ಗದಗ ನಗರದ ರಹಮತ್ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿರುವ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟದಟಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟಿಲ್ ಅವರು ಮೃತ ಬಾಲಕರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಚೆಕ್ ವಿತರಣೆ ಮಾಡಿದರು.
ಗದಗನ ರೆಹಮತ್ ನಗರದ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿರುವ ಹೊಂಡದಲ್ಲಿ ಆಗಸ್ಟ್ 15ರಂದು ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಆಗಸ್ಟ 15 ರಂದು ನಡೆದಿತ್ತು. ರೆಹಮತ್ ನಗರದ ಮಹಮದ್ ಅಮೀನ್(12) ಹಾಗೂ ಸಂತೋಷ ಕುಂಬಾರ(14) ಎಂಬ ಬಾಲಕರು ಮೃತಪಟ್ಟಿದ್ದರು.
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟಿಲ್, ಮುಖ್ಯಮಂತ್ರಿಯವರು ಮೃತ ಬಾಲಕರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ನೀಡುವ ಭರವಸೆ ನೀಡಿದ್ದರು. ಅಲ್ಲದೇ ಅಂದು ಮೃತ ಬಾಲಕರ ಮನೆಗಳಿಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನವನ್ನೂ ಹೇಳಿದ್ದರು. ಇದೀಗ ಪರಿಹಾರ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಮೃತ ನಗರೋತ್ಥಾನ ಯೋಜನೆ; ಕಾಮಗಾರಿ ಪರಿಶೀಲನಾ ಸಭೆ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕೃಷ್ಣ ಪರಾಪೂರ, ಪ್ರಭು ಬುರಬುರೇ, ಬಿ ಬಿ ಅಸೂಟಿ, ಅಶೋಕ ಮಂದಾಲಿ, ಎಸ್ ಎನ್ ಬಳ್ಳಾರಿ ಸೇರಿದಂತೆ ಇತರರು ಇದ್ದರು.