ ನಿಟ್ಟಿನಲ್ಲಿ ಸರ್ಕಾರ ನೀಡಿದ ಹಣದಿಂದ ಇಂಥಹ ಗುಣಮಟ್ಟದ ಕಾಮಗಾರಿಗಳು ನಡೆಯಬೇಕು. ಗ್ರಾಮೀಣ ಭಾಗ ಅಭಿವೃದ್ಧಿ ಹೊಂದಬೇಕು” ಎಂದರು.

ಮುಕ್ತಿಮಂದಿರದ ವಿಮಲ ರೇಣುಕ ವೀರ ಮುಕ್ತಿಮಿನಿ ಶಿವಾಚಾರ್ಯ ಸ್ವಾಮಿಜಿ ಸಾನಿದ್ಯ ವಹಿಸಿ ಮಾತನಾಡಿರು. “ಮನುಷ್ಯ ಇಂದು ಧರ್ಮವಂತನಾಗಿ ಬಾಳುವುದನ್ನು ಕಲಿಯಬೇಕು. ಮೈಲಾರಲಿಂಗೇಶ್ವರ ಸಾಕ್ಷಾತ್ ಶಿವನ ಅವತಾರ ಅಂಥ ಜಾಗೃತ ತಾಣದಲ್ಲಿ ನಿತ್ಯ ಪೂಜಾ ಕೈಂಕರ್ಯಗಳು, ಧಾರ್ಮಿಕ ವಿಧಾನಗಳು ನಡೆಯಬೇಕು. ದೇವಸ್ಥಾನದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೋಬ್ಬರು ಧರ್ಮದ ಹಾದಿಯಲ್ಲಿ ನಡೆದಾಗ ಜೀವನ ಸಾರ್ಥಕವಾಗುವುದು” ಎಂದರು.

Advertisements

ಕಾರ್ಯಕ್ರಮದಲ್ಲಿ ಕೆಆರ್‌ಐಡಿಎಲ್‌ನ ಅನಿಲ ಹಾಗೂ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಶಿರೋಳ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಲಡ್ಡುಮುತ್ಯಾ ಸ್ವಾಮಿಜಿ, ಅಪ್ಪಣ್ಣ ಇನಾಮತಿ, ಎಂ.ಡಿ. ಬಟ್ಟೂರ, ಬಸವರಾಜ ಬಡ್ನಿ, ಹೇಮರಡ್ಡಿ ಹೊಸಮನಿ, ಫಕೀರೇಶ ಹಿರೇಮನಿ, ಬಿ.ವ್ಹಿ. ಸುಂಕಾಪೂರ, ದೇವಸ್ಥಾನ ಸಮಿತಿಯ ಮಹೇಶ ಕರಕಣ್ಣವರ, ಜಗನ್ನಾಥ ಕಮ್ಮಾರ, ಯಲ್ಲರಡ್ಡಿ ನೀಲಣ್ಣವರ, ನಿಂಗರಡ್ಡಿ ಚಿಕ್ಕರಡ್ಡಿ, ಗಂಗಪ್ಪ ಕತ್ತಿ, ಪ್ರಕಾಶ ನೀಲಣ್ಣವರ, ಮಂಜುನಾಥ ಕಮ್ಮಾರ, ಲಿಂಗರಾಜ ಕೈಹುಟ್ಟಿನ, ಸಿದ್ಧಲಿಂಗೇಶ ಕರಕಣ್ಣವರ, ಮಹಾಂತೇಶ ಮರ್ಚಣ್ಣವರ, ಮಲ್ಲಪ್ಪ ನಾರಾಯಣಪೂರ, ವೀರಪ್ಪ ಮುಶಣ್ಣವರ, ರಮೇಶ ಕಮ್ಮಾರ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅರ್ಹ ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳು ದೊರೆಯಬೇಕು: ಬಾಲು ರಾಠೋಡ

"ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ಸಾಮಾಜಿಕ ಭದ್ರತೆ ಅಡಿಯಲ್ಲಿ ಮಂಡಳಿ ರಚನೆ ಮಾಡಬೇಕು....

ಗದಗ | ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಶ್ರೀರಾಮ ಸೇನೆ

"ನಮ್ಮ ಸಂವಿಧಾನದ ರಾಷ್ಟ್ರ ಧ್ವಜದ ನಿಯಮಗಳಲ್ಲಿ ಒಂದು ನಿಯಮ ಇದೆ ಅದು...

ಗದಗ | ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಮಹನೀಯರ ಪಾತ್ರ ಅಪಾರ: ಸಚಿವ ಎಚ್.ಕೆ.ಪಾಟೀಲ

"ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಚಳುವಳಿಯ ಇತಿಹಾಸ ರೋಚಕವಾಗಿದ್ದು, ಜಿಲ್ಲೆಯ...

ಗದಗ | ದೇವರ ಹೆಸರಿನಲ್ಲಿ ಮೌಢ್ಯ, ಕಂದಾಚಾರ: ತಡೆಗಟ್ಟುವಂತೆ ಡಿಎಸ್ಎಸ್ ಮನವಿ

"ನರಗುಂದ ಪಟ್ಟಣದಲ್ಲಿ ದೇವರ ಹೆಸರುಗಳನ್ನು ಇಟ್ಟುಕೊಂಡು ಜನರಿಗೆ ಮೌಡ್ಯತೆ ಮತ್ತು ಕಂದಾಚಾರಗಳನ್ನು...

Download Eedina App Android / iOS

X