ಗದಗ | ಆಯೋಜಕರ ಬೇಜವಬ್ದಾರಿ ಧೋರಣೆ; ಮೂಲ ಸೌಕರ್ಯವಿಲ್ಲದೆ ಕ್ರೀಡಾಪಟುಗಳ ಆಕ್ರೋಶ

Date:

ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಬಂದಿದ್ದ ಕ್ರೀಡಾಪಟುಗಳು ಆಯೋಜಕರ ಬೇಜವಬ್ದಾರಿತನದಿಂದಾಗಿ ಬೇಸತ್ತಿದ್ದಾರೆ. ಅಗತ್ಯ ಮೂಲ ಸೌಲಭ್ಯಗಳು ದೊರೆಯದೆ, ರಸ್ತೆ ಬದಿಯಲ್ಲಿ ಕಾದು ಕುಳಿತು ಕ್ರೀಡೆಯೇ ಬೇಡಪ್ಪಾ ಎಂಬ ಪರಿಸ್ಥಿತಿ ಅನುಭವಿಸಿದ್ದಾರೆ.

- Advertisement -

ಗದಗ ನಗರದಲ್ಲಿ ಶನಿವಾರದಿಂದ ಪಿಯುಸಿ ಕಾಲೇಜುಗಳ ರಾಜ್ಯ ಪಟ್ಟದ ಹಾಕಿ ಕ್ರೀಡಾಕೂಟ ನಡೆಯಲಿದೆ. ಅದಕ್ಕಾಗಿ ರಾಜ್ಯದ ನಾನಾ ಭಾಗಗಳಿಂದ ವಿದ್ಯಾರ್ಥಿಗಳು ನಗರಕ್ಕೆ ಬಂದಿದ್ದಾರೆ. ಆದರೆ, ಬರುವ ವಿದ್ಯಾರ್ಥಿಗಳಿಗೆ ಸರಿಯಾದ ವ್ಯವಸ್ಥೆ ಒದಗಿಸುವಲ್ಲಿ ಆಯೋಜಕು ವಿಫಲರಾಗಿದ್ದು, ವಿದ್ಯಾರ್ಥಿಗಳು ಸುಸ್ತಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪದವಿ ಪೂರ್ವ ಶಿಕ್ಷಣ ಇಲಾಖೆಯ ಗದಗ ವಿಭಾಗವು ಕ್ರೀಡಾಪಟುಗಳಿಗೆ ಅಗತ್ಯ ವ್ಯವಸ್ಥೆ ಒದಗಿಸುವ ಜವಾಬ್ದಾರಿ ಹೊತ್ತಿತ್ತು. ಆದರೆ, ಬರುವ ವಿದ್ಯಾರ್ಥಿಗಳಿಗೆ ವಸತಿ, ಉಪಹಾರ, ಊಟ, ನೀರು, ವಾಹನ ಪ್ರಮುಖ ಸೌಲಭ್ಯಗಳನ್ನು ಒದಗಿಸಬೇಕಿತ್ತು. ಆದರೆ, ಯಾವ ಸೌಲಭ್ಯಗಳು ವ್ಯವಸ್ಥಿತವಾಗಿ ದೊರೆಯದ ಕಾರಣ, ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಳಗಿನ ಜಾವವೇ ಗದಗಕ್ಕೆ ವಿದ್ಯಾರ್ಥಿಗಳು ಬಂದಿದ್ದಾರೆ. ರಾತ್ರಿ ಇಡೀ ಪ್ರಯಾಣ ಮಾಡಿಕೊಂಡು ಬಂದ ವಿದ್ಯಾರ್ಥಿಗಳಿಗೆ ಎಲ್ಲಿಗೆ ಹೋಗಬೇಕು. ಎಲ್ಲಿ ಉಳಿಯಬೇಕು ಎಂಬುದರ ಮಾಹಿತಿಯೂ, ಸೌಲಭ್ಯವೂ ದೊರೆಯದೆ, ಬಸ್‌ ನಿಲ್ದಾಣ, ರೈಲು ನಿಲ್ದಾಣ, ಕ್ರೀಡಾಂಗಣಗಳಲ್ಲಿಯೇ ಕಾದು ಕುಳಿತಿದ್ದರು.

ತಡವಾಗಿ ಕೊಠಡಿಗಳನ್ನು ನೀಡಿದರೂ, ಅವುಗಳು ಶುಚಿಯಾಗಿಲ್ಲ. ಗಬ್ಬುನಾರುತ್ತಿವೆ. ಕುಡಿಯುವ ನೀರು, ಊಟದ ವ್ಯವಸ್ಥೆ ಕೂಡ ಸರಿಯಾಗಿ ಆಗಿರಲಿಲ್ಲ ಎಂದು ಕ್ರೀಡಾಪಟುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...