ಬೀದರ್ | ಚಳಕಾಪುರ ಹನುಮಾನ ಜಾತ್ರೆಯಲ್ಲಿ ಗುಂಪು ಘರ್ಷಣೆ: ಶಾಂತಿ ಸ್ಥಾಪನೆಗೆ ಖಂಡ್ರೆ ಮನವಿ

Date:

Advertisements

ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಎರಡು ಸಮುದಾಯದವರ ನಡುವೆ ನಡೆದಿರುವ ಗುಂಪು ಘರ್ಷಣೆಯಿಂದ ತೀವ್ರ ಆಘಾತವಾಗಿದ್ದು, ಶಾಂತಿ ಮರು ಸ್ಥಾಪನೆಗೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಮನವಿ ಮಾಡಿದ್ದಾರೆ.

‘ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತರೆಲ್ಲರೂ ಸಹೋದರರಂತೆ ಬಾಳುತ್ತಿರುವ ಬೀದರ್ ಜಿಲ್ಲೆ ಸರ್ವ ಜನಾಂಗದ ಶಾಂತಿಯ ತೋಟವೆಂದು ಹೆಸರಾಗಿದೆ. ಜಾತಿಯತೆಯ ನಿರ್ಮೂಲನೆಗೆ ಶ್ರಮಿಸಿದ ಬಸವಾದಿ ಶರಣರ ನಾಡಿನಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಅಪಾರ ಗೌರವ ನೀಡಲಾಗುತ್ತದೆ. ಇಂತಹ ಭಾವೈಕ್ಯತೆಯ ನೆಲದಲ್ಲಿ ನಡೆಯುವ ಸಣ್ಣ ಘಟನೆಗಳು ಜಿಲ್ಲೆಯ ಖ್ಯಾತಿಗೆ ಕಳಂಕ ತರುತ್ತವೆ’ ಎಂದು ಬುಧವಾರ ತಿಳಿಸಿದ್ದಾರೆ.

‘ಚಳಕಾಪುರದಲ್ಲಿ ಆಗಿರುವ ಕಹಿ ಘಟನೆ ಮರೆತು ಎಲ್ಲರೂ ಶಾಂತಿ ಮರು ಸ್ಥಾಪನೆಗೆ ಪ್ರಯತ್ನಶೀಲರಾಗಬೇಕು. ಗ್ರಾಮದಲ್ಲಿ ನಡೆದಿರುವ ಘಟನೆ ಅತ್ಯಂತ ನೋವಿನ ಸಂಗತಿ. ಸಮಾಜದ ಸ್ವಾಸ್ಥ್ಯ ಕದಡದಂತೆ, ಶಾಂತಿಗೆ ಭಂಗ ಬಾರದಂತೆ ಪ್ರಜ್ಞಾವಂತರಾದ ಬೀದರ್ ಜಿಲ್ಲೆಯ ಜನತೆ ಸಹಕರಿಸಬೇಕು’ ಎಂದು ಕೋರಿದ್ದಾರೆ.

Advertisements

‘ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿ, ಶಾಂತಿ ಸಭೆ ನಡೆಸಿ, ಶಾಂತಿ ಮರುಸ್ಥಾಪಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಚಳಕಾಪುರದ ಹನುಮಾನ ಜಾತ್ರೆ ಸಂದರ್ಭದಲ್ಲಿ ನ.3ರಂದು ಪರಿಶಿಷ್ಟ ಜಾತಿ ಹಾಗೂ ಸವರ್ಣಿಯರ ಮಧ್ಯೆ ಗುಂಪು ಘರ್ಷಣೆ ನಡೆದಿದ್ದು, ಎರಡೂ ಕಡೆಯವರ ವಿರುದ್ಧ ಖಟಕ ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X