ಉಡುಪಿ | ಗಾಂಧಿಯನ್ನು ಸಂತನಾಗಿ ಅಲ್ಲ, ರಾಜಕಾರಣಿಯಾಗಿ ನೋಡುವ ಸಮಯ ಬಂದಿದೆ : ಉದಯ ಗಾಂವಕಾರ

Date:

Advertisements

ಸ್ವಾತಂತ್ರ್ಯಪೂರ್ವಕ್ಕಿಂತಲೂ ಭೀಕರವಾದ ಕಾನೂನುಗಳು ಇಂದಿನ ಭಾರತದಲ್ಲಿ ಅಸ್ತಿತ್ವದಲ್ಲಿದ್ದರೂ, ಇಂದಿನ ಹೋರಾಟವನ್ನು ಜನಪರವಾಗಿ ಅರ್ಥ ಮಾಡಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ ಎಂದು ಚಿಂತಕರಾದ ಉದಯ ಗಾಂವಕಾರ ಹೇಳಿದರು.

ಉಡುಪಿ ರಥಬೀದಿ ಗೆಳೆಯರು ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಶನಿವಾರ ಉಡುಪಿ ಎಂಜಿಎಂ ಕಾಲೇಜಿನ ಧ್ವನ್ಯಲೋಕದಲ್ಲಿ ಆಯೋಜಿಸಲಾದ “ಗಾಂಧಿ ಇಂದಿಗೆ ನಾಳೆಗೆ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮುಂದುವರೆದು ಮಾತನಾಡಿದ ಅವರು, “ಜನಬೆಂಬಲವಿಲ್ಲದೆ ಗಾಂಧಿಗೆ ಅಂದು ಹೋರಾಟ ನಡೆಸುವುದು ಅಸಾಧ್ಯವಾಗುತ್ತಿತ್ತು. ಅವರ ರಾಜಕೀಯ ಆಸಕ್ತಿ ಮತ್ತು ಜನಸಂಪರ್ಕ ಕೌಶಲ್ಯದಿಂದ ಜನರ ವಿಶ್ವಾಸವನ್ನು ಗೆದ್ದು, ಸ್ವಾತಂತ್ರ್ಯ ಚಳವಳಿಯನ್ನು ಜನಚಳವಳಿಯನ್ನಾಗಿ ಪರಿವರ್ತಿಸಲು ಸಾಧ್ಯವಾಯಿತು. ಆದ್ದರಿಂದ ಗಾಂಧಿಯನ್ನು ಕೇವಲ ಸಂತನಾಗಿ ನೋಡಬಾರದು, ರಾಜಕಾರಣಿಯಾಗಿ ವಿಶ್ಲೇಷಿಸಬೇಕಾಗಿದೆ,” ಎಂದು ಹೇಳಿದರು. ಅವರು ಇಂದಿನ ಹೋರಾಟಗಳ ಅಗತ್ಯವನ್ನು ಸ್ಮರಿಸುತ್ತಾ, “ಜನರ ಪ್ರಶ್ನೆಗಳನ್ನು ಜನರೇ ಉಚ್ಛರಿಸಬೇಕಾದ ಕಾಲ ಬಂದಿದೆ. ಗಾಂಧಿಯ ಮಾರ್ಗದಲ್ಲೇ ಸಾಗುವುದರಿಂದ ಮಾತ್ರ ಜನರ ಭರವಸೆ ಪುನಃ ಪಡೆಯಲು ಸಾಧ್ಯ,” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಥಬೀದಿ ಗೆಳೆಯರು ಅಧ್ಯಕ್ಷರಾದ ಉದ್ಯಾವರ ನಾಗೇಶ್ ಕುಮಾರ್ ವಹಿಸಿದ್ದರು. ಕಾರ್ಯದರ್ಶಿ ಸುಬ್ರಹ್ಮಣ್ಯ ಜೋಶಿ ಕಾರ್ಯಕ್ರಮವನ್ನು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X