ಗದಗ | ಎಂ.ಡಿ ಗೋಗೇರಿ ಅವರ ಬದುಕು-ಬರಹ ವಿಶೇಷ ಉಪನ್ಯಾಸ ಕಾರ್ಯಕ್ರಮ

Date:

ಮಕ್ಕಳ ಸಾಹಿತ್ಯ, ಹಾಸ್ಯ, ವಿಡಂಬನೆ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಕವಿ ಎಂ.ಡಿ ಗೋಗೇರಿ ಅವರು ಮುಸ್ಲಿಂ ದೇಹ – ಕನ್ನಡ ಮನಸ್ಸು ಹೊಂದಿದವರಾಗಿದ್ದರು ಎಂದು ಪ್ರಾಧ್ಯಾಪಕ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೋಗೇರಿ ಗಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಸಾಪ ಆಯೋಜಿಸಿದ್ದ ಎಂ.ಡಿ ಗೋಗೇರಿ ಅವರ ಬದುಕು-ಬರಹ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಶಿಕ್ಷಣ ಕ್ಷೇತ್ರದಲ್ಲಿ ಹಗಲಿರುಳು ಕೆಲಸ ಮಾಡುತ್ತಾ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ ಗೋಗೇರಿ ಅವರು ಇಂದಿನ ಪೀಳಿಗೆಯವರಿಗೆ ಮಾದರಿಯಾಗಿದ್ದಾರೆ. ಕನ್ನಡ ಭಾಷಾ ಸಂಸ್ಕೃತಿಯ ಜೊತೆಗೆ ಸೌಹಾರ್ದ ಸಂಸ್ಕೃತಿಗೂ ಆದ್ಯತೆ ನೀಡಿದ್ದರು. ಇಂದಿಗೂ ಮಕ್ಕಳ ಸಾಹಿತ್ಯದ ರತ್ನತ್ರಯರ ಸಾಲಿನಲ್ಲಿ ಗೋಗೇರಿ ಅವರು ಇರುವುದು ಕನ್ನಡ ಸಾಹಿತ್ಯಕ್ಕೆ ಹೆಮ್ಮೆಯ ಗರಿ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾರ್ಯಕ್ರಮದಲ್ಲಿ ಮಾತನಾಡಿದ ಗದಗ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, “ಗದಗ ಜಿಲ್ಲೆಯ ಸಮನ್ವಯ ಕವಿ ಎಂ.ಡಿ ಗೋಗೇರಿ ಅವರ ಎಲ್ಲ ಕೃತಿಗಳನ್ನು ಮರು ಮುದ್ರಣ ಮಾಡಿ ಮಕ್ಕಳಿಗೆ ಓದುವ ಸದಾವಕಾಶ ಮಾಡಬೇಕು. ಅವರ ಕೃತಿಗಳು ಎಲ್ಲ ಕಾಲಕ್ಕೂ ಪ್ರಸ್ತುತವಾಗಿವೆ. ಅವರ ಹೆಸರಿನಲ್ಲಿ ದತ್ತಿ ನಿಧಿ ಸ್ಥಾಪಿಸಿ ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ಜಿಲ್ಲೆಯ ಸಾಹಿತಿಗಳನ್ನು ಗುರುತುಸಿ ಪ್ರಶಸ್ತಿ ನೀಡುವ ಕೆಲಸವಾಗಬೇಕು” ಎಂದರು.

ಕಾರ್ಯಕ್ರಮದಲ್ಲಿ ಕಸಾಪ ತಾಲೂಕು ಅಧ್ಯಕ್ಷ ಅಮರೇಶ ಗಾಣಗೇರ, ಕವಿ ರಂಜಾನ ಹೆಬಸೂರ, ಗ್ರಾಮದ ಹಿರಿಯರಾದ ಬಸವರಾಜ ಮೂಲಿಮನಿ, ಹೇಮಾಪತಿ ಭೋಸಲೆ, ಕೆ ಎಂ ಅಡವಿ ಕೆ ಎಸ್ ಕೋಡತಗೇರಿ
ಮಲ್ಲಿಕಾರ್ಜುನ ಗಾರಗಿ, ಶಿಕ್ಷಕ ಆರ್ ಕೆ ಬಾಗವಾನ ಇದ್ದರು. ಸಮಾರರಂಭದಲ್ಲಿ ಮುಖ್ಯೋಪಾಧ್ಯರಾದ ಕೆ ಎಸ್ ರಾಜೂರ, ಆರ್ ಆಯ್ ಬಾಗವಾನ, ಕ.ಸಾ.ಪ ಸದಸ್ಯರಾದ ಗಂಗಪ್ಪ ಗುಂಡೆ, ಎಂ ಡಿ ಬಾಗವಾನ, ಕೆ ಕೆ ಬಾಗವಾನ ಬಸವರಾಜ ಮಾದರ ವಜೀರ ನಧಾಪ್ ಇದ್ದರು. ಶಿಕ್ಷಕರಾದ ಪರಶು ಹೋರಪೇಟಿ ನಿರೂಪಿಸಿದು, ಬಿ ಎಸ್ ಬಳಿಗೇರ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ...